ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಎ5 ಆರೋಪಿ

Date:

Advertisements

ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಕೆ ಆರ್‌ ಪುರಂನ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದೆ.

ಕೊಲೆ ಸಂಬಂಧ ಶಿವಪ್ರಕಾಶ್‌ ತಾಯಿ ವಿಜಯಕ್ಷ್ಮಿ ಭಾರತಿನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಬೈರತಿ ಬಸವರಾಜ್‌ ಎ5 ಆರೋಪಿಯಾಗಿದ್ದು ಜಗದೀಶ್ ಎ1 , ಕಿರಣ್ ಎ2 ವಿಮಲ್ ಎ3, ಅನಿಲ್ ಎ4 ಆರೋಪಿಗಳಾಗಿದ್ದಾರೆ.

ಕಿತ್ತಕನೂರು ಜಾಗದ ವಿಚಾರವಾಗಿ ಕೊಲೆ ಮಾಡಲಾಗಿದೆ. ಬಿಳಿ ಬಣ್ಣದ ಸ್ಕಾರ್ಪಿಯೋದಲ್ಲಿ 8 ರಿಂದ 9 ಮಂದಿ ಬಂದು ಮಚ್ಚಿನಿಂದ ಹೊಡೆದಿದ್ದಾರೆ. ಕೊಲೆ ಮಾಡಿರುವ ಆರೋಪಿಗಳು ಹಲವು ಬಾರಿ ಮಗನಿಗೆ ಬೆದರಿಕೆ ಹಾಕಿದ್ದರು. ಮಾಜಿ ಸಚಿವ ಬೈರತಿ ಬಸವರಾಜ್ , ಜಗದೀಶ್ ಮತ್ತು ಇತರರಿಂದ ನನಗೆ ಪ್ರಾಣ ಬೆದರಿಕೆಯಿದೆ ಎಂದು ಮಗ ಹಲವು ಬಾರಿ ಹೇಳಿದ್ದ. ಬಸವರಾಜ್ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಶಿವಪ್ರಕಾಶ್ ತಾಯಿ ಆರೋಪಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

ಈ ಫೆಬ್ರವರಿ 21 ರಂದು ಶಿವಪ್ರಕಾಶ್‌ ಜಗದೀಶ್‌ ಮತ್ತು ಇತರರ ವಿರುದ್ಧ ಭಾರತಿ ನಗರ ಠಾಣೆಯಲ್ಲಿ ದೂರು ನೀಡಿದ್ದ. ಕಿತ್ತಕನೂರು ಬಳಿ ನಾನು ಜಾಗವನ್ನು ಖರೀದಿಸಿದ್ದೆ. ಈ ಜಾಗವನ್ನು ಮಾರಾಟ ಮಾಡಬೇಕೆಂದು ಜಗದೀಶ್‌ ಮತ್ತು ಇತರರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರು ನೀಡಿದ್ದ. ಈ ಸಂಬಂಧ ಜಗದೀಶ್‌ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಬೆದರಿಕೆ ಹಾಕಿದ್ದ ವಿಡಿಯೊ ಸಮೇತ ಬೈರತಿ ಬಸವರಾಜ್, ಜಗದೀಶ್ ಅಲಿಯಾಸ್ ಜಗ್ಗ ಹಾಗೂ ಕಿರಣ್ ಸಹಚರರ ವಿರುದ್ಧ ಶಿವಪ್ರಕಾಶ್ ದೂರು ನೀಡಿದ್ದಾರೆ ಎನ್ನಲಾಗಿದೆ. ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಇದೀಗ ದೂರು ಕೊಟ್ಟ ನಾಲ್ಕು ತಿಂಗಳಲ್ಲಿ ಶಿವಪ್ರಕಾಶ್ ಕೊಲೆಯಾಗಿದ್ದು, ಅದೇ ಗ್ಯಾಂಗ್‌ನಿಂದ ಕೊಲೆಯಾಗಿರುವ ಬಗ್ಗೆ ಪೊಲೀಸರ ಶಂಕೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X