ಕೆಇಎ ಸೀಟ್‌ ಬ್ಲಾಕಿಂಗ್ ಹಗರಣ; 10 ಮಂದಿ ಆರೋಪಿಗಳ ಬಂಧನ

Date:

Advertisements

ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಡಿಯಲ್ಲಿ ಸರ್ಕಾರಿ ಕೋಟಾದಡಿ ನೀಡಲಾಗುವ ಸೀಟ್‌ಗಳ ಹಂಚಿಕೆಯಲ್ಲಿ ಹಗರಣ ನಡೆದಿದೆ. ಹಣ ಪಡೆದು ಸೀಟ್‌ ಬ್ಲಾಕಿಂಗ್‌ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಈವರೆಗೆ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಕೋಟಾದಡಿ ಖಾಸಗಿ ಕಾಲೇಜುಗಳಲ್ಲಿ ಸೀಟು ಸಿಕ್ಕರೂ ಸುಮಾರು 2,625 ಅಭ್ಯರ್ಥಿಗಳು ಕಾಲೇಜುಗಳಿಗೆ ದಾಖಲಾಗಿರಲಿಲ್ಲ. ಆ ಅಭ್ಯರ್ಥಿಗಳು ಪ್ರವೇಶ ಪಡೆಯದಿದ್ದಾಗ ಅರ್ಹ ಅಭ್ಯರ್ಥಿಗಳಿಗೆ ಸೀಟು ನೀಡದೆ ವಂಚಿಸಲಾಗಿದೆ. ಜೊತೆಗೆ, ಸೀಟು ಅಗತ್ಯವಿಲ್ಲದ ಅಭ್ಯರ್ಥಿಗಳನ್ನು ಸಂಪರ್ಕಿಸಿ ಕೌನ್ಸೆಲಿಂಗ್​ಗೆ ಬರುವಂತೆ ಮಾಡಿದ್ದು, ಉದ್ದೇಶಪೂರ್ವಕವಾಗಿ ಅರ್ಹ ಅಭ್ಯರ್ಥಿಗಳಿಗೆ ಸೀಟು ಸಿಗದಂತೆ ಮಾಡಲಾಗಿದೆ. ಸರ್ಕಾರಿ ಕೋಟಾದ ಸೀಟುಗಳನ್ನು ಮ್ಯಾನೆಜ್‌ಮೆಂಟ್‌ ಕೋಟಾದ ಸೀಟುಗಳಾಗಿ ಪರಿವರ್ತಿಸಿ, ಹೆಚ್ಚು ಶುಲ್ಕ ವಸೂಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸೀಟ್‌ ಬ್ಲಾಕಿಂಗ್‌ ಹಗರಣದ ಬಗ್ಗೆ ಕೆಇಎ ಆಡಳಿತಾಧಿಕಾರಿ ಇಸಾಲುದ್ದೀನ್ ಜೆ. ಗಾಡಿಯಲ್ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಬೆಂಗಳೂರಿನ ಬಿಎಂಎಸ್ ಕಾಲೇಜು, ಆಕಾಶ್ ಇನ್​ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜು ಹಾಗೂ ನ್ಯೂ ಹಾರಿಜನ್ ಇಂಜಿನಿಯರಿಂಗ್ ಕಾಲೇಜುಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಸಿಕೊಂಡಿದ್ದಾರೆ. 10 ಮಂದಿಯನ್ನು ಬಂಧಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X