ನಮ್ಮ ಮೆಟ್ರೋದಲ್ಲಿ ಯುವತಿಯರನ್ನು ಅಸಭ್ಯವಾಗಿ ವಿಡಿಯೋ ಮಾಡುತ್ತಿದ್ದ ಯುವಕನ ಬಂಧನ

Date:

Advertisements

ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಖಾಸಗಿ ಅಂಗಾಂಗಗಳ ವಿಡಿಯೋ ಹಾಗೂ ಭಾವಚಿತ್ರ ತೆಗೆಯುತ್ತಿದ್ದ ಯುವಕನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್‍ಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಯನಗರದಲ್ಲಿ ನಡೆದಿದೆ.

ಆರೋಪಿಗೆ ಬಿಎಂಆರ್‌ಸಿಎಲ್‌ 5,000 ರೂ. ದಂಡ ವಿಧಿಸಿದೆ. ವಶಕ್ಕೆ ಪಡೆಯಲಾದ ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ. ಆರೋಪಿ, ಮೆಟ್ರೋದಲ್ಲಿ ಪ್ರಯಾಣ ಮಾಡುವ ಮಹಿಳೆಯರ ಖಾಸಗಿ ಅಂಗಾಂಗಗಳ ಫೋಟೋ ಹಾಗೂ ವಿಡಿಯೋ ತೆಗೆಯುತ್ತಿದ್ದ. ಆರೋಪಿಯ ಮೊಬೈಲ್‍ನಲ್ಲಿ ಸುಮಾರು 50 ಯುವತಿಯರ ವಿಡಿಯೋ ಮತ್ತು ಭಾವಚಿತ್ರಗಳು ಪತ್ತೆಯಾಗಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋರೆಗಾಂವ್ ಭೀಮಾ ವಿಜಯೋತ್ಸವ ದಲಿತ ಅಸ್ಮಿತೆಯ ಕತೆಯನ್ನು ಬಲ್ಲಿರಾ?

Advertisements

ಡಿ.25 ರಂದು ಬೆಳಿಗ್ಗೆ 9 ಗಂಟೆಗೆ ಯುವತಿಯೊಬ್ಬರು ಮೆಜೆಸ್ಟಿಕ್‍ನಿಂದ ಜೆಪಿ ನಗರ ಮೆಟ್ರೋ ಸ್ಟೇಷನ್‍ಗೆ ಹೋಗುತ್ತಿದ್ದರು. ಈ ವೇಳೆ ಯುವಕ, ಯುವತಿಯ ಖಾಸಗಿ ಅಂಗಾಂಗಗಳ ವಿಡಿಯೋ ತೆಗೆಯುತ್ತಿದ್ದನ್ನು ಗಮನಿಸಿ ಆತನಿಗೆ ಹಲ್ಲೆ ನಡೆಸಿದ್ದಾಳೆ. ಈ ವೇಳೆ ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರು ಭದ್ರತಾ ಸಿಬ್ಬಂದಿ ಯುವತಿಯ ಸಹಾಯಕ್ಕೆ ಧಾವಿಸಿದ್ದಾರೆ. ಈ ವೇಳೆ ಮಹೇಶ್‍ನ ಕೃತ್ಯ ಬೆಳಕಿಗೆ ಬಂದಿದೆ.

ಜಯನಗರ ಮೆಟ್ರೋ ನಿಲ್ದಾಣದಲ್ಲಿ ಯುವಕನನ್ನು ರೈಲಿನಿಂದ ಕೆಳಗಿಳಿಸಿ, ಮೊಬೈಲ್ ಪರಿಶೀಲನೆ ನಡೆಸಿದಾಗ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿವೆ. ಆತನನ್ನು ಜಯನಗರ ಪೊಲೀಸ ವಶಕ್ಕೆ ನೀಡಲಾಗಿದೆ.

ಡ್ಯೂಟಿಯಲ್ಲಿ ಇಲ್ಲದಿದ್ದರೂ ಯುವತಿಯ ಸಹಾಯಕ್ಕೆ ಧಾವಿಸಿದ ಮೆಟ್ರೋ ಸೆಕ್ಯುರಿಟಿ ಗಾರ್ಡ್ ಸುಜೀತ್ ಹಾಗೂ ಎಸ್.ಜಿ ರಾಮ್ ಬಹದ್ದೂರ್ ಅವರನ್ನು ಬಿಎಂಆರ್‌ಸಿಎಲ್ ಅಭಿನಂದಿಸಿದೆ.

image 36 4
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X