ಬೇಸಿಗೆಗೆ ಮತ್ತಷ್ಟು ಹುಳಿಯಾದ ನಿಂಬೆಹಣ್ಣು

Date:

  • ₹4 ರಿಂದ ₹5 ದರ ಇದ್ದ ನಿಂಬೆಹಣ್ಣು ಬೆಲೆ ಇದೀಗ ₹10
  • ಸಣ್ಣ ಗಾತ್ರದ ನಿಂಬೆ ಹಣ್ಣು ಪ್ರತಿ ಕಾಯಿಗೆ ₹5-6

ಚಳಿಯ ಕೊರೆ ಮುಗಿದು, ಬೇಸಿಗೆಯ ಬಿಸಿ ಏರುತ್ತಿದೆ. ಮಾರ್ಚ್‌ ತಿಂಗಳಿನಲ್ಲಿಯೇ ಬೇಸಿಗೆ ಸುಡುಬಿಸಿಲಿಗೆ ಜನರಿಗೆ ಸಾಕಪ್ಪ ಎನಿಸುವಂತೆ ಮಾಡಿದೆ. ಇನ್ನು ಏಪ್ರಿಲ್-ಮೇ ತಿಂಗಳಲ್ಲಿ ಬಿಸಿಲಿನ ಬೇಗೆ ಮತ್ತಷ್ಟು ಹೆಚ್ಚಾಗಲಿದೆ. ಜನರು ಕುಳಿತಲ್ಲಿಯೇ ದಣಿಯುವಂತಹ ವಾತಾವರಣ ಆವರಿಸಿದೆ. ದಣಿವು ನೀಗಿಸಿಕೊಳ್ಳಲು ತುಂಪು ಪಾನೀಯ, ಶರಬತ್‌ನ ಮೊರೆಹೋಗುತ್ತಿದ್ದಾರೆ. ಆದರೆ, ಶರಬತ್ ಮಾಡುವುದು ಬೇಸಿಗೆಗಿಂತಲೂ ಹೆಚ್ಚು ಕೈಸುಡುತ್ತಿದೆ. ₹4 ರಿಂದ ₹5 ದರ ಇದ್ದ ನಿಂಬೆಹಣ್ಣು ಬೆಲೆ ಇದೀಗ ₹10 ಆಗಿದೆ.

- Advertisement -

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕರ್ನಾಟಕ ನಿಂಬೆ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ ಸಪ್ಪಂಡಿ, “ನಗರದಾದ್ಯಂತ ಏರುತ್ತಿರುವ ತಾಪಮಾನವು ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಮಳೆಗಾಲ ಮತ್ತು ಚಳಿಗಾಲದಲ್ಲಿ ನಿಂಬೆಹಣ್ಣು ಇಳುವರಿ ಚೆನ್ನಾಗಿರುತ್ತದೆ. ಆದರೆ, ಬೇಸಿಗೆ ಕಾಲದಲ್ಲಿ ನಿಂಬೆ ಹಣ್ಣಿನ ಇಳುವರಿ ತುಂಬಾ ಕಡಿಮೆಯಿರುತ್ತದೆ. ಈ ಅವಧಿಯಲ್ಲಿ ನಿಂಬೆ ಹಣ್ಣಿಗೆ ಬೇಡಿಕೆ ಜಾಸ್ತಿ ಇರುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

“ಸಾಮಾನ್ಯವಾಗಿ ಬೇಸಿಗೆಯಲ್ಲಿ ನಿಂಬೆಹಣ್ಣು ದುಬಾರಿಯಾಗಿರುತ್ತದೆ. ಈ ವರ್ಷ ಸಾಮಾನ್ಯಕ್ಕಿಂತ ಮುಂಚಿತವಾಗಿಯೇ ಫಸಲು ಬಂದಿದೆ. ಸಾಮಾನ್ಯವಾಗಿ ಏಪ್ರಿಲ್ ಮಧ್ಯದಲ್ಲಿ ಹಣ್ಣಿನ ಬೆಲೆಗಳು ಹೆಚ್ಚಾಗುತ್ತವೆ. ಆದರೆ, ಈ ಬಾರಿ ತಾಪಮಾನ ಏರಿಕೆಯಿಂದಾಗಿ ಮಾರ್ಚ್ ಮಧ್ಯದಿಂದಲೇ ಏರಿಕೆಯಾಗಿದೆ. ಸೋಮವಾರ ಸಗಟು ದರದಲ್ಲಿ 40 ಕೆಜಿ ನಿಂಬೆಹಣ್ಣಿನ ಪ್ರತಿ ಚೀಲಕ್ಕೆ ₹3,700 ಮುಂದಿನ ದಿನಗಳಲ್ಲಿ ಪ್ರತಿ ಚೀಲಕ್ಕೆ ₹4,000 ಏರಿಕೆ ಕಾಣಬಹುದು” ಎಂದು ಸಂತೋಷ್ ಹೇಳಿದರು.

ಸಣ್ಣ ಗಾತ್ರದ ನಿಂಬೆ ಹಣ್ಣು ಪ್ರತಿ ಕಾಯಿಗೆ ₹5-6 ಮಾರಾಟವಾಗುತ್ತಿದೆ. ಮಧ್ಯಮ ಗಾತ್ರದ ನಿಂಬೆಹಣ್ಣು ಅಂಗಡಿಗಳಲ್ಲಿ ₹8-10ಗೆ ಮಾರಾಟವಾಗುತ್ತಿದೆ. ವಿಜಯಪುರ ಹಾಗೂ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ನಿಂಬೆಹಣ್ಣುಗಳು ಆಮದು ಆಗುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...