ಎಎಪಿಯಿಂದ ‘ಕಾವೇರಿ ನಮ್ಮದು’ ಧರಣಿ ಸತ್ಯಾಗ್ರಹ

Date:

“ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಾದ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕುಡಿಯಲು ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗಿದೆ. ಈಗಾಗಲೇ ರಾಜ್ಯದಲ್ಲಿ ಸಂಕಷ್ಟ ಪರಿಸ್ಥಿತಿಯಲ್ಲಿದ್ದು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ತಕ್ಷಣ ನಿಲ್ಲಿಸಬೇಕು” ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.

- Advertisement -

ಕಾವೇರಿ ಸಮಸ್ಯೆ ಬಗೆಹರಿಯುವ ತನಕ ಪ್ರತಿದಿನ ಮೌನ ಧರಣಿ ಮಾಡಲು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹಾಗೂ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ತೀರ್ಮಾನಿಸಿದೆ. ಅದರಂತೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ‘ಕಾವೇರಿ ನಮ್ಮದು’ ಧರಣಿ ಸತ್ಯಾಗ್ರಹ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ವೇಳೆ ಮಾತನಾಡಿದ ಅವರು, “ಕಾವೇರಿ ನೀರಿನ ಸಮಸ್ಯೆಗೆ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಮೂರು ಪಕ್ಷಗಳು ಕಾರಣ. ಸಿಎಂ ಸಿದ್ಧರಾಮಯ್ಯ ಅವರು ತಕ್ಷಣ ಅಧಿವೇಶನ ಕರೆಯಬೇಕು. ನೀರು ಬಿಡುತ್ತಿಲ್ಲ ಎಂದು ಅವರು ಹೇಳುತ್ತಿದ್ದರೂ ತಮಿಳುನಾಡಿಗೆ ನೀರು ಹರಿದು ಹೋಗುತ್ತಿದೆ. ಈ ಬಗ್ಗೆ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿಜ ಏನೆಂದು ಹೇಳಬೇಕು” ಎಂದು ಒತ್ತಾಯಿಸಿದರು.

“ಕೇಂದ್ರ ಸರ್ಕಾರ, ಪ್ರಾಧಿಕಾರಗಳು ಮತ್ತು ನ್ಯಾಯಾಲಯ ಕೂಡ ರಾಜ್ಯದ ವಿಚಾರದಲ್ಲಿ ತಾರತಮ್ಯ ತೋರುತ್ತಿದ್ದು, ತಮಿಳುನಾಡಿಗೆ ಹೆಚ್ಚಿನ ಬೆಂಬಲ ನೀಡುತ್ತಿವೆ ಎನ್ನುವ ದೂರು ಕೇಳಿಬಂದಿದೆ” ಎಂದರು.

“ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಬೆಂಗಳೂರಿಗೆ ಹೆಚ್ಚು ಸಮಸ್ಯೆಯಾಗುವ ಕಾರಣ ಎಲ್ಲ ಭಾಗಗಳಿಗೆ ತೊಂದರೆ ಕೊಡುವುದು ಬೇಡ ಎಂದು ಕಾವೇರಿ ಜಲಾನಯನ ವ್ಯಾಪ್ತಿಯ ಪ್ರದೇಶದಲ್ಲಿ ಮಾತ್ರ ಬಂದ್ ಮಾಡಲಾಯಿತು. ಜನ ಕೂಡ ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ಕೊಟ್ಟಿದ್ದಾರೆ” ಎಂದರು.

ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, “ಸಮಸ್ಯೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿಯ ಕೊರತೆಯಿದೆ. ಸಮಸ್ಯೆ ಬಗೆಹರಿಸಲು ವಿಫಲವಾಗಿದೆ. ಸುಪ್ರೀಂಕೋರ್ಟ್, ಕಾವೇರಿ ಪ್ರಾಧಿಕಾರ ಮತ್ತು ನಿರ್ವಹಣಾ ಸಮಿತಿ ಮಾಡಿದ್ದೇ ಹಠ ಎನ್ನುವಂತೆ ವರ್ತಿಸುತ್ತಿವೆ. ನೀರಿಲ್ಲ ಎಂದರೂ, ನೀರು ಬಿಡಿ ಎನ್ನುತ್ತಿದ್ದಾರೆ. ಮತ್ತೆ ಮೂರು ಸಾವಿರ ಕ್ಯೂಸೆಕ್ ನೀರು ಬಿಡಿ ಎಂದು ನಿರ್ವಹಣಾ ಸಮಿತಿ ಹೇಳಿದ್ದನ್ನೇ ಪ್ರಾಧಿಕಾರ ಕೂಡ ಹೇಳಿದೆ. ಈಗ ಸುಪ್ರೀಂಕೋರ್ಟ್ ಕೂಡ ನಾವು ತಜ್ಞರಲ್ಲ ಪ್ರಾಧಿಕಾರಕ್ಕೆ ಹೋಗಿ ಎನ್ನುತ್ತಾರೆ. ನಾವೇ ಕೊಟ್ಟಿರುವ ಆದೇಶ ಯಾಕೆ ವಾಪಸ್ ಪಡೆಯುವುದು ಎಂದು ಪ್ರಾಧಿಕಾರ ನೀರು ಬಿಡಲು ಆದೇಶಿಸಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ನಾಯಿಗಳ ಸಮೀಕ್ಷೆ ನಡೆಸಿರುವ ವರದಿ ಬಿಡುಗಡೆ ಮಾಡಿದ ಬಿಬಿಎಂಪಿ

ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ ಸಹವಾನಿ, ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಅಶೋಕ್ ಮೃತ್ಯುಂಜಯ, ಶಶಿಧರ್ ಆರಾಧ್ಯ, ಬೆಂಗಳೂರು ಮಹಿಳಾ ಅಧ್ಯಕ್ಷ ವೀಣಾ ಸರ್ರಾವ್, ಮಹಾಲಕ್ಷ್ಮಿ, ಉಸ್ಮಾನ್, ಪುಟ್ಟಣ್ಣ, ಸಿದ್ದು, ಅನಿಲ್ ನಾಚಪ್ಪ ಸೇರಿದಂತೆ ಪಕ್ಷದ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...