ಕರ್ನಾಟಕದ ವಿವಿಧೆಡೆ ಐಎಎಸ್‌ ಅಧಿಕಾರಿ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ

Date:

Advertisements

ಕರ್ನಾಟಕದ ಹಲವೆಡೆ ಬುಧವಾರದಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಸದ್ಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಐಎಎಸ್​ ಸೇರಿ ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆರ್​ ಟಿ ನಗರದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್​ ಮನೆ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಆರೋಪ ಕೇಳಿಬಂದಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಇವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್​​ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದೆ. ಅದೇ ರೀತಿಯಾಗಿ ಮೈಸೂರಿನ ಸಾತಗಳ್ಳಿಯ ಜೆ ಪಿ ನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಸ್ವಾಮಿ ಮನೆ ಮೇಲೂ ದಾಳಿ ಮಾಡಲಾಗಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪ ಕೇಳಿಬಂದಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ. ಬೆಂಗಳೂರು ಪಟ್ಟಣ ಮತ್ತು ಗ್ರಾಮೀಣಾ ಯೋಜನಾ ಇಲಾಖೆ ಅಧಿಕಾರಿ ಮಾರುತಿ ಬಗಲಿಗೆ ಸೇರಿದ 3 ಸ್ಥಳಗಳ ಮೇಲೆ ದಾಳಿ ಮಾಡಿರುವ ಬೆಂಗಳೂರು ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. ಬೆಂಗಳೂರು ನಿವಾಸಿಯಾಗಿರುವ ಅಧಿಕಾರಿ ಮಾರುತಿ ಬಗಲಿ ವಿರುದ್ಧ ರಾಜ್ಯದ ಹಲವೆಡೆ ಆಸ್ತಿ ಮಾಡಿರುವ ಆರೋಪ ಕೇಳಿಬಂದಿದೆ.

ಕೊಪ್ಪಳ ನಗರದಲ್ಲೂ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ಮಲಗಿದ್ದ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಉಪ ನಿರ್ದೇಶಕ ಶೆಕು ಚವ್ಹಾಣ್​ ಮನೆ ಮೇಲೆ ದಾಳಿ ಮಾಡಲಾಗಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಸುನೀಲ ಮೇಗಳಮನಿ ನೇತೃತ್ವದಲ್ಲಿ ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಶೇಕು ಚವ್ಹಾಣ್​ಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲೂ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

Download Eedina App Android / iOS

X