ವೈಟ್‌ ಫೀಲ್ಡ್‌-ಕೆ.ಆರ್‌.ಪುರ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

Date:

  • ₹4,249 ಕೋಟಿ ವೆಚ್ಚದ 13.71 ಕಿಲೋಮೀಟರ್ ಉದ್ದದ ನೂತನ ಮೆಟ್ರೋ ಮಾರ್ಗ
  • 13.71 ಕಿಲೋ ಮೀಟರ್‌ ಉದ್ದದ ನೇರಳೆ ಬಣ್ಣದ ಮಾರ್ಗದಲ್ಲಿ ಒಟ್ಟು 12 ನಿಲ್ದಾಣಗಳಿವೆ

ಬಹು ನಿರೀಕ್ಷಿತ ವೈಟ್‌ ಫೀಲ್ಡ್‌-ಕೆ.ಆರ್‌.ಪುರಂ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ನೂತನ ಮೆಟ್ರೋ ಮಾರ್ಗದ ಕಾರ್ಯಾಚರಣೆಯೊಂದಿಗೆ ಬೆಂಗಳೂರು ದೇಶದಲ್ಲೇ ಎರಡನೇ ಅತಿ ದೊಡ್ಡ ಮೆಟ್ರೋ ಮಾರ್ಗ ಹೊಂದಿದ ನಗರವೆಂಬ ಖ್ಯಾತಿ ಪಡೆದುಕೊಂಡಿದೆ.

ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೆಟ್ರೋದಲ್ಲಿ ಪ್ರಯಾಣಿಸಿದರು. ಪ್ರಯಾಣದ ವೇಳೆ, ವಿದ್ಯಾರ್ಥಿಗಳೊಂದಿಗೆ ಹಾಗೂ ಮೆಟ್ರೋ ಸಿಬ್ಬಂದಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು.

₹4,249 ಕೋಟಿ ವೆಚ್ಚದ 13.71 ಕಿಲೋಮೀಟರ್ ಉದ್ದದ ನೂತನ ಮೆಟ್ರೋ ಮಾರ್ಗ ಇದಾಗಿದೆ. 13.71 ಕಿಲೋ ಮೀಟರ್‌ ಉದ್ದದ ನೇರಳೆ ಬಣ್ಣದ ಈ ಮಾರ್ಗದಲ್ಲಿ ಒಟ್ಟು 12 ನಿಲ್ದಾಣಗಳು ಇವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಗುಡುಗು ಸಹಿತ ಮಳೆ; 9 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’

ಕೃಷ್ಣರಾಜಪುರ, ಸಿಂಗಯ್ಯನಪಾಳ್ಯ, ಗರುಡಾಚಾರ್ ಪಾಳ್ಯ, ಹೂಡಿ, ಸೀತಾರಾಮಪಾಳ್ಯ, ಕುಂದಲಹಳ್ಳಿ, ನಲ್ಲೂರು ಹಳ್ಳಿ, ಶ್ರೀ ಸತ್ಯಸಾಯಿ ಆಸ್ಪತ್ರೆ, ಪಟ್ಟಂದೂರು ಅಗ್ರಹಾರ, ಕಾಡುಗೋಡಿ ಟ್ರೀ ಪಾರ್ಕ್, ಹೋಪ್ ಫಾರ್ಮ್ ಚನ್ನಸಂದ್ರ, ವೈಟ್ ಫೀಲ್ಡ್ (ಕಾಡುಗೋಡು) ಸೇರಿ ಒಟ್ಟು 12 ನಿಲ್ದಾಣಗಳು ಈ ಮಾರ್ಗದಲ್ಲಿ ಬರಲಿವೆ.

ವೈಟ್​​ಫೀಲ್ಡ್​​ನಲ್ಲಿ ನಮ್ಮ ಮೆಟ್ರೋ ಕಾಮಗಾರಿ ಸಂಪೂರ್ಣವಾಗಿದೆ. ಆದರೆ, ಕೆ.ಆರ್.ಪುರ ನಿಲ್ದಾಣದಲ್ಲಿ ಇನ್ನೂ ಪಿಲ್ಲರ್‌ಗಳು, ಸೀಮೆಂಟ್ ಕಾರ್ಯ, ಸ್ಟೇಷನ್‌ಗೆ ಕಂಬಿಗಳನ್ನು ಅಳವಡಿಸುವುದು ಸೇರಿದಂತೆ ಅನೇಕ ಕಾಮಗಾರಿಗಳು ಬಾಕಿ ಉಳಿದಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖ್ಯಾತ ನಿರ್ದೇಶಕ ಶ್ರೀಪಾದ ಭಟ್‌ಗೆ ‘ರಂಗ ಭೂಪತಿ’ ಪ್ರಶಸ್ತಿ

ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ...

ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ...

‘ಬೆಂಗಳೂರು ಕೇಂದ್ರ’ ಮರಳಿ ಕಾಂಗ್ರೆಸ್ ವಶಕ್ಕೆ : ಸಚಿವ ಜಮೀರ್ ವಿಶ್ವಾಸ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು...

ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

"ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ...