ಪ್ರವೀಣ್ ಪತ್ನಿ ಉದ್ಯೋಗ ರದ್ದು | ಬಿಜೆಪಿ ಕೀಳು ಮಟ್ಟದ ರಾಜಕೀಯ ಮಾಡಿದೆ: ಕಾಂಗ್ರೆಸ್‌ ಮುಖಂಡ

Date:

Advertisements
  • ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ
  • ನೂತನ’ಗೆ ಶಾಶ್ವತ ಉದ್ಯೋಗ ಮಾಡಿಸಿಕೊಡಲು ಬಿಜೆಪಿ ಯಾಕೆ ಪ್ರಯತ್ನಿಸಲಿಲ್ಲ

ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಗೆ ಬಿಜೆಪಿ ತನ್ನ ಆಡಳಿತದ ಅವಧಿಯಲ್ಲಿ ತಾತ್ಕಾಲಿಕ ಉದ್ಯೋಗ ನೀಡಿದ್ದು, ಸಹಜವಾಗಿ ಸರ್ಕಾರ ಬದಲಾದಾಗ ನೇಮಕಾತಿ ರದ್ದಾಗಿದೆ. ಇದರಿಂದ ಬಿಜೆಪಿ ಎಷ್ಟು ಕೀಳುಮಟ್ಟದ ರಾಜಕೀಯ ಮಾಡಿದೆ ಎಂಬ ಬಗ್ಗೆ ತಿಳಿಯುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ತಿಳಿಸಿದ್ದಾರೆ.

“ಬಿಜೆಪಿ ಸರ್ಕಾರ ಕೀಳುಮಟ್ಟದ ರಾಜಕೀಯ, ನಾಟಕ ಮಾಡುವುದನ್ನು ನಿಲ್ಲಿಸಲಿ. ಸಾಮಾನ್ಯ ಜನರಿಗೆ ಬಿಜೆಪಿಯವರ ಕಪಟ ನಾಟಕದ ಬಗ್ಗೆ ತಿಳಿದಿದೆ. ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ ಎಂಬ ಬಗ್ಗೆ ಬಿಜೆಪಿಯ ಶಾಸಕರು, ಸಂಸದರಿಗೆ ಸಾಮಾನ್ಯ ತಿಳಿವಳಿಕೆಯೂ ಇಲ್ಲವೆ” ಎಂದು ಪ್ರಶ್ನಿಸಿದ್ದಾರೆ.

“ಇದೆಲ್ಲ ಅರಿತಿದ್ದರೂ ಕೂಡಾ ಪ್ರವೀಣ್ ನೆಟ್ಟಾರ್ ಅವರ ಪತ್ನಿಗೆ ಮುಖ್ಯಮಂತ್ರಿಯವರ ವಿಶೇಷ ಅಧಿಕಾರ ಬಳಸಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಿದ್ದಾರೆ. ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ಅದೇ ರೀತಿ ನೂತನ ಕುಮಾರಿ ಅವರ ಕೆಲಸ ರದ್ದಾಗಿದೆ. ಬಿಜೆಪಿಗೆ ಪ್ರವೀಣ ನೆಟ್ಟಾರು ಹಾಗೂ ಅವರ ಪತ್ನಿ ಮೇಲೆ ಕರುಣೆ ಇದ್ದರೆ ಅಭಿಮಾನ ಇದ್ದಿದ್ದರೆ ಈ ಮೊದಲೇ ಅವರಿಗೆ ಯಾಕೆ ಶಾಶ್ವತ ಉದ್ಯೋಗ ನೀಡಲಿಲ್ಲ. ಶಾಶ್ವತ ಉದ್ಯೋಗ ಮಾಡಿಸಿಕೊಡಲು ಯಾಕೆ ಪ್ರಯತ್ನಿಸಿಲ್ಲ” ಎಂದು ಹೇಳಿದ್ದಾರೆ.

Advertisements

“ಬಿಜೆಪಿ ಸರ್ಕಾರ ಇಷ್ಟು ದಿನ ಮಾಡಿದೆಲ್ಲ ನಾಟಕ ಎಂಬುದು ಈ ವಿಚಾರದಿಂದ ಬಹಿರಂಗವಾಗಿದೆ. ನೂತನರವರಿಗೆ ಉದ್ಯೋಗ ನೀಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಈಗಾಗಲೇ ನೂತನ ಅವರ ಜೊತೆಗೆ ಕಾಂಗ್ರೆಸ್ ಪಕ್ಷದ ಪರವಾಗಿ ಮಾತುಕತೆ ನಡೆಸಿದ್ದೇವೆ. ಅವರಿಗೆ ಕೂಡಲೇ ಉದ್ಯೋಗ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಡಿಗೆ ನೆಪ | ಮಾಲೀಕನ ತಲೆಗೆ ಹೊಡೆದು ಚಿನ್ನ ದೋಚಿದ ಮಹಿಳೆಯರು

“ಬಿಜೆಪಿಯವರು ಕೀಳುಮಟ್ಟದ ರಾಜಕೀಯದ ಮೂಲಕ ಜನರನ್ನು ಮತ್ತೆ ಮೂರ್ಖರನ್ನಾಗಿಸುವ ಕೆಲಸವನ್ನು ಬಿಡಲಿ. ಇಂತಹ ಕೀಳು ರಾಜಕೀಯ ಮುಂದೆ ನಡೆಯುವುದಿಲ್ಲ” ಎಂದು ಪದ್ಮರಾಜ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X