ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ನಗರದ ಹಲವೆಡೆ ಶನಿವಾರ ಸಂಚಾರ ದಟ್ಟಣೆ ಉಂಟಾಗಿತ್ತು. ಶನಿವಾರ ಸಿಇಟಿ ಇದ್ದ ಕಾರಣ ಮೆಜೆಸ್ಟಿಕ್ನಿಂದ ಪರೀಕ್ಷಾ ಕೇಂದ್ರಕ್ಕೆ ತಲುಪಲು ಪರದಾಡುತ್ತಿದ್ದ ವಿದ್ಯಾರ್ಥಿಯನ್ನು ಪೊಲೀಸರು ಕೋರಮಂಗಲಕ್ಕೆ ಸುರಕ್ಷಿತವಾಗಿ ತಲುಪಿಸಿದ್ದಾರೆ.
ಶರವಣ ಕುಮಾರ್ ಎಂಬ ವಿದ್ಯಾರ್ಥಿಯೊಬ್ಬನಿಗೆ ಪೊಲೀಸರು ಸಹಾಯ ಮಾಡಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಕೇವಲ 15 ನಿಮೀಷದಲ್ಲಿ ವಿದ್ಯಾರ್ಥಿಯನ್ನು ಬೆಂಗಳೂರು ಪೊಲೀಸರು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ್ದಾರೆ. ಹೊಯ್ಸಳ ಚಾಲಕ ಎಸ್ ಟಿ ಸೋಮಶೇಖರ್, ಹೆಡ್ ಕಾನ್ಸ್ಟೆಬಲ್ ಗೌರೀಶ್ ನೇತೃತ್ವದಲ್ಲಿ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ್ದಾರೆ.
ಶರವಣ ಕುಮಾರ್ ಅವರು ಮೆಜೆಸ್ಟಿಕ್ನಲ್ಲಿ ಸಿಲುಕಿಕೊಂಡು ಕೋರಮಂಗಲದಲ್ಲಿರುವ ತನ್ನ ಪರೀಕ್ಷಾ ಕೇಂದ್ರಕ್ಕೆ ಹೋಗಲು ಕಷ್ಟಪಡುತ್ತಿದ್ದರು. ಪರೀಕ್ಷಾ ಕೇಂದ್ರ 10-11 ಕಿ.ಮೀ ದೂರದಲ್ಲಿರುವುದನ್ನು ಗಮನಿಸಿದ ಹೊಯ್ಸಳ ಪೊಲೀಸರು ಆತನಿಗೆ ನೆರವಾಗಿದ್ದು, ವಿದ್ಯಾರ್ಥಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಿ, ಪರೀಕ್ಷೆ ಬರೆದಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಚೀನಾ ಮೂಲದ ಶಿಕ್ಷಣ ಸಂಸ್ಥೆ ಮೇಲೆ ಇ.ಡಿ ದಾಳಿ