ರಂಜಾನ್ | ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸಿದ್ಧತೆ, ಸಚಿವ ಜಮೀರ್ ಭಾಗಿ

Date:

Advertisements

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. 30 ದಿನಗಳ ಉಪವಾಸ ಇಂದಿಗೆ ಅಂತ್ಯವಾಗಲಿದ್ದು, ಈಗಾಗಲೇ ಈದ್ಗಾ ಮೈದಾನದಲ್ಲಿ ಮುಸ್ಲಿಮ ಸಮುದಾಯದವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲು ಜಮಾಯಿಸಿದ್ದಾರೆ.

ಸಚಿವ ಜಮೀರ್ ಅಹಮದ್ ಖಾನ್ ಅವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಲಿದ್ದಾರೆ. ಈದ್ಗಾ ಮೈದಾನದ ಸುತ್ತಮುತ್ತಲೂ ಹೆಚ್ಚಿನ ಜನ ಸೇರುವ ಸಾಧ್ಯತೆಯಿದ್ದು, ಬೆಳಗ್ಗೆ 9 ರಿಂದ 12 ಗಂಟೆಯವರೆಗೆ ಗಾಳಿ ಆಂಜನೇಯ ದೇವಸ್ಥಾನದಿಂದ ಟೌನ್ ಹಾಲ್‌ವರೆಗಿನ ರಸ್ತೆಯನ್ನು ಬಂದ್ ಮಾಡಲಾಗಿದೆ. ಈದ್ಗಾ ಮೈದಾನದ ಸುತ್ತಮುತ್ತಲೂ 500ಕ್ಕೂ ಹೆಚ್ಚು ಪೊಲೀಸರು, ಕೆಎಸ್ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ರಸ್ತೆಗಳಲ್ಲಿ ಸಂಚಾರ ನಿರ್ಬಂಧ

Advertisements

ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೋಲೋ ಜಂಕ್ಷನ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌ವರೆಗೆ, ಸಾಯಿರಾಂ ಜಂಕ್ಷನ್‌ನಿಂದ ಗುರಪ್ಪನಪಾಳ್ಯ ಜಂಕ್ಷನ್‌ವರೆಗೆ ಹಾಗೂ ಗುರಪ್ಪನಪಾಳ್ಯ ಜಂಕ್ಷನ್‌ನಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್‌ವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಈ ರಸ್ತೆಗಳಲ್ಲಿ ಸಂಚರಿಸುವವರು ಪರ್ಯಾಯವಾಗಿ ಡೈರಿ ಸರ್ಕಲ್ ಕಡೆಯಿಂದ ತಿಲಕ್ ನಗರ, ಸ್ವಾಗತ್ ಜಂಕ್ಷನ್, ಜಯನಗರ ಈಸ್ಟ್ ಎಂಡ್ ಮೂಲಕ ಜಯದೇವ ಕಡೆ ತಲುಪಲು ಸೂಚಿಸಲಾಗಿದೆ‌. ಅದೇ ರೀತಿ ಬನ್ನೇರುಘಟ್ಟ ರಸ್ತೆಯಿಂದ ಬರುವ ವಾಹನಗಳು ಜೇಡಿಮರ ಜಂಕ್ಷನ್, ಜಯದೇವ, ಈಸ್ಟ್ ಎಂಡ್, ಸ್ವಾಗತ್ ಜಂಕ್ಷನ್ ಮೂಲಕ ಡೈರಿ ಸರ್ಕಲ್ ತಲುಪಲು ಸೂಚಿಸಲಾಗಿದೆ.

ಪೂರ್ವ ವಿಭಾಗದ ನಾಗವಾರ ಪಾಟರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಬದಲಿಯಾಗಿ ನಾಗವಾರ ಕಡೆಯಿಂದ ಬರುವ ವಾಹನಗಳು ಹೆಣ್ಣೂರು ಜಂಕ್ಷನ್, ಕಾಚರಕನಹಳ್ಳಿ, ಲಿಂಗರಾಜಪುರಂ, ಪುಲಕೇಶಿನಗರ ಪೊಲೀಸ್ ಠಾಣೆ, ಹೇನ್ಸ್ ರಸ್ತೆ ಮೂಲಕ ಸಂಚಾರ ಮಾಡಲು ಸೂಚಿಸಲಾಗಿದೆ. ಶಿವಾಜಿನಗರ ಕಡೆಯಿಂದ ಸಂಚರಿಸುವ ವಾಹನಗಳು ಸ್ಪೆನ್ಸರ್ ರಸ್ತೆ, ಕೋಲ್ಸ್ ರಸ್ತೆ, ವೀಲರ್ಸ್ ರಸ್ತೆ ಮೂಲಕ ನಾಗವಾರ, ಬಾಣಸವಾಡಿ ಕಡೆಗೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರ ನಿರ್ಬಂಧವಿರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ದಿ.31 ಮಾರ್ಚ್ ರ ಸಮಾಚಾರ ದಲ್ಲಿ ಗೌರವಾನ್ವಿತ ಸಚಿವರಾದ ಝಮೀರ್ ಅಹ್ಮದ್ ಖಾನ್ ರವರ್ ಹೆಸರನ್ನು ಬರಿ “ಸಚಿವ ಝಮೀರ” ಎಂದು ಏಕ ವಚನ ಬಳಸಿರುವುದು ಸೂಕ್ತವಲ್ಲ. ಗೌರವ ಸೂಚಕ ಪದ ಬಳಕೆಯಲ್ಲಿ ಆಗುವ ಕಷ್ಟವಾದರೂ ಏನು? ಇದರ ಕಡೆ ಗಮನ ಹರಿಸುವಿರೆಂದು ಆಶಿಸುತ್ತೇನೆ. ಧನ್ಯವಾದಗಳು.(ಐ ಎನ್ ಹುಲಿಕಟ್ಟಿ)

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X