ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್-​ವೇ ಅವಾಂತರ: ಬಿಡದಿ ಬಳಿ ನಿರ್ಗಮನ ರಸ್ತೆ ಬಂದ್‌ ಮಾಡಿದ ಹೆದ್ದಾರಿ ಪ್ರಾಧಿಕಾರ

Date:

Advertisements

ಬೆಂಗಳೂರು-ಮೈಸೂರು ನಡುವೆ ಎಕ್ಸ್‌ಪ್ರೆಸ್‌-ವೇ ಆರಂಭವಾದಾಗಿನಿಂದಲೂ ನಾನಾ ರೀತಿಯ ಸಮಸ್ಯೆಗಳು, ಅವಾಂತರಗಳಿಂದ ಸುದ್ದಿಯಾಗುತ್ತಲೇ ಇದೆ. ಮಳೆ, ಅಪಘಾತ, ಟೋಲ್‌ ಕಾರಣದಿಂದಾಗಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ, ಬಿಡದಿ ಬಳಿ ಎಕ್ಸ್‌ಪ್ರೆಸ್‌-ವೇ ಮತ್ತು ಸರ್ವೀಸ್‌ ರಸ್ತೆ ನಡುವಿನ ನಿರ್ಗಮನ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರ ಬಂದ್‌ ಮಾಡಿದೆ. ಮತ್ತೆ ಆಕ್ರೋಶಕ್ಕೆ ಗುರಿಯಾಗಿದೆ.

ಆರಂಭದಲ್ಲಿ ಎಕ್ಸ್‌ಪ್ರೆಸ್‌-ವೇ ನಡುವಿನ ಸಂಚಾರ ಬೆಂಗಳೂರು-ಮೈಸೂರು ನಡುವೆ ಮಾತ್ರವೇ ಇತ್ತು. ರಸ್ತೆ ಹಾದುಹೋಗುವ ರಾಮನಗರ, ಮಂಡ್ಯ ಜಿಲ್ಲಾ ಕೇಂದ್ರಗಳು ಸೇರಿದಂತೆ ಯಾವುದೇ ಪಟ್ಟಣಕ್ಕೆ ಸಂಪರ್ಕವೇ ಇರಲಿಲ್ಲ. ಹೆದ್ದಾರಿ ಪ್ರಾಧಿಕಾರದ ಈ ಧೋರಣೆಯ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ಆ ಬಳಿಕ, ಎಲ್ಲ ನಗರಗಳಿಗೆ ಸಂಪರ್ಕಿಸುವಂತೆ ಎಕ್ಸ್‌ಪ್ರೆಸ್‌-ವೇಗೆಯಿಂದ ಸರ್ವೀಸ್‌ ರಸ್ತೆಗೆ ನಿರ್ಗಮನ ಮತ್ತು ಆಗಮನ ದ್ವಾರಗಳನ್ನು ತೆರೆಯಲಾಗಿತ್ತು.

ಇನ್ನು, ಎಕ್ಸ್‌ಪ್ರೆಸ್‌-ವೇ ಸಂಚಾರಕ್ಕೆ ದುಬಾರಿ ಟೋಲ್‌ ಶುಲ್ಕ ವಿಧಿಸಲಾಗಿರುವ ಪರಿಣಾಮ, ಬೆಂಗಳೂರಿನ ಶೇಷಗಿರಿಹಳ್ಳಿ ಬಳಿಯ ಟೋಲ್‌ನಲ್ಲಿ ಸುಂಕ ಪಾವತಿಸುವುದನ್ನು ತಪ್ಪಿಸಿಲು ಹಲವಾರು ವಾಹನ ಚಾಲಕರು ಬಿಡದಿ ಬಳಿಯೇ ಎಕ್ಸ್‌ಪ್ರೆಸ್‌-ವೇ ಇಂದ ಸರ್ವೀಸ್‌ ರಸ್ತೆಗೆ ಬಂದು, ಸರ್ವೀಸ್‌ ರಸ್ತೆ ಮೂಲಕ ಬೆಂಗಳೂರು ತಲುಪುತ್ತಿದ್ದರು.

Advertisements

ಇದರಿಂದ, ಟೋಲ್ ಸಂಗ್ರಹ ಕಡಿಮೆಯಾಗುತ್ತಿತ್ತು. ಈಗ, ಟೋಲ್ ಸುಂಕವನ್ನು ವಸೂಲಿ ಮಾಡಲೇಬೇಕು ಮತ್ತು ಸಂಗ್ರಹವನ್ನು ಹೆಚ್ಚಿಸಿಕೊಳ್ಳಬೇಕೆಂದು ನಿರ್ಧರಿಸಿರುವ ಹೆದ್ದಾರಿ ಪ್ರಾಧಿಕಾರಿ, ಬಿಡದಿ ಬಳಿ ಎಕ್ಸ್‌ಪ್ರೆಸ್‌ವೇ ಮತ್ತು ಸರ್ವೀಸ್‌ ರಸ್ತೆ ನಡುವಿನ ನಿರ್ಗಮನ ರಸ್ತೆಯನ್ನು ಬಂದ್‌ ಮಾಡಿದೆ. ಎಕ್ಸ್‌ಪ್ರೆಸ್‌-ವೇನಲ್ಲಿ ಬರುವ ವಾಹನ ಸವಾರರು ಶೇಷಗಿರಿಹಳ್ಳಿ ಟೋಲ್‌ನಲ್ಲಿ ಸುಂಕ ಪಾವತಿಸಿಯೇ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ವರದಿ ಓದಿದ್ದೀರಾ?: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ | ಟೋಲ್‌ ಎಂಬ ಸರ್ಕಾರಿ ದರೋಡೆ; 20 ತಿಂಗಳಲ್ಲಿ 438 ಕೋಟಿ ವಸೂಲಿ

ಪ್ರಾಧಿಕಾರದ ನಡೆಯ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಸೂಚನೆಯನ್ನು ನೀಡದೆ, ಏಕಾಏಕಿ ನಿರ್ಗಮನ ರಸ್ತೆಯನ್ನು ಬಂದ್‌ ಮಾಡಲಾಗಿದೆ. ಈ ಧೋರಣೆ ಸರಿಯಲ್ಲ. ಮೈಸೂರು-ಮಂಡ್ಯದಿಂದ ಬಂದವರು ಕುಂಬಳಗೋಡು ಸೇರಿದಂತೆ ಇತರ ಪ್ರದೇಶಗಳಿಗೆ ಹೋಗಬೇಕೆಂದರೆ ಎಕ್ಸ್‌ಪ್ರೆಸ್‌-ವೇಯಿಂದ ಸರ್ವೀಸ್‌ ರಸ್ತೆಗೆ ಹೇಗೆ ಬರಬೇಕು. ಕೆಂಗೇರಿಗೆ ಬಂದು, ವಾಪಸ್‌ ಹೋಗಬೇಕೇ ಎಂದು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X