ಸಿಸಿಟಿವಿ ಸ್ಥಗಿತಗೊಳಿಸಿ ಹೈಕೋರ್ಟ್ ನೆಲ ಮಹಡಿಯಲ್ಲಿ ಹುಟ್ಟುಹಬ್ಬ ಆಚರಣೆ: ಇಂಜಿನಿಯರ್​​ಗಳು ಸೇರಿ ಐವರ ಅಮಾನತು

Date:

Advertisements

ಕರ್ನಾಟಕ ಹೈಕೋರ್ಟ್‌ನ ಸರ್ಕಾರಿ ಕಚೇರಿಯೊಂದರಲ್ಲಿ ತಮ್ಮ ಇಲಾಖೆಯ ಸಹೋದ್ಯೋಗಿಗಳು ಮತ್ತು ಸ್ನೇಹಿತರ ಜೊತೆಗೂಡಿ ಹುಟ್ಟುಹಬ್ಬ ಆಚರಿಸಿದ ಆರೋಪದ ಮೇಲೆ ನಾಲ್ವರು ಇಂಜಿನಿಯರ್​ಗಳು ಹಾಗೂ ಓರ್ವ ಪ್ರಥಮ ದರ್ಜೆ ಸಹಾಯಕರೊಬ್ಬರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಸಹಾಯಕ ಇಂಜಿನಿಯರ್​​ಗಳಾದ ಲಾವಣ್ಯ, ಮೀನಾ ಎ.ಟಿ., ನವೀನ್, ಅಮೀನ್ ಎಸ್.ಆನದಿನ್ನಿ ಮತ್ತು ಪ್ರಥಮ ದರ್ಜೆ ಸಹಾಯಕರಾದ ಜಿ.ಹೆಚ್.ಚಿಕ್ಕಪ್ಪೇಗೌಡ ಎಂಬುವರು ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ.

ಹೈಕೋರ್ಟ್ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯ ವಿಶೇಷ ಕಟ್ಟಡದ ಉಪ ವಿಭಾಗದ ಕಚೇರಿಯಲ್ಲಿ ಕಳೆದ ತಿಂಗಳು ಮಾರ್ಚ್ 10ರಂದು ನಗರಾಭಿವೃದ್ಧಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿರುವ ಮೀನಾ ಎ.ಟಿ. ಅವರ ಹುಟ್ಟುಹಬ್ಬ ಆಚರಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರದ ಬೇರೆ ಕಚೇರಿಗಳಲ್ಲಿ ಸಹಾಯಕ ಇಂಜಿನಿಯರ್​​ಗಳಾಗಿ ಕಾರ್ಯನಿರ್ವಹಿಸುತ್ತಿದ್ದ ನವೀನ್, ಅಮೀನ್ ಎಸ್. ಆನದಿನ್ನಿ ಮತ್ತು ಇತರರು ಪಾಲ್ಗೊಂಡಿದ್ದರು.

Advertisements

ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಒಳಪಡುವ ಹೈಕೋರ್ಟ್ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆ ಕಟ್ಟಡದಲ್ಲಿ ಮೇಲಧಿಕಾರಿಗಳ ಅನುಮತಿ ಪಡೆಯದೇ ಹುಟ್ಟುಹಬ್ಬ ಆಚರಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು, ಈ ಬಗ್ಗೆ ತನಿಖೆ ನಡೆಸಿ ವರದಿ ಪಡೆದಿದ್ದರು. ಸರ್ಕಾರಿ ಕಚೇರಿಯಲ್ಲಿ ನಿರ್ದಿಷ್ಟಪಡಿಸಿದ ಗಣ್ಯ ವ್ಯಕ್ತಿಗಳ ಜಯಂತಿ ಮತ್ತು ಕಾರ್ಯಕ್ರಮ ನಡೆಸಲು ಮಾತ್ರ ಅವಕಾಶವಿದ್ದು, ಇತರರ ಜಯಂತಿ ಆಚರಣೆಗೆ ಅವಕಾಶ ಇರುವುದಿಲ್ಲ ಆದೇಶದಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ಯಾಚಾರ ಯತ್ನ ಮಾಮೂಲು ಸಂಗತಿಯೇ ಗೃಹಸಚಿವರೇ?

ಹುಟ್ಟುಹಬ್ಬ ಆಚರಣೆ ವೇಳೆ ಹೈಕೋರ್ಟ್​​ನಲ್ಲಿ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾವನ್ನು ಸ್ವಿಚ್ ಆಫ್ ಮಾಡಿರುವುದು ಸಹ ಗಂಭೀರ ಸ್ವರೂಪದ ಕರ್ತವ್ಯಲೋಪವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಮೇಲಧಿಕಾರಿಗಳ ಅನುಮತಿ ಪಡೆಯದೇ ಸಿಸಿ ಕ್ಯಾಮರಾ ಬಂದ್ ಮಾಡಿದ್ದು ಮತ್ತು ನಿಯಮಬಾಹಿರವಾಗಿ ಹುಟ್ಟುಹಬ್ಬ ಆಚರಿಸಿರುವುದು ಕರ್ನಾಟಕ ರಾಜ್ಯ ನಾಗರಿಕ (ನಡತೆ) ನಿಯಮಗಳು-2021ರ ನಿಯಮ 3(1)(1ರಿಂದ4) ಉಲ್ಲಂಘನೆಯಾಗಿದೆ ಎಂದು ತಿಳಿಸಿ ಈ ಎಲ್ಲ ಇಂಜಿನಿಯರ್​ಗಳು ಹಾಗೂ ಪ್ರಥಮ ದರ್ಜೆ ಸಹಾಯಕರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ, ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಸರ್ಕಾರದ ಆದೇಶದಂತೆ ಶಿವಮೊಗ್ಗದ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ (ಸಂಪರ್ಕ ಮತ್ತು ಕೇಂದ್ರ) ಅವರು ಸರ್ಕಾರಿ ಕಚೇರಿಯಲ್ಲಿ ಹುಟ್ಟುಹಬ್ಬದ ಆಚರಣೆ ಪ್ರಕರಣದ ಬಗ್ಗೆ ತನಿಖೆ ನಡೆಸಿ, ಶಿಸ್ತುಕ್ರಮ ಜರುಗಿಸುವಂತೆ ಶಿಫಾರಸು ಮಾಡಿದ್ದರು. ಹುಟ್ಟುಹಬ್ಬದ ಸಂದರ್ಭದಲ್ಲಿ ಹೈಕೋರ್ಟ್​​ನ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾ ಸ್ವಿಚ್ ಆಫ್ ಮಾಡಿದ್ದನ್ನು ಗಂಭೀರ ಸ್ವರೂಪದ ಕರ್ತವ್ಯಲೋಪವೆಂದು ಪರಿಗಣಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X