- ಅಮುಲ್-ನಂದಿನಿ ವಿಚಾರ ಚುನಾವಣೆ ಸಂದರ್ಭದಲ್ಲಿ ಬರಬಾರದಾಗಿತ್ತು
- ವಿಜಯ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಆಗಿದೆ
ನಂದಿನಿ ಮತ್ತು ಅಮುಲ್ ವಿವಾದಕ್ಕೆ ಸಂಬಂಧಿಸಿದಂತೆ, ಮೊದಲ ಬಾರಿಗೆ ಈ ರೀತಿಯ ಪರಿಸ್ಥಿತಿ ಉಂಟಾಗಿದೆ. ಕೇಂದ್ರದ ಅಮುಲ್ನ ನಿರ್ಧಾರ ಸದ್ಯಕ್ಕೆ ಪಕ್ಕಕ್ಕೆ ಇಡಿ. ಈ ಬಗ್ಗೆ, ಹೊಸ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಬ್ರಿಜೇಶ್ ಕಾಳಪ್ಪ ಹೇಳಿದರು.
ಆಮ್ ಆದ್ಮಿ ಪಕ್ಷದ ಮೂರನೇ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದೇ ವೇಳೆ, ನಂದಿನಿ-ಅಮುಲ್ ವಿವಾದವನ್ನು ಇತ್ಯರ್ಥ ಪಡಿಸಲು ಸಲಹೆ ನೀಡಿದೆ.
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಬ್ರಿಜೇಶ್ ಕಾರಪ್ಪ, “ನಂದಿನಿ ಮತ್ತು ಅಮುಲ್ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಅಮಿತ್ ಶಾ ಈ ಹಿಂದೆ ಮಾತನಾಡಿದ್ದರು. ಇಂತಹ ದೊಡ್ಡ ನಿರ್ಧಾರಗಳನ್ನು ಮಾಡುವ ಮುನ್ನ ರಾಜ್ಯ ಸರ್ಕಾರದ ಅನುಮತಿ ತೆಗೆದುಕೊಳ್ಳಬೇಕು. ಈಗ ಲಕ್ಷಾಂತರ ಜನರು ಕೆಎಂಎಫ್ಗೆ ಹಾಲನ್ನು ಕೊಡುತ್ತಿದ್ದಾರೆ. ಅದೇ ರೀತಿ ಖರೀದಿ ಕೂಡ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಈ ವಿಚಾರ ಬರಬಾರದಾಗಿತ್ತು. ಈ ನಿರ್ಣಯದಿಂದ ಜನರಲ್ಲಿ ಆಕ್ರೋಶ ಉಂಟಾಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಳ್ಳನನ್ನು ಬಂಧಿಸಿ ಹತ್ಯೆಗೈದ ಆರೋಪಿಗಳು
“ವಿಜಯ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಆಗಿದೆ. ಸ್ಟೇಟ್ ಬ್ಯಾಂಕ್ ಮೈಸೂರ್ ಕೂಡ ವಿಲೀನ ಆಗಿದೆ. ಅದೇ ರೀತಿ ನಂದಿನಿಯನ್ನು ಮಾಯ ಮಾಡುವ ಕಾರ್ಯಕ್ರಮವನ್ನು ಕೇಂದ್ರ ಮಾಡುತ್ತಿದೆ. ನಾಳೆ ಲಾ ಅಂಡ್ ಆರ್ಡರ್ ಪರಿಸ್ಥಿತಿ ಬರಬಾರದು ಎಂದರೆ ಈ ಸಲಹೆಯನ್ನು ಸರ್ಕಾರ ಪಾಲಿಸಲೇಬೇಕು. ಈಗ ಈ ಚುನಾವಣೆ ಮುಗಿದ ಮೇಲೆ ಹೊಸ ಸರ್ಕಾರ ಬರುತ್ತದೆ. ಆಗ ಆ ಸರ್ಕಾರವೇ ಈ ಸಮಸ್ಯೆಯನ್ನು ಬಗೆಹರಿಸಲಿ” ಎಂದು ತಿಳಿಸಿದರು.
“ನಮ್ಮ ಮಾತನ್ನು ಮೀರಿ ಮುಂದಿನ ದಿನದಲ್ಲಿ ನಿರ್ಧಾರ ತೆಗೆದುಕೊಂಡರೆ ಲಾ ಅಂಡ್ ಆರ್ಡರ್ ಪರಿಸ್ಥಿತಿ ಉಂಟಾದರೆ ನೀವೇ ಜವಾಬ್ದಾರಿ” ಎಂದು ಸರ್ಕಾರವನ್ನು ಎಚ್ಚರಿಸಿದರು.