ಕೆಎಸ್‌ಆರ್‌ಟಿಸಿ | ‘ನಮ್ಮ ಕಾರ್ಗೋ-ಟ್ರಕ್ ಸೇವೆ’ ಯೋಜನೆಗೆ ಚಾಲನೆ ನೀಡಿದ ರಾಮಲಿಂಗಾರೆಡ್ಡಿ

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೂತನವಾಗಿ ನಮ್ಮ ಕಾರ್ಗೋ- ‘ಟ್ರಕ್ ಸೇವೆ’ (ನಿಮ್ಮ ವಿಶ್ವಾಸ – ನಮ್ಮ ಕಾಳಜಿ) ಆರಂಭಿಸಿದ್ದು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡಿ 20 ನೂತನ ಟ್ರಕ್‌ಗಳಿಗೆ ಹಸಿರು ನಿಶಾನೆ ತೋರಿದರು.

- Advertisement -

ಈ ವೇಳೆ ಮಾತನಾಡಿದ ಅವರು, “ಮುಂದಿನ ಒಂದು ತಿಂಗಳಿನಲ್ಲಿ 100 ಟ್ರಕ್‌ಗಳನ್ನು, ಒಂದು ವರ್ಷದೊಳಗಾಗಿ 500 ಟ್ರಕ್‌ಗಳನ್ನು ಸೇರ್ಪಡೆ ಮಾಡಲಾಗುವುದು. ಪ್ರಸಕ್ತ ಪೀಣ್ಯದಲ್ಲಿರುವ ನಿಗಮದ ಬಸವೇಶ್ವರ ಬಸ್ ನಿಲ್ದಾಣವನ್ನು ಈ ನಮ್ಮ ಕಾರ್ಗೋ ಟ್ರಕ್ ಟರ್ಮಿನಲ್ ಆಗಿ ಪರಿವರ್ತನೆ ಮಾಡಲಾಗುವುದು. ಕಾರ್ಯಾಚರಣೆ ಹಾಗೂ ನಿರ್ವಹಣೆಗಾಗಿ ಘಟಕವನ್ನಾಗಿ ಬಳಸಿ, ಬಸ್ ನಿಲ್ದಾಣದಲ್ಲಿರುವ ಸ್ಥಳವನ್ನು ಸರ್ಕಾರಿ ಸಂಸ್ಥೆಗಳಿಗೆ ನೀಡಿ ವಾಣಿಜ್ಯ ಉಪಯೋಗಕ್ಕಾಗಿ ಬಳಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನಿಗಮವು ಕೆ.ಎಂ.ಎಸ್ ಕೋಚ್ ಬಿಲ್ಡರ್ಸ್ ಪ್ರೈವೆಟ್ ಲಿಮಿಟೆಡ್ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡು ಎರಡು ತಿಂಗಳ ಅವಧಿಗೆ ಹಾಗೂ ಎಸ್.ಎಂ ಕಣ್ಣಪ್ಪ ಪ್ರೈವೆಟ್ ಲಿಮಿಟೆಡ್ ರವರಿಗೆ ತನ್ನ ಟ್ರಕ್ ಅನ್ನು ಒಂದು ತಿಂಗಳ ಅವಧಿಗೆ ಬಾಡಿಗೆಗೆ ನೀಡಿ ಸಾರಿಗೆ ವಲಯದಲ್ಲಿ ಮಹತ್ತರ ಪ್ರಗತಿಯ ಹೆಜ್ಜೆ ಇರಿಸಿದೆ.

ನಿಗಮವು ಸಾರ್ವಜನಿಕ ಸಾರಿಗೆಯಲ್ಲಿ ತನ್ನ ವಹಿವಾಟನ್ನು ಮತ್ತಷ್ಟು ಉತ್ತಮಪಡಿಸಲು 2021ರಲ್ಲಿ ನಮ್ಮ ಕಾರ್ಗೊ ಹೆಸರಿನಿಂದ ಲಾಜಿಸ್ಟಿಕ್ಸ್ ಸೇವೆಯನ್ನು ಪ್ರಾರಂಭಿಸಿದೆ.

ನಿಗಮದ ವತಿಯಿಂದ ನೂತನ ನಮ್ಮ ಕಾರ್ಗೋ ಟ್ರಕ್ ಸೇವೆಗಳಿಗೆ 20 ಸರಕು ಸಾಗಣೆ ವಾಹನಗಳ ಮೂಲಕ ಚಾಲನೆ ನೀಡಲಾಗಿದೆ. ಇದರಡಿಯಲ್ಲಿ ನಿಗಮದ ಮಾರ್ಗಗಳು ಕಾರ್ಯಾಚರಣೆಯಲ್ಲಿರುವ ಸ್ಥಳಗಳಿಗೆ ನಿಗಮದ ಬಸ್‌ಗಳಿಂದ ಪಾರ್ಸಲ್‌ಗಳನ್ನು ಸಾಗಿಸಲಾಗುತ್ತಿದೆ. ಈ ಯೋಜನೆಯನ್ನು ಮತ್ತೊಂದು ಹಂತಕ್ಕೆ ಅಭಿವೃದ್ಧಿಪಡಿಸುವ ಸಲುವಾಗಿ ಜಿಪಿಎಸ್ ಅಳವಡಿಕೆಯೊಂದಿಗೆ ನವೀನ ಬ್ರಾಂಡ್ ‘ನಮ್ಮ ಕಾರ್ಗೋ-ಟ್ರಕ್ ಸೇವೆ’ಗಳನ್ನು ಈಗ ಪರಿಚಯಿಸುತ್ತಿದೆ ಎಂದು ನಿಗಮ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಮಾದಾವರದಿಂದ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಗೆ ಸಾರಿಗೆ

ನೂತನ ಸೇವೆಯ ಪ್ರಮುಖ ಅಂಶಗಳು

  • ಗ್ರಾಹಕರ ಸರಕುಗಳನ್ನು ರಾಜ್ಯ ವ್ಯಾಪ್ತಿಯಲ್ಲಿ ಸುರಕ್ಷಿತ, ವೇಗ ಹಾಗೂ ವಿಶ್ವಾಸಾರ್ಹವಾಗಿ ಸಾಗಿಸಲಾಗುವುದು.
  • ಈ ಟ್ರಕ್‌ಗಳು ಮುಚ್ಚಲಾದ ಕಂಟೈನರ್ ಮಾದರಿಯಲ್ಲಿದೆ.
  • ನಿಗಮವು ಬಲವಾದ ನೆಟ್ವರ್ಕ್ ವ್ಯವಸ್ಥೆಯನ್ನು ಹೊಂದಿದ್ದು, ಟ್ರಕ್ ಟ್ರ್ಯಾಕಿಂಗ್ ಸೌಲಭ್ಯದೊಂದಿಗೆ ವಿಶ್ವಾಸಾರ್ಹ ಸಿಬ್ಬಂದಿಗಳ ಮುಖೇನ ಗ್ರಾಹಕರ ಸರಕುಗಳನ್ನು ಸುರಕ್ಷಿತವಾಗಿ ಸರಿಯಾದ ಸಮಯಕ್ಕೆ ಸಾಗಿಸಲಿದೆ.
  • ಈ ನೂತನ ಸರಕು ಸಾಗಣೆ ವ್ಯವಸ್ಥೆಯನ್ನು ಆಸಕ್ತ ಗ್ರಾಹಕರಿಗೆ ಕರಾರು ಒಪ್ಪಂದಕ್ಕೆ ಒಳಪಟ್ಟು ಒದಗಿಸಲಿದೆ.
  • ಈ ಲಾಜಿಸ್ಟಿಕ್ ಸೇವೆಗಳಿಂದ ನಿಗಮ ಹಾಗೂ ಸೌಲಭ್ಯ ಪಡೆಯುವ ಸಂಸ್ಥೆಗಳ ನಡುವೆ ಒಡನಾಟ ವರ್ಧನೆಯಾಗಲಿದೆ.
  • ಟ್ರಕ್ ಸೇವೆಯು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆಯಿಂದ ಕರ್ನಾಟಕ ರಾಜ್ಯದ ನಾನಾ ಸ್ಥಳಗಳಿಗೆ ಲಭ್ಯವಿರುತ್ತದೆ.
  • ನಿಗಮವು ಗ್ರಾಹಕರುಗಳ ಅಗತ್ಯತೆಗನುಗುಣವಾಗಿ ಟ್ರಕ್ ಸೇವೆ ಒದಗಿಸಲಿದ್ದು, ಇಚ್ಛೆಯುಳ್ಳ ಆಸಕ್ತ ಗ್ರಾಹಕರು ತಮ್ಮ ಅಗತ್ಯತೆಗಳ ಮಾಹಿತಿ / ವಿವರಗಳನ್ನು ಒದಗಿಸುವಂತೆ ಕೋರಿದೆ.
  • ಹೆಚ್ಚಿನ ಮಾಹಿತಿಗಾಗಿ ಕಾಲ್ ಸೆಂಟರ್ ಸಂಖ್ಯೆ: 080-26252625 ಅಥವಾ ಇ-ಮೇಲ್ ವಿಳಾಸ: [email protected] ಸಂಪರ್ಕಿಸುವಂತೆ ಕೋರಿದೆ.

ಈ ನೂತನ ಟ್ರಕ್ ಸೇವೆಗಳಿಗೆ ನಿಗದಿಪಡಿಸಿರುವ ದರ

  • 1 ರಿಂದ 100 ಕಿ.ಮೀ ವರೆಗೆ ಕನಿಷ್ಠ ಕಿ.ಮೀ ಇದ್ದು, ಪ್ರತಿ ಕಿ.ಮೀ ದರ ₹50 ಇದೆ. ಗರಿಷ್ಠ 12 ಗಂಟೆ ಅವಧಿಗೆ ₹5,000 ಕನಿಷ್ಠ ದರವಿದೆ.
  • 1 ರಿಂದ 200 ಕಿ.ಮೀ ವರೆಗೆ ಪ್ರತಿ ಕಿ.ಮೀಗೆ ₹40 ದರವಿದ್ದು, ಕನಿಷ್ಠ 200 ಕಿ.ಮೀಗೆ 24 ಗಂಟೆ (ನಿರ್ಗಮನದ ಸಮಯದಿಂದ 24 ಗಂಟೆ ಅವಧಿ) ₹8000 ದರವಿದೆ.
  • 200 ಕಿ.ಮೀ ಮೇಲ್ಪಟ್ಟ ಹೆಚ್ಚುವರಿ ಕಿ.ಮೀ ಗೆ ಅಂದರೆ ಪ್ರತಿ ಕಿ.ಮೀಗೆ ₹35 ಇದ್ದು, ಕಾರ್ಯಾಚರಣೆಯ ಕಿ.ಮೀ ಮೇಲೆ ದರವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....