ರಸ್ತೆ ಗುಂಡಿಗಳಿಂದ ಹಿಂಸೆ: 50 ಲಕ್ಷ ಪರಿಹಾರ ಕೇಳಿ ಬಿಬಿಎಂಪಿಗೆ ನೋಟಿಸ್ ಕೊಟ್ಟ ಮಹಿಳೆ

Date:

Advertisements

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಹಾವಳಿ ಹೆಚ್ಚುತ್ತಲೇ ಇದೆ. ನಗರ ಬಹುಸಂಖ್ಯಾತ ರಸ್ತೆಗಳು ಗುಂಡಿ ಬಿದ್ದಿವೆ. ರಸ್ತೆಗುಂಡಿಗಳಿಂದಾಗಿ ಅಪಘಾತಗಳು ಸಂಭವಿಸುತ್ತಿದ್ದು, ವಾಹನ ಸವಾರರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಹಲವರು ಅಂಗ ವೈಕಲ್ಯಕ್ಕೆ ತುತ್ತಾಗಿದ್ದಾರೆ. ದಿನನಿತ್ಯ ಸಂಚರಿಸುವ ಸವಾರರು ರಸ್ತೆಗುಂಡಿಗಳಿಂದಾಗಿ ದೈಹಿಕ ಬೇನೆ, ಮಾನಸಿಕ‌ ಕಿರಿಕಿರಿ ಅನುಭವಿಸಿದ್ದಾರೆ.

ಆ ರೀತಿಯಲ್ಲಿ ರಸ್ತೆಗುಂಡಿಗಳಿಂದ ಬಸವಳಿದ ಬೆಂಗಳೂರಿನ ನಿವಾಸಿ ಮಹಿಳೆಯೊಬ್ಬರು ಬಿಬಿಎಂಪಿಗೆ ಲೀಗಲ್ ನೋಟಿಸ್ ಕಳಿಸಿದ್ದಾರೆ. ರಸ್ತೆಗುಂಡಿಗಳಿಂದ ತಾವು ಅನುಭವಿಸಿದ ಯಾತನೆಗೆ ಪರಿಹಾರವಾಗಿ 50 ಲಕ್ಷ ರೂ. ನೀಡಬೇಕೆಂದು ಕೇಳಿದ್ದಾರೆ. ಪರಿಹಾರ ನೀಡಲು‌15 ದಿನಗಳ ಗಡುವು ನೀಡಿದ್ದಾರೆ.

ಬೆಂಗಳೂರಿನ ರಿಚ್ಯಂಡ್ ಟೌನ್ ನಿವಾಸಿ ದಿವ್ಯ ಕಿರಣ್ ಅವರು ತಮ್ಮ ವಕೀಲ ಕೆ.ವಿ ಲವೀನ್ ಮೂಲಕ ಮೇ 14 ರಂದು ಬಿಬಿಎಂಪಿಗೆ ನೋಟಿಸ್ ಕಳಿಸಿದ್ದಾರೆ. “ಬೆಂಗಳೂರು ನಿವಾಸಿಗಳು ಹೆಚ್ಚು ತೆರಿಗೆ ಪಾವತಿಸುತ್ತಿದ್ದರೂ, ಉತ್ತಮ ಮೂಲಭೂತ ಸೌಲಭ್ಯಗಳುದೊರೆಯುತ್ತಿಲ್ಲ. ರಸ್ತೆ ಸೇರಿದಂತೆ ಮೂಲಭೂತ ಸೌಯರ್ಕಗಳನ್ನು ಉತ್ತಮವಾಗಿ ನಿರ್ವಹಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ. ನಗರದಲ್ಲಿ ರಸ್ತೆ ಸರಿ ಇಲ್ಲದ ಕಾರಣ ಮಾನಸಿಕವಾಗಿ ತೊಂದರೆ ಅನುಭವಿಸುತ್ತಿದ್ದೇನೆ. ದೈಹಿಕ ಆರೋಗ್ಯ ಹದಗೆಟ್ಟಿದೆ, ಮಾನಸಿಕವಾಗಿ ತೊಂದರೆಗೆ ಒಳಗಾಗಿದ್ದೇನೆ. ಪರಿಣಾಮ, ವೈದ್ಯಕೀಯ ವೆಚ್ಚ ಹೆಚ್ಚಾಗಿದೆ. ವೈದ್ಯಕೀಯ ವೆಚ್ಚ ಮತ್ತು‌ ಮಾನಸಿಕ‌ ಹಿಂಸೆ ಆನುಭವಿಸಿರುವುದಕ್ಕೆ ಬಿಬಿಎಂಪಿ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

Advertisements

“ರಸ್ತೆಗಳನ್ನು ನಿರ್ವಹಿಸುವಲ್ಲಿ ಬಿಬಿಎಂಪಿಯ ವೈಫಲ್ಯ ಎದ್ದುಕಾಣುತ್ತಿದೆ. ರಸ್ತೆಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದೇನೆ. ತೀವ್ರ ನೋವಿನಿಂದಾಗಿ ಚಿಕಿತ್ಸೆಗಾಗಿ ಐದು ಮೂಳೆ ತಜ್ಞರನ್ನು ಭೇಟಿ ಮಾಡಿದ್ದೇನೆ. ಜೊತೆಗೆ, ಹಲವಾರು ಔಷಧಿಗಳು ಮತ್ತು ನೋವು ನಿವಾರಕಗಳನ್ನು ಖರೀದಿಸಿದ್ದೇನೆ. ರಾತ್ರಿಯೆಲ್ಲ ನೋವಿನಿಂದ ಕಣ್ಣೀರು ಹಾಕಿದ್ದೇನೆ, ನಿದ್ರೆಯಿಲ್ಲದೆ ಬಳಲಿದ್ದೇನೆ, ಆತಂಕ ಮತ್ತು ಮಾನಸಿಕ ಯಾತನೆಯನ್ನು ಅನುಭವಿಸಿದ್ದೇನೆ. ಇವೆಲದಲವೂ ನನ್ನ ದೈನಂದಿನ ಕಾರ್ಯನಿರ್ವಹಣೆಯ ಮೇಲೆ ತೀವ್ರ ಪರಿಣಾಮ ಬೀರಿವೆ” ಎಂದು ಹೇಳಿದ್ದಾರೆ.

“ಪರಿಹಾರ ನೀಡಲು 15 ದಿನಗಳ ಒಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದು ಕೇವಲ ವೈಯಕ್ತಿಕ ಹೋರಾಟವಲ್ಲ, ಸಾಮಾಜಿಕ ಜವಾಬ್ದಾರಿಯ ಹೋರಾಟ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X