- ಟಿಕೆಟ್ ರಹಿತ 3,415 ಪ್ರಯಾಣಿಕರಿಗೆ ದಂಡ ವಿಧಿಸಿದ ನಿಗಮ
- ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,540 ವಾಹನಗಳ ತನಿಖೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ದ ಬಸ್ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ ಪ್ರಯಾಣಿಕರಿಂದ ತನಿಖಾ ತಂಡಗಳು ₹5,54,832 ದಂಡ ವಸೂಲಿ ಮಾಡಿವೆ ಎಂದು ಸಂಸ್ಥೆ ಹೇಳಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಸ್ಆರ್ಟಿಸಿ, “2023ರ ಎಪ್ರಿಲ್ ತಿಂಗಳಲ್ಲಿ ನಿಗಮದ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಕೈಗೊಂಡು ಒಟ್ಟು 3,415 ಪ್ರಯಾಣಿಕರಿಗೆ ದಂಡ ವಿಧಿಸಿವೆ” ಎಂದು ಹೇಳಿದೆ.
“ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,540 ವಾಹನಗಳನ್ನು ತನಿಖೆಗೊಳಪಡಿಸಿ, 3070 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 3415 ಟಿಕೆಟ್ ರಹಿತ ಪ್ರಯಾಣಿಕರಿಂದ ₹5,54,832 ದಂಡವನ್ನು ವಸೂಲಿ ಮಾಡಲಾಗಿದೆ. ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ ₹2,38,803 ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದು, ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ” ಎಂದು ಮಾಹಿತಿ ನೀಡಿದೆ.
ಈ ಸುದ್ದಿ ಓದಿದ್ದೀರಾ? ನೆಟ್ಟಾರು ಪತ್ನಿ ಉದ್ಯೋಗ ರದ್ದು | ಬಿಜೆಪಿ ಕೀಳು ಮಟ್ಟದ ರಾಜಕೀಯ ಮಾಡಿದೆ: ಕಾಂಗ್ರೆಸ್ ಮುಖಂಡ
ಸಾರ್ವಜನಿಕ ಪ್ರಯಾಣಿಕರು ಬಸ್ನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್/ಪಾಸ್ ಪಡೆದು ಪ್ರಯಾಣ ಮಾಡುವಂತೆ ನಿಗಮವು ಪ್ರಯಾಣಿಕರಲ್ಲಿ ಮನವಿ ಮಾಡಿದೆ.