ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

Date:

Advertisements

“ಬಂಗಾರಪೇಟೆ, ಕೆಂಗೇರಿ, ಕೃಷ್ಣರಾಜಪುರ, ಮಂಡ್ಯ, ಚನ್ನಪಟ್ಟಣ, ಹೊಸೂರು, ಹಿಂದೂಪುರ, ಕುಪ್ಪಂ, ಮಾಲೂರು, ರಾಮನಗರ, ತುಮಕೂರು ಹಾಗೂ ವೈಟ್‌ಫೈಲ್ಡ್ ನಿಲ್ದಾಣಗಳನ್ನು (15 ನಿಲ್ದಾಣ) ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಆಧುನೀಕರಿಸಲು ಉದ್ದೇಶಿಸಲಾಗಿದೆ” ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್ ಹೇಳಿದ್ದಾರೆ.

ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ರೈಲ್ವೆ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ (ಡಿಆರ್‌ಯುಸಿಸಿ) ಮೂರನೇ ಸಭೆ ನಡೆಸಿತು. ಈ ವೇಳೆ, ಮಾತನಾಡಿದ ಅವರು, “ಯಶವಂತಪುರ-ಚೆನ್ನಸಂದ್ರ ನಡುವೆ ದ್ವಿಪಥೀಕರಣ, ಬೈಯ್ಯಪ್ಪನಹಳ್ಳಿ-ಹೊಸೂರು ಮತ್ತು ಪೆನುಕೊಂಡ-ಧರ್ಮಾವರಂ ನಡುವೆ ವಿದ್ಯುದ್ದೀಕರಣದೊಂದಿಗೆ ದ್ವಿಪಥೀಕರಣ ಮತ್ತು ಬೆಂಗಳೂರು ಕಂಟೋನ್ಮೆಂಟ್ – ವೈಟ್‌ಫೀಲ್ಡ್‌ನ ಚತುಷ್ಪಥ ಕಾಮಗಾರಿ ವೇಗವಾಗಿ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

“ನವೆಂಬರ್ 2023ರಲ್ಲಿ ವಿಭಾಗವು ತನ್ನ ಅತ್ಯಧಿಕ ಸರಕು ಆದಾಯ ₹24.22 ಕೋಟಿ ಗಳಿಸಿದೆ. ವಿಭಾಗವು ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ ₹173.17 ಕೋಟಿ ಒಟ್ಟು ಸರಕು ಸಾಗಣೆ ಆದಾಯವನ್ನು ದಾಖಲಿಸಿದೆ” ಎಂದು ಹೇಳಿದ್ದಾರೆ.

Advertisements

“ಏಪ್ರಿಲ್ 2023ರಲ್ಲಿ ವಿಭಾಗವು, ಪೆಟ್ರೋಲಿಯಂ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಯನ್ನು ಹೊಸದಾಗಿ ಪ್ರಾರಂಭಿಸಿದೆ. ಇಲ್ಲಿಯವರೆಗೆ 63 ರೇಕ್‌ಗಳನ್ನು ಲೋಡ್ ಮಾಡಲಾಗಿದ್ದು, ₹9.33 ಕೋಟಿ ಆದಾಯ ಗಳಿಸಿದೆ” ಎಂದು ಮಾಹಿತಿ ನೀಡಿದ್ದಾರೆ.

“ವಿಭಾಗವು ಅಕ್ಟೋಬರ್, 2023ರಲ್ಲಿ ದೊಡ್ಡಬಳ್ಳಾಪುರದಿಂದ ರಾಜಸ್ಥಾನದ ಕನಕಪುರಕ್ಕೆ ಮೊದಲ ಬಾರಿಗೆ ಟ್ರ್ಯಾಕ್ಟರ್‌ಗಳನ್ನು ಲೋಡ್ ಮಾಡಿದೆ. ಆಟೋಮೊಬೈಲ್ ಸಾಗಣೆಗೆ ಸಂಬಂಧಿಸಿದಂತೆ, ವಿಭಾಗವು ನವೆಂಬರ್, 2023 ರವರೆಗೆ 430 ರೇಕ್‌ಗಳನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 35% ಹೆಚ್ಚಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

“ಒಟ್ಟಾರೆ, ಸರಕು ಲೋಡಿಂಗ್ ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ, ವಿಭಾಗವು ನವೆಂಬರ್, 2023 ರವರೆಗೆ 515 ರೇಕ್‌ಗಳನ್ನು ಲೋಡ್ ಮಾಡಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 46% ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಕ್ಯಾತಸಂದ್ರ, ನಿಡವಂದ, ಪೆನುಕೊಂಡ ಮತ್ತು ವೈಟ್‌ಫೀಲ್ಡ್‌ನಲ್ಲಿರುವ ಗೂಡ್ಸ್ ಶೆಡ್‌ಗಳನ್ನು ಫೆನ್ಸಿಂಗ್/ಬೌಂಡರಿ, ಶೆಲ್ಟರ್, ವರ್ತಕರ ಕೊಠಡಿಗಳು, ಕಾರ್ಮಿಕರಿಗೆ ಕ್ಯಾಂಟೀನ್, ವಿಶ್ರಾಂತಿ ಕೊಠಡಿ ಮುಂತಾದ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೆ ಏರಿಸಲು ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ರೈಲು ನಿಲ್ದಾಣಗಳಲ್ಲಿನ ಪ್ರಯಾಣಿಕರ ಸೌಕರ್ಯಗಳನ್ನು ಸುಧಾರಿಸಲು ರೈಲುಗಳಲ್ಲಿ ಪ್ರಯಾಣಿಕರ ಸುಖಾನುಭವವನ್ನು ವರ್ಧಿಸಲು ಮತ್ತು ವಿಭಾಗದ ಪಾರ್ಸೆಲ್ ಆದಾಯವನ್ನು ಹೆಚ್ಚಿಸಲು ಸಲಹೆಗಳನ್ನು ನೀಡಲು ಅವರು ಸದಸ್ಯರಿಗೆ ಕರೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X