ಟಿಕೆಟ್‌ ರಹಿತ ಪ್ರಯಾಣ: ₹5,54,832 ದಂಡ ವಸೂಲಿ ಮಾಡಿದ ಕೆಎಸ್‌ಆರ್‌ಟಿಸಿ

Date:

  • ಟಿಕೆಟ್‌ ರಹಿತ 3,415 ಪ್ರಯಾಣಿಕರಿಗೆ ದಂಡ ವಿಧಿಸಿದ ನಿಗಮ
  • ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,540 ವಾಹನಗಳ ತನಿಖೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ ಪ್ರಯಾಣಿಕರಿಂದ ತನಿಖಾ ತಂಡಗಳು ₹5,54,832 ದಂಡ ವಸೂಲಿ ಮಾಡಿವೆ ಎಂದು ಸಂಸ್ಥೆ ಹೇಳಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಸ್‌ಆರ್‌ಟಿಸಿ, “2023ರ ಎಪ್ರಿಲ್‌ ತಿಂಗಳಲ್ಲಿ ನಿಗಮದ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಕೈಗೊಂಡು ಒಟ್ಟು 3,415 ಪ್ರಯಾಣಿಕರಿಗೆ ದಂಡ ವಿಧಿಸಿವೆ” ಎಂದು ಹೇಳಿದೆ.

“ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,540 ವಾಹನಗಳನ್ನು ತನಿಖೆಗೊಳಪಡಿಸಿ, 3070 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 3415 ಟಿಕೆಟ್‌ ರಹಿತ ಪ್ರಯಾಣಿಕರಿಂದ ₹5,54,832 ದಂಡವನ್ನು ವಸೂಲಿ ಮಾಡಲಾಗಿದೆ. ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ ₹2,38,803 ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದು, ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ” ಎಂದು ಮಾಹಿತಿ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ನೆಟ್ಟಾರು ಪತ್ನಿ ಉದ್ಯೋಗ ರದ್ದು | ಬಿಜೆಪಿ ಕೀಳು ಮಟ್ಟದ ರಾಜಕೀಯ ಮಾಡಿದೆ: ಕಾಂಗ್ರೆಸ್‌ ಮುಖಂಡ

ಸಾರ್ವಜನಿಕ ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್‌/ಪಾಸ್‌ ಪಡೆದು ಪ್ರಯಾಣ ಮಾಡುವಂತೆ ನಿಗಮವು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖ್ಯಾತ ನಿರ್ದೇಶಕ ಶ್ರೀಪಾದ ಭಟ್‌ಗೆ ‘ರಂಗ ಭೂಪತಿ’ ಪ್ರಶಸ್ತಿ

ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ...

ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ...

‘ಬೆಂಗಳೂರು ಕೇಂದ್ರ’ ಮರಳಿ ಕಾಂಗ್ರೆಸ್ ವಶಕ್ಕೆ : ಸಚಿವ ಜಮೀರ್ ವಿಶ್ವಾಸ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು...

ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

"ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ...