‘ನಮ್ಮ ಮೆಟ್ರೋ’ ದರ ಏರಿಕೆ ತೀರ್ಮಾನ ಕೇಂದ್ರ ಸರ್ಕಾರ ರಚಿಸಿದ ಸಮಿತಿಯದ್ದು: ‌ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ನಮ್ಮ ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರ ಒಂದು ಸಮಿತಿ ರಚಿಸಿದೆ. ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಆ ಸಮಿತಿಯ ತೀರ್ಮಾನ ನಮ್ಮ ಗಮನಕ್ಕೂ ಬರುವುದಿಲ್ಲ, ದರ ಏರಿಕೆ ತೀರ್ಮಾನ ಅವರು ಮಾಡುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಮೆಟ್ರೋ ಟಿಕೆಟ್ ದರ ಏರಿಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿದೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ ಉತ್ತರಿಸಿದ ಅವರು, “ಬಿಜೆಪಿಯವರಿಗೆ ರಾಜಕೀಯ ಹೊರತಾಗಿ ಬೇರೇನೂ ಗೊತ್ತಿಲ್ಲ. ಯಾರು ಬೇಕಾದರೂ ಸಂಸತ್ತಿನಲ್ಲಿ ಮಾತನಾಡಲಿ, ಇಲ್ಲಿ ಪ್ರತಿಭಟನೆ ಮಾಡಲಿ, ಗಲಾಟೆ ಮಾಡಲಿ. ಆದರೆ ಮೆಟ್ರೋ ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಶೇ 50:50 ಅನುಪಾತದಲ್ಲಿ ಮಾಡಲಾಗಿರುತ್ತದೆ. ಆದರೆ, ದರ ನಾವು ಏರಿಸಿಲ್ಲ” ಎಂದರು.

“ಡಬಲ್ ಡೆಕ್ಕರ್ ಸೇರಿದಂತೆ ಬೆಂಗಳೂರಿನ ಮೆಟ್ರೋವನ್ನು ಇನ್ನೂ ಹೆಚ್ಚಿನ ಭಾಗಕ್ಕೆ ವಿಸ್ತರಣೆ ಮಾಡಬೇಕಿದೆ. ಮೆಟ್ರೋ ಜೊತೆಗೆ ಮೇಲ್ಸೆತುವೆ ನಿರ್ಮಾಣಕ್ಕೆ ಬಿಬಿಎಂಪಿಯಿಂದ ಶೇ 50 ರಷ್ಟು ವೆಚ್ಚವನ್ನು ಭರಿಸುವುದಾಗಿ ನಾವು ತಿಳಿಸಿದ್ದೇವೆ. ಏಕೆಂದರೆ ರಸ್ತೆ ವಿಸ್ತರಣೆ ಮಾಡಬೇಕು ಎಂದರೆ ಭೂಸ್ವಾಧಿನಕ್ಕೆ ಹೆಚ್ಚು ಖರ್ಚು ಆಗುತ್ತದೆ. ಕಟ್ಟಡಗಳನ್ನು ಒಡೆದುಹಾಕಿ ರಸ್ತೆ ವಿಸ್ತರಿಸುವುದು ಹೆಚ್ಚು ತ್ರಾಸದಾಯಕ. ಇದನ್ನು ಪ್ರಾಯೋಗಿಕವಾಗಿ ರಾಗಿಗುಡ್ಡ ಜಂಕ್ಷನ್ ಬಳಿ ಮಾಡಿದ್ದೇವೆ” ಎಂದು ತಿಳಿಸಿದರು.

Advertisements

ಪ್ರಯಾಣ ದರ ಏರಿಕೆ ಹೆಸರಲ್ಲಿ ಬೆಂಗಳೂರು ಮೆಟ್ರೋ (ನಮ್ಮ ಮೆಟ್ರೋ) ಅಕ್ಷರಶಃ ಹಗಲು ದರೋಡೆಗೆ ಇಳಿದಂಗೆ ಕಾಣುತ್ತಿದೆ. ಶೇ.47ರಷ್ಟು ದರ ಹೆಚ್ಚಳ ಎಂದು ಬಿಎಂಆರ್‌ಸಿಎಲ್‌ (ಬೆಂಗಳೂರು ಮೆಟ್ರೋ ರೈಲು ನಿಗಮ) ಹೇಳಿದ್ದರೂ ಹಲವು ಕಡೆಗಳಲ್ಲಿ ಹಿಂದಿನ ದರದ ದುಪ್ಪಟ್ಟು ಶೇ.100ರಷ್ಟು ಅಧಿಕ ಮೊತ್ತ ನೀಡಬೇಕಾಗಿದೆ.

‘ನಮ್ಮ ಮೆಟ್ರೊ‘ ಪ್ರಯಾಣ ದರ ಏರಿಕೆ ಹೆಚ್ಚಳದಿಂದ ದೇಶದಲ್ಲಿಯೇ ಅತಿ ದುಬಾರಿ ಪ್ರಯಾಣ ದರವನ್ನು ಹೊಂದಿರುವ ರಾಜ್ಯ ಬೆಂಗಳೂರಿನ ಮೆಟ್ರೋದ್ದಾಗಿದೆ. ಪ್ರಯಾಣಿಕರಿಂದ ಪ್ರಯಾಣ ದರವನ್ನು ಪಡೆಯುವ ಬದಲು ಬೃಹತ್ ಆದಾಯ ಸಂಗ್ರಹದ ಉದ್ದೇಶದಿಂದ ದರ ಹೆಚ್ಚಳ ಮಾಡಲಾಗಿದೆ ಎಂಬ ಆರೋಪಕ್ಕೆ ನಿಗಮ ಗುರಿಯಾಗಿದೆ.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X