ಶಾಲೆ ಆರಂಭದ ದಿನ | ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ಸಿಹಿ ತಿನಿಸು ಕಡ್ಡಾಯ

Date:

  • ಹೊಸ ಶೈಕ್ಷಣಿಕ ವರ್ಷದಲ್ಲಿ 224 ದಿನ ಕಾರ್ಯನಿರ್ವಹಿಸಲಿರುವ ಶಾಲೆಗಳು
  • ಜೂನ್ 1ರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ

ಬೇಸಿಗೆ ರಜೆ ಮುಗಿಸಿ ವಿದ್ಯಾರ್ಥಿಗಳು ಸೋಮವಾರದಿಂದ ಶಾಲೆಗೆ ಮರಳುತ್ತಿದ್ದಾರೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆ ಆರಂಭದ ದಿನ ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡುವಂತೆ ಸರ್ಕಾರ ಸೂಚನೆ ನೀಡಿದೆ.

ಈ ಕುರಿತಂತೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, “ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳು ಶಾಲೆ ಆರಂಭವಾದ ಮೊದಲ ದಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡಬೇಕು. ಮಕ್ಕಳು ಶಾಲೆಗೆ ಬರುವ ಮುನ್ನ ತರಗತಿಯ ಕೊಠಡಿಗಳು, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು, ನೀರಿನ ಸಂಪ್‌ಗಳು, ಅನಗತ್ಯ ವಸ್ತುಗಳ ವಿಲೇವಾರಿ, ಶಾಲೆ ಆವರಣ ಸ್ವಚ್ಛಗೊಳಿಸಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ.

224 ದಿನ ಕಾರ್ಯನಿರ್ವಹಿಸಲಿರುವ ಶಾಲೆಗಳು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2023-24ರ ಹೊಸ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು 224 ದಿನ ಕಾರ್ಯನಿರ್ವಹಿಸಲಿದ್ದು, ಪ್ರತಿ ತರಗತಿಗೆ ವೇಳಾಪಟ್ಟಿಯನ್ನು ಸಿದ್ಧವಾಗಿರಿಸಬೇಕು ಎಂದು ಹೇಳಿದೆ.

ಜೂನ್‌ 1ರಿಂದ ರಿಂದ ಅಕ್ಟೋಬರ್‌ 7ರವರೆಗೆ ಶಾಲೆಗಳು ಕಾರ್ಯನಿರ್ವಹಿಸುತ್ತವೆ. ಅಕ್ಟೋಬರ್ 8 ರಿಂದ ಅಕ್ಟೋಬರ್ 24 ರವರೆಗೆ ದಸರಾ ರಜೆ ನೀಡಲಾಗುತ್ತದೆ.

ಅಕ್ಟೋಬರ್ 25 ರಂದು ಎರಡನೇ ಅವಧಿಗೆ ಶಾಲೆಗಳು ಪ್ರಾರಂಭವಾಗಿ 2024ರ ಏ. 10ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಜೂನ್ 1ರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಾಗಿದ್ದು, ಬೋಧನೆ ಪ್ರಾರಂಭವಾಗಲಿದೆ.

ಶಾಲಾ ಆರಂಭದ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ

ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಶಾಲೆಗಳ ಆರಂಭದ ದಿನವೇ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಕಡ್ಡಾಯವಾಗಿ ವಿತರಿಸಬೇಕು ಎಂದು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಇನ್ನುಳಿದಂತೆ ಬಾಕಿ ಇರುವ ವಿದ್ಯಾರ್ಥಿಗಳಿಗೆ ಆಧಾರ್ ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕೆಐಎನಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ವಶ

‘ಪ್ರಮೋಷನ್‌ನೊಂದಿಗೆ ಪ್ರವೇಶ’ ಪ್ರಕ್ರಿಯೆ ‘ವಿದ್ಯಾ ಪ್ರವೇಶ’ ಅಥವಾ ಮೊದಲ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ತಯಾರಿ ಮಾಡ್ಯೂಲ್ ಚಟುವಟಿಕೆಗಳು ಜೂನ್ 1 ರಂದು ಪ್ರಾರಂಭವಾಗುತ್ತವೆ ಮತ್ತು 40 ದಿನಗಳ ಅವಧಿಯವರೆಗೆ ಮುಂದುವರಿಯುತ್ತವೆ.

‘ಬಡ್ತಿಯೊಂದಿಗೆ ಪ್ರವೇಶ’ ಪ್ರಕ್ರಿಯೆಯಡಿ ಮುಂದಿನ ತರಗತಿಗಳಿಗೆ ಎಲ್ಲ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಸೇರಿಸಿಕೊಳ್ಳಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.

‘ಮಿಂಚಿನ ಸಂಚಾರ’ ಅಭಿಯಾನದಡಿ ಜಾರಿ ಅಧಿಕಾರಿಗಳು ಜೂನ್ 1 ರಿಂದ ಜೂನ್ 15ರ ನಡುವೆ ಎಲ್ಲ ಶಾಲೆಗಳಿಗೆ ಭೇಟಿ ನೀಡಿ ನಾನಾ ಕಲಿಕಾ ಕಾರ್ಯಕ್ರಮಗಳು, ಮೂಲಸೌಕರ್ಯ ಮತ್ತು ಶಾಲೆಗಳ ಇತರ ಅಂಶಗಳನ್ನು ಪರಿಶೀಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ದ್ವೇಷ ಭಾಷಣ: ಕ್ರಮಕ್ಕೆ ಆಗ್ರಹಿಸಿ ನಾಗರಿಕ ಸಂಸ್ಥೆಗಳಿಂದ ಚುನಾವಣಾ ಆಯೋಗಕ್ಕೆ ದೂರು

ಕಳೆದ ಏಪ್ರಿಲ್ 21ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ...

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...