ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರ ಬಂಧನ

Date:

Advertisements

ಬೆಂಗಳೂರಿನ ರಾಮೇಶ್ವರಂ ಕೆಫೆ ಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.

ಮೂಲಗಳ ಪ್ರಕಾರ ಮುಸ್ಸಾವಿರ್ ಹುಸ್ಸೇನ್ ಶಾಜೀಬ್ ಹಾಗೂ ಅಬ್ದುಲ್‌ ಮತೀನ್ ತಹ ಎಂಬುವವರನ್ನು ಬಂಧಿಸಲಾಗಿದೆ.

ಮಾರ್ಚ್‌ 1ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಸ್ಫೋಟದಲ್ಲಿ ಹತ್ತು ಮಂದಿ ಗಾಯಗೊಂಡಿದ್ದರು. ಸ್ಫೋಟಕ್ಕೆ ಟೈಮರ್‌ ಹೊಂದಿದ್ದ ಐಇಡಿ ಬಾಂಬ್‌ ಬಳಸಲಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ಘಟನೆಗೆ ಸಂಬಂಧಿಸಿದಂತೆ 1000ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ಶಂಕಿತ ಮುಸ್ಸಾವಿರ್ ಹುಸ್ಸೇನ್ ಶಾಜೀಬ್ ಎಂಬಾತನನ್ನು ಬಂಧಿಸಲಾಗಿದೆ. ಈತ ಕರ್ನಾಟಕದ ಶಿವಮೊಗ್ಗದ ತೀರ್ಥಹಳ್ಳಿಯ ನಿವಾಸಿ ಎಂದು ತನಿಖಾದಳ ದೃಢಪಡಿಸಿದೆ.

ಎನ್‌ಐಎ ದೃಢಪಡಿಸಿದಂತೆ ಬಂಧಿತ ಶಾಜೀಬ್ ಬಾಂಬ್‌ ಸ್ಫೋಟದ ಪ್ರಮುಖ ಶಂಕಿತನಾಗಿದ್ದು, ಚೆನ್ನೈನ ಮಾಲ್‌ ಒಂದರಲ್ಲಿ ಟೋಪಿಯನ್ನು ಖರೀದಿಸಿದ್ದ. ಈ ವರ್ಷದ ಜನವರಿಯಿಂದಲೇ ಒಂದು ತಿಂಗಳಿಗೂ ಹೆಚ್ಚು ದಿನ ಚೆನ್ನೈನಲ್ಲಿ ವಾಸವಾಗಿದ್ದ ಎಂದು ತನಿಖಾದಳ ತಿಳಿಸಿದೆ.

ಮತ್ತೋರ್ವ ಬಂಧಿತ ಅಬ್ದುಲ್‌ ಮತೀನ್ ತಹ ಕೂಡ ತೀರ್ಥಹಳ್ಳಿಯವನಾಗಿದ್ದು, ತಮಿಳುನಾಡಿನ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಎಂದು ತನಿಖಾ ದಳ ಮಾಹಿತಿ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X