ವಿಪಕ್ಷಗಳಿಂದ ಸರ್ಕಾರ ಅಸ್ಥಿರಗೊಳಿಸುವ ಹುನ್ನಾರ; ದಲಿತ ಸಂಘರ್ಷ ಸಮಿತಿಯಿಂದ ಸೆ.3ರಂದು ಬೃಹತ್‌ ಪ್ರತಿಭಟನೆ

Date:

Advertisements

“ಬಿಜೆಪಿಯೇತರ ಸರ್ಕಾರಗಳನ್ನು ಕೆಡವಲು, ವಿರೋಧ ಪಕ್ಷಗಳ ನಾಯಕರನ್ನು ಹಣಿಯಲು ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಹೆಣೆಯುತ್ತಿರುವ ತಂತ್ರದ ಭಾಗವಾಗಿ ನ್ಯಾಯಬದ್ಧವಾಗಿ ಮುಡಾ ನಿವೇಶನ ಪಡೆದಿದ್ರೂ ಸಿ ಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಹೊರಿಸಲಾಗಿದೆ. ಈ ಕುತಂತ್ರ ರಾಜಕಾರಣವನ್ನು ನಾವು ಖಂಡಿಸುತ್ತೇವೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್‌ ಕೆರಗೋಡು ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಳಸಮುದಾಯದ ನಾಯಕನೊಬ್ಬನನ್ನು ದುಷ್ಟ ಕಾರಣಗಳಿಗಾಗಿ ಬಲಿಪಶು ಮಾಡಲು ಬಿಡುವುದಿಲ್ಲ. ಬಿಜೆಪಿಯ ಈ ಸಂವಿಧಾನ ವಿರೋಧಿ ನಡವಳಿಕೆಯ ವಿರುದ್ದ ಸೆ. 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಬೃಹತ್‌ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯಪಾಲರು ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಅವರ ಕೈಗೊಂಬೆಯಾಗಿ ಕೆಲಸ ಮಾಡುವ ಮೂಲಕ ಸಂವಿಧಾನ, ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಿರುವುದು ವಿಷಾದಕರ ಸಂಗತಿ. ಬಿಜೆಪಿಯ ಶಶಿಕಲಾ ಜೊಲ್ಲೆ, ಮುರುಗೇಶ್‌ ನಿರಾಣಿ, ಜನಾರ್ದನ ರೆಡ್ಡಿ, ಜೆಡಿಎಸ್‌ ನ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಲೋಕಾಯುಕ್ತ ಮತ್ತು ಎಸ್‌ಐಟಿಯಂತಹ ತನಿಖಾ ಸಂಸ್ಥೆಗಳು ಕೇಳಿ ವರ್ಷ ಕಳೆದರೂ ರಾಜ್ಯಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರಿಗೆ ಒಂದೇ ದಿನದಲ್ಲಿ ಶೋಕಾಸ್‌ ನೋಟಿಸ್‌ ನೀಡಿದ್ದು, ಅವರು ಕೇಂದ್ರದ ಕೈಗೊಂಬೆಯಾಗಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದರು.

Advertisements

ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ಸಿಬಿಐ, ಇಡಿ ಬಳಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ, ಸಚಿವ ಸತ್ರೇಂದ್ರ ಜೈನ್‌, ಜಾರ್ಖಂಡ್‌ ಮುಖ್ಯಮಂತ್ರಿ, ಹೇಮಂತ್‌ ಸೋರೆನ್‌, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್‌ ಭಗೇಲ್ ಅವರನ್ನು ಪ್ರಕರಣಗಳಲ್ಲಿ ಸಿಲುಕಿಸಿರುವುದು, ಇಪ್ಪತ್ತೈದು ಮಂದಿ ವಿರೋಧ ಪಕ್ಷದ ನಾಯಕರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿರುವುದು ರಾಜಕೀಯ ವಿರೋಧಿಗಳನ್ನು ಹಣಿಯುವ ತಂತ್ರವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ, ಹಿರಿಯ ಮುಖಂಡರಾದ ಇಂದೂಧರ ಹೊನ್ನಾಪುರ, ಎನ್‌ ವೆಂಕಟೇಶ್‌, ದಂಟರಮಕ್ಕಿ ಶ್ರೀನಿವಾಸ್‌, ಗಂಗನಂಜಯ್ಯ, ಡಾ ಎಂ ಶಿವಲಿಂಗಯ್ಯ, ಶ್ರೀನಿವಾಸ ಸಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X