ಕೆಪಿಎಸ್‌ಸಿ | ಅನ್ಯಾಯ ಪ್ರಶ್ನಿಸಿದ ವಿದ್ಯಾರ್ಥಿನಾಯಕನ ಬಂಧನ ಖಂಡಿಸಿ ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

Date:

“ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ. ನೇಮಕಾತಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಅಂತ್ಯ ಹಾಡುವುದನ್ನು ಬಿಟ್ಟು ನಿರುದ್ಯೋಗ ಭತ್ಯೆ ಮೂಲಕ ಯುವಜನತೆಯ ಉದ್ಧಾರ ಮಾಡುತ್ತೀವಿ ಎಂಬುದು ನಿಮ್ಮ ಬೂಟಾಟಿಕೆಯಲ್ಲವೇ?” ಎಂದು ಮುಖ್ಯಮಂತ್ರಿ ಚಂದ್ರು ಅವರು ಸಿಎಂ ಅವರಿಗೆ ಪ್ರಶ್ನಿಸಿದ್ದಾರೆ.

- Advertisement -

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ವಿದ್ಯಾರ್ಥಿನಾಯಕ ಕಾಂತಕುಮಾರ್‌ ಬಂಧನವನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಯುವಜನತೆಯ ಪರವಾಗಿ ನೀವಿದ್ದೀರಿ ಎಂದರೆ, ಕೂಡಲೇ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅಕ್ರಮದ ವಿರುದ್ಧ ತನಿಖೆ ನಡೆಸಿ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್ವಿರುದ್ಧ ಕ್ರಮ ಕೈಗೊಳ್ಳಿ. ಸ್ಥಾನದಿಂದ ಅವರನ್ನು ಕೂಡಲೇ ಅಲ್ಲಿಂದ ತೆರವು ಮಾಡಿ” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

“ಹಿಂದಿನ ಅವಧಿಯ ಸರ್ಕಾರದ ವಿರುದ್ಧ ‘40% ಕಮಿಷನ್ಸರ್ಕಾರಎಂದು ಆರೋಪಿಸಿ, ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುತ್ತೀವಿ ಎಂಬ ವಾಗ್ದಾನವನ್ನು ನೀಡಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಅನ್ಯಾಯವನ್ನು ಪ್ರಶ್ನಿಸಿದ ವಿದ್ಯಾರ್ಥಿಗಳನ್ನೇ ಬಂಧಿಸುವ ಹಂತಕ್ಕೆ ನಿಮ್ಮ ಸರ್ಕಾರ ಇಳಿದಿರುವುದು ಏಕೆ? ಸರ್ವಾಧಿಕಾರದ ಧೋರಣೆ ತಳೆದಿರುವುದು ಏಕೆ?” ಎಂದು ಪ್ರಶ್ನಿಸಿದ್ದಾರೆ.

“ಯುವನಿಧಿ ಯೋಜನೆ ಬಿಡುಗಡೆ ಸಂದರ್ಭ ಪದವಿ ಪಡೆದ ನಂತರ ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಹುಡುಕಿಕೊಳ್ಳಲು ನಿರುದ್ಯೋಗಭತ್ಯೆ ಕೊಡುತ್ತಿದ್ದೇವೆ ಎಂದು ಘೋಷಣೆ ಮಾಡಿದ್ದೀರಿ. ಆದರೆ, ವಾಸ್ತವದಲ್ಲಿ ಭ್ರಷ್ಟಾಚಾರದಿಂದ ಅಭ್ಯರ್ಥಿಗಳ ಭವಿಷ್ಯವೇ ಹಾಳಾಗುತ್ತಿರುವುದು ನಿಮ್ಮ ಕಣ್ಣಿಗೆ ಕಾಣಿಸುತ್ತಿಲ್ಲವೇ? ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಗ್ರೂಪ್ ಡಿ ಹುದ್ದೆಯಿಂದ ಹಿಡಿದು ಗ್ರೂಪ್ ಹುದ್ದೆಗಳನ್ನು ಕೋಟಿಗಳಿಗೆ ಹರಾಜು ಹಾಕಲಾಗುತ್ತಿದೆ ಎಂಬ ವಿದ್ಯಾರ್ಥಿ ನಾಯಕನ ಆರೋಪದಲ್ಲಿ ಹುರುಳಿಲ್ಲವೇ? ಹಾಗಿದ್ದರೆ ಫಲಿತಾಂಶ ಪ್ರಕಟಿಸಲು ವಿಳಂಬ ನೀತಿ ಅನುಸರಿಸುತ್ತಿರುವುದೇಕೆ?” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಲಿಂಡರ್ ಸ್ಪೋಟಗೊಂಡು ಏಳು ಜನರಿಗೆ ಗಂಭೀರ ಗಾಯ

“ಒಂದೊಂದು ಹುದ್ದೆಯ ಭರ್ತಿ ಮಾಡಲು ಒಂದು ವರ್ಷದ ಬದಲು ಐದು ವರ್ಷ ತೆಗೆದುಕೊಳ್ಳಲಾಗುತ್ತಿದೆ. 15 ನೋಟಿಫಿಕೇಶನ್ಗಳ ಪರೀಕ್ಷೆ ನಡೆದು ಎರಡು ವರ್ಷಗಳಾಗಿದೆ. ಆದರೆ, ಅದರ ಫಲಿತಾಂಶವನ್ನು ಕೆಪಿಎಸ್ಸಿ ಇನ್ನೂ ಪ್ರಕಟಿಸಿಲ್ಲ. ಇದು ಮೇಲ್ನೋಟಕ್ಕೆ ನೇಮಕಾತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬುದನ್ನು ಸಾರಿ ಹೇಳುತ್ತದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...