ಬೆಂಗಳೂರು | ಕ್ಯಾಬ್ ಚಾಲಕರಿಗೆ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

Date:

Advertisements
  • ಆರೋಪಿಯನ್ನು ಬಂಧಿಸಿದ ಬಾಣಸವಾಡಿ ಪೊಲೀಸರು
  • ನಿರ್ಜನ ಪ್ರದೇಶದಲ್ಲಿ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆ

ರಾಜ್ಯ ರಾಜಧಾನಿ ಬೆಂಗಳೂರಿಗೆ ಹಲವಾರು ಜನ ದುಡಿಮೆಗಾಗಿ ಬಂದಿದ್ದು, ಓಲಾ, ಉಬರ್ ಚಾಲಕರಾಗಿ ಜೀವನ ಸಾಗಿಸುತ್ತಿದ್ದಾರೆ. ಇಲ್ಲೊಬ್ಬ ಖತರ್ನಾಕ್ ಕಳ್ಳ ಪ್ರಯಾಣಿಕನ ಸೋಗು ಹಾಕಿಕೊಂಡು ಕ್ಯಾಬ್ ಬುಕ್ ಮಾಡಿ ಸ್ವಲ್ಪ ದೂರ ತೆರಳಿದ ನಂತರ ನಿರ್ಜನ ಪ್ರದೇಶದಲ್ಲಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿನಯ್ ಬಂಧಿತ ಆರೋಪಿ. ಬಾಣಸವಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತನು ಪ್ರಯಾಣಿಕರ ರೀತಿ ಓಲಾ ಅಥವಾ ಉಬರ್ ಕ್ಯಾಬ್ ಬುಕ್ ಮಾಡಿ ಸ್ವಲ್ಪ ದೂರದ ವರೆಗೆ ತೆರಳಿ ನಂತರ ಯಾರು ಇಲ್ಲದ ನಿರ್ಜನ ಪ್ರದೇಶದಲ್ಲಿ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದನು.

ಈ ಸುದ್ದಿ ಓದಿದ್ದಾರೆ? ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಡ್ರೋನ್ ಕ್ಯಾಮರಾ ಬಳಕೆ : ಗೃಹ ಸಚಿವ ಜಿ ಪರಮೇಶ್ವರ್

Advertisements

ಈ ವೇಳೆ ಪೊಲೀಸರಿಗೆ ದೂರು ಕೊಡದಂತೆ ಹೆದರಿಸುತ್ತಿದ್ದನು. ಎಚ್​ಎಎಲ್, ಬಾಣಸವಾಡಿ, ಹೈ ಗ್ರೌಂಡ್ಸ್ ಹಾಗೂ ಎಂ.ಜಿ ರೋಡ್ ಭಾಗಗಳಿಂದ ಕ್ಯಾಬ್ ಬುಕ್ ಮಾಡುತ್ತಿದ್ದನು. ನಿರ್ಜನ ಪ್ರದೇಶಕ್ಕೆ ತೆರಳಿದ ನಂತರ ಕ್ಯಾಬ್ ಚಾಲಕನಿಗೆ ಬೆದರಿಕೆ ಹಾಕಿ ಅವರ ಕುಟುಂಬಸ್ಥರಿಗೆ ಕರೆ ಮಾಡಿಸಿ, ಹುಷಾರಿಲ್ಲ ಆಸ್ಪತ್ರೆಗೆ ಸೇರಿದ್ದೀನಿ, ಹಣ ಹಾಕಿ ಎಂದು ಕೇಳಿಸುತ್ತಿದ್ದನು. ಪೊಲೀಸ್ ವಿಚಾರಣೆ ಬಳಿಕ ಮತ್ತೆ ನಾಲ್ಕು ಸುಲಿಗೆ ಪ್ರಕರಣಗಳು ಬೆಳಕಿಗೆ ಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X