ಮಾಲ್‌ ಆಫ್‌ ಏಷ್ಯಾ | ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ಹೋಬಳಿ ಬ್ಯಾಟರಾಯನಪುರದ ಮಾಲ್ಆಫ್ಏಷ್ಯಾಗೆ ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಬಟ್ಟು 16 ದಿನಗಳ ಕಾಲ ಈ ಮಾಲ್‌ ಬಂದ್ಮಾಡುವಂತೆ ನಗರ ಪೊಲೀಸ್ಆಯುಕ್ತ ಬಿ. ದಯಾನಂದ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬಳಸದ ವಾಣಿಜ್ಯ ಅಂಗಡಿಗಳು ಹಾಗೂ ಮಾಲ್‌ಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಪ್ರತಿಭಟನೆ ನಡೆಸಿತ್ತು. ಅಲ್ಲದೇ, ಬ್ಯಾಟರಾಯನಪುರದ ಫೋನಿಕ್ಸ್ಮಾಲ್ ಆಫ್ ಏಷ್ಯಾ ವಿರುದ್ಧ ಕೂಡ ಪ್ರತಿಭಟನೆ ನಡೆಸಿದ್ದರು. ಈ ವೇಳೆ, ಮಾಲ್ಗೆ ನುಗ್ಗಿ ಗಲಾಟೆ ನಡೆಸಲಾಗಿತ್ತು. ಈ ಹಿನ್ನೆಲೆ, ಸಾರ್ವಜನಿಕ ಶಾಂತಿ ಕಾಪಾಡುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಿಸುವ ದೃಷ್ಟಿಯಿಂದ ಮಾಲ್ನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

ಇನ್ನು ಮಾಲ್ವ್ಯಾಪ್ತಿಯಲ್ಲಿ ಸೆಕ್ಷನ್ 144 ಹಾಕಲಾಗಿದೆ. ಮುಂಜಾಗ್ರತ ಕ್ರಮವಾಗಿ ಮಾಲ್ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಆದೇಶದಂತೆ 5 ಕ್ಕಿಂತ ಹೆಚ್ಚು ಜನ ಸೇರುವ ಹಾಗಿಲ್ಲ. ಹಾಗಾಗಿ ಮುಂದಿನ ಹದಿನೈದು ದಿನಗಳ ಕಾಲ ಮಾಲ್ ಆಫ್ ಏಷ್ಯಾ ಕ್ಲೋಸ್ ಆಗಲಿದೆ. ಅಕ್ಟೋಬರ್ ತಿಂಗಳಲ್ಲಿ ಓಪನ್ ಮಾಲ್ ಆಫ್ ಏಷ್ಯಾ ಓಪನ್ ಆಗಿತ್ತು.

Advertisements

ಮಾಲ್ ವಿರುದ್ಧ ಪ್ರತಿಭಟನೆ

ಇನ್ನು ಮಾಲ್ ನಿರ್ಮಾಣದಿಂದ ಸಂಚಾರಕ್ಕೆ ಅನಾನೂಕೂಲ ಆಗಿದೆ ಎಂದು ಸಾರ್ವಜನಿಕರು ಪ್ರತಿಭಟನೆ ಸಹ ನಡೆಸಿದ್ದರು. ಮಾಲ್ಭಾಗದಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಆಗುತ್ತಿಲ್ಲ. ವಿಮಾನ ನಿಲ್ದಾಣಕ್ಕೆ ಹೋಗುವ ವಾಹನಗಳು, ಅಂಬುಲೆನ್ಸ್‌ಗಳ ಓಡಾಟಕ್ಕೂ ಕಷ್ಟ ಆಗಲಿದೆ ಎಂಬ ದೂರುಗಳು ಮಾಲ್ ವಿರುದ್ಧ ದಾಖಲಾಗಿದ್ದವು.

ಸಾಲು ಸಾಲು ದೂರುಗಳು ದಾಖಲಾದ ಹಿನ್ನೆಲೆ ಇದನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರು ಖುದ್ದು ಮಾಲ್‌ಗೆ ತೆರಳಿ ಪರಿಶೀಲನೆ ನಡೆಸಿದ್ದರು. ಈ ವೇಳೆ, ಪಾರ್ಕಿಂಗ್ ಸೇರಿದಂತೆ ಕೆಲವು ನ್ಯೂನ್ಯತೆಗಳು ಕಂಡು ಬಂದಿದ್ದವು. ಜತೆಗೆ, ಸಂಚಾರ ದ್ಟಟಣೆ ಕುರಿತು ಜಂಟಿ ಆಯುಕ್ತರ ವರದಿ, ಕಾನೂನು ಸುವ್ಯವಸ್ಥೆ ಬಿಗಡಾಯಿಸುತ್ತಿರುವ ಸಂಬಂಧ ಈಶಾನ್ಯ ವಿಭಾಗದ ಡಿಸಿಪಿ ನೀಡಿದ್ದ ವರದಿ ಪರಿಗಣಿಸಿ ಮಾಲ್ಆಫ್ಏಷಿಯಾವನ್ನು ತಾತ್ಕಾಲಿಕವಾಗಿ ಬಂದ್ಮಾಡಲು ಆದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಲಿನ ಮೂಲಕ ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಏಳು ಮಂದಿ ಬಂಧನ

ಬಂದ್ ವೇಳೆ, ಮಾಲ್ಸಿಬ್ಬಂದಿ ಹಾಗೂ ಮಳಿಗೆಗಳ ಸಿಬ್ಬಂದಿ ಕಾರ್ಯಚಟುವಟಿಕೆ ನಡೆಸಬಹುದು. ಮುಂಜಾಗ್ರತಾ ಕ್ರಮವಾಗಿ ಮಾಲ್ಸುತ್ತಮುತ್ತಲೂ ಹೆಚ್ಚಿನ ಪೊಲೀಸ್ಭದ್ರತೆ ಕಲ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ಅಧಿಕಾರಿಯೊಬ್ಬರು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X