ಬೆಂಗಳೂರಿನ ಬಹುತೇಕ ಕಡೆ ಭಾನುವಾರ ತಡ ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಂಗಳೂರಿನಲ್ಲಿನ ಮಳೆ ಆರ್ಭಟದ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಎಕ್ಸ್ ತಾಣದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, “ಬೆಂಗಳೂರಿನಲ್ಲಿ ಮಳೆಯಿಂದ ಎಲ್ಲೆಲ್ಲಿ ಏನಾಗಿದೆ ಎಂದು ನಮ್ಮ ಅಧಿಕಾರಿಗಳ ತಂಡ ಮಾಹಿತಿ ಕಲೆಹಾಕುತ್ತಿದೆ. ನಗರದಲ್ಲಿ ಮಳೆಯ ಪರಿಸ್ಥಿತಿಯನ್ನು ನಿಭಾಯಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.
“ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಉಂಟಾದ ಹಾನಿಯಿಂದ ತೀವ್ರ ಕಳವಳಗೊಂಡಿದ್ದೇನೆ. ನಾನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ನಾನು ಬೆಂಗಳೂರಿನ ಸಮಸ್ಯೆಗಳ ಪರಿಹಾರಕ್ಕೆ ಬದ್ಧನಾಗಿರುತ್ತೇನೆ. ಸವಾಲುಗಳನ್ನು ಎದುರಿಸಲು ಮತ್ತು ಪರಿಹಾರವನ್ನು ಖಚಿತಪಡಿಸಿಕೊಳ್ಳಲು 24/7 ಶ್ರಮಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.
“ಬಿಬಿಎಂಪಿ ವಾರ್ ರೂಮ್ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ವಾಸ್ತವಿಕವಾಗಿ ಮಾಹಿತಿ ಪಡೆಯುತ್ತೇನೆ. ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳು ಹೊಸದಲ್ಲ. ಹಿಂದಿನ ಸರ್ಕಾರಗಳು ಅವುಗಳನ್ನು ವರ್ಷಗಳಿಂದ ನಿರ್ಲಕ್ಷಿಸಲಾಗಿದೆ. ಈಗ ಒಂದೇ ವ್ಯತ್ಯಾಸವೆಂದರೆ – ನಾವು ಅವುಗಳನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.
“ತಾತ್ಕಾಲಿಕ ಪರಿಹಾರಗಳೊಂದಿಗೆ ಅಲ್ಲ, ಆದರೆ ದೀರ್ಘಕಾಲೀನ, ಸುಸ್ಥಿರ ಪರಿಹಾರಗಳೊಂದಿಗೆ ಎಂಬುದು ಸ್ಪಷ್ಟ ಪಡಿಸುತ್ತೇನೆ. ನಾನು ಸಹ ಬೆಂಗಳೂರಿಗ. ನಿಮ್ಮ ಕಳವಳಗಳನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ನಿಮ್ಮ ಹತಾಶೆಯನ್ನು ಹಂಚಿಕೊಳ್ಳುತ್ತೇನೆ ಮತ್ತು ಅವುಗಳನ್ನು ಪರಿಹರಿಸುವತ್ತ ಗಮನ ಕೊಡುವೆ” ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
Deeply concerned by the havoc caused by relentless rains in Bengaluru.
— DK Shivakumar (@DKShivakumar) May 19, 2025
I’ve been in continuous touch with the concerned officers and I'm closely monitoring the situation.
As always, I remain committed to Bengaluru – working round the clock to address challenges and ensure…