‘ನಮ್ಮ ಮೆಟ್ರೋ’ ಕಾಮಗಾರಿ ವೇಳೆ 30ಕ್ಕೂ ಹೆಚ್ಚು ಬಲಿ; ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ನಿಗಮ

Date:

  • 2007ರಲ್ಲಿ ಪ್ರಾರಂಭವಾದ ಮೆಟ್ರೋ ನಿರ್ಮಾಣ ಕಾಮಗಾರಿಯಲ್ಲಿ 38 ಜನರು ಸಾವು
  • ಇದುವರೆಗೆ ಸಂತ್ರಸ್ತ ಕುಟುಂಬಗಳಿಗೆ ₹3.15 ಕೋಟಿ ಪರಿಹಾರ ನೀಡಿದ ಗುತ್ತಿಗೆದಾರರು

‘ನಮ್ಮ ಮೆಟ್ರೋ’ ನಿರ್ಮಾಣ ಕಾಮಗಾರಿ ವೇಳೆ ಇಲ್ಲಿಯವರೆಗೆ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಆದರೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಯಾವುದೇ ಕ್ರಮ ಕೈಗೊಂಡಿಲ್ಲ.

- Advertisement -

2007ರಲ್ಲಿ ಪ್ರಾರಂಭವಾದ ಮೆಟ್ರೋ ನಿರ್ಮಾಣ ಕಾಮಗಾರಿಯಲ್ಲಿ ಇಲ್ಲಿಯವರೆಗೆ 38 ಜನರು ಸಾವನ್ನಪ್ಪಿದ್ದಾರೆ. 50 ಜನರು ಗಾಯಗೊಂಡಿದ್ದಾರೆ ಎಂದು ದಾಖಲೆಗಳು ಹೇಳುತ್ತವೆ. 2023ರ ಜನವರಿಯಲ್ಲಿ ನಡೆದ ಅಪಘಾತವನ್ನು ಹೊರತುಪಡಿಸಿ, ಇನ್ನುಳಿದ ಎಲ್ಲ ಅಪಘಾತಗಳಲ್ಲಿ ಗುತ್ತಿಗೆ ಸಿಬ್ಬಂದಿಗಳು ಬಲುಯಾಗಿದ್ದಾರೆ ಎಂದು ಬಿಎಂಆರ್‌ಸಿಎಲ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಬಿಎಂಆರ್‌ಸಿಎಲ್‌ ರೀಚ್ 2 ವಿಸ್ತರಣೆಯಲ್ಲಿ (ಪರ್ಪಲ್ ಲೈನ್‌ನ ಪಶ್ಚಿಮ ಭಾಗ) ಎರಡು ಸಾವುಗಳು ಸಂಭವಿಸಿವೆ. ನಿರ್ಮಾಣದ ಸಮಯದಲ್ಲಿ ಯಾವುದೇ ಸಾರ್ವಜನಿಕ ಸದಸ್ಯರು ಗಾಯಗೊಂಡಿಲ್ಲ ಅಥವಾ ಸಾವನ್ನಪ್ಪಿಲ್ಲ ಎಂದು ನಿಗಮ ಹೇಳಿದೆ.

ಬಿಎಂಆರ್‌ಸಿಎಲ್ ಗೊಟ್ಟಿಗೆರೆಯಿಂದ ಡೈರಿ ವೃತ್ತದವರೆಗಿನ ರೀಚ್ 6 ಎಲಿವೇಟೆಡ್ ಭಾಗದ ಕಾಮಗಾರಿಯಲ್ಲಿ ಡೆಲಿವರಿ ಬಾಯ್ ಸುಶೀಲ್ ಕಾಂಚನ್ ಮತ್ತು ಅನಂದಪ್ಪ ಇಬ್ಬರು ಸಾರ್ವಜನಿಕರು ಮೃತಪಟ್ಟಿದ್ದರು. ಈ ಅವಧಿಯಲ್ಲಿ ಈ ಇಬ್ಬರು ಸೇರಿದಂತೆ ಏಳು ಜನ ಸಾವನ್ನಪ್ಪಿದ್ದಾರೆ ಎಂದು ನಿಗಮ ವಿವರ ನೀಡಿದೆ.

ಮೃತಪಟ್ಟ ಸುಶೀಲ್ ಅವರ ಕುಟುಂಬಕ್ಕೆ ಗುತ್ತಿಗೆದಾರರು ಪಾವತಿಸಿದ ಪರಿಹಾರದ ಮೊತ್ತವನ್ನು ದಾಖಲೆಯಲ್ಲಿ ಬಹಿರಂಗಪಡಿಸಿಲ್ಲ ಮತ್ತು ಅನಂದಪ್ಪ ಅವರ ಕುಟುಂಬದವರು ಪರಿಹಾರವನ್ನು ಪಡೆಯಲು ನಿರಾಕರಿಸಿದ್ದರು. ಇತರ 29 ಮಂದಿಯ ಸಾವಿಗೆ ಸಂಬಂಧಿಸಿದಂತೆ ನಿಗಮ ಯಾವುದೇ ಮಾಹಿತಿಯನ್ನು ನೀಡಿಲ್ಲ.

ಅಪಘಾತಗಳ ಕಾರಣವನ್ನು ಅಧ್ಯಯನ ಮಾಡಲು ಸುರಕ್ಷತಾ ಎಚ್ಚರಿಕೆಗಳು ಮತ್ತು ನಿರ್ದೇಶನಗಳೊಂದಿಗೆ ಹಾಗೇಯೇ ಬಿಟ್ಟ ಅಧಿಕಾರಿಗಳ ವಿರುದ್ಧ ನಿಗಮ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಪಟ್ಟಿ ಮಾಡಲಾದ ಎಲ್ಲ ಪ್ರಕರಣಗಳಲ್ಲಿ ಕಾರ್ಮಿಕರ ನಿರ್ಲಕ್ಷ್ಯ ಅಥವಾ ಗುತ್ತಿಗೆದಾರರು ಕೆಲಸ ಪ್ರಾರಂಭಿಸುವ ಮೊದಲು ಅಧಿಕಾರಿಗಳಿಗೆ ತಿಳಿಸಿಲ್ಲ ಎಂಬ ಕಾರಣಗಳನ್ನು ಉಲ್ಲೇಖಿಸಲಾಗಿದೆ.

ಗುತ್ತಿಗೆದಾರರಿಗೆ ನೋಟೀಸ್‌ ನೀಡಲಾಗಿದೆ. ಅಥವಾ 1 ಲಕ್ಷದಿಂದ 5 ಲಕ್ಷದವರೆಗೆ ದಂಡವನ್ನು ವಿಧಿಸಲಾಯಿತು. ಸಂತ್ರಸ್ತರಿಗೆ ಅಥವಾ ಅವರ ಕುಟುಂಬಗಳಿಗೆ ₹5.5 ಲಕ್ಷದಿಂದ ₹16 ಲಕ್ಷದವರೆಗೆ ಪರಿಹಾರವನ್ನು ನೀಡಲಾಯಿತು ಎಂದು ಮಾಹಿತಿ ನೀಡಿದೆ.

ಪಟ್ಟಿ ಮಾಡಲಾದ ಒಂಬತ್ತು ಪ್ರಕರಣಗಳಲ್ಲಿ ಐದರಲ್ಲಿ ಗುತ್ತಿಗೆದಾರರ ವಿರುದ್ಧವೂ ಯಾವುದೇ ಕ್ರಮ ಕೈಗೊಂಡಿಲ್ಲ.

ಜನವರಿಯಲ್ಲಿ ಎಚ್‌ಬಿಆರ್ ಲೇಔಟ್‌ನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮತ್ತು ಆಕೆಯ ಪುಟ್ಟ ಮಗು ಸಾವನ್ನಪ್ಪಿದ ಪ್ರಕರಣದ ನಂತರ, ಬಿಎಂಆರ್‌ಸಿಎಲ್ ಮೂವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ. ಗುತ್ತಿಗೆದಾರರಿಗೆ ₹15 ಲಕ್ಷ ದಂಡ ವಿಧಿಸಿ ಅವರಿಂದ ಕಾರಣ ಕೇಳಿದೆ. ಗುತ್ತಿಗೆದಾರರು, ಮೂವರು ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? ಸುರಕ್ಷಿತ ಮಟ್ಟಕ್ಕಿಂತ ಕೆಟ್ಟದಾದ ಬೆಂಗಳೂರಿನ ವಾಯು ಗುಣಮಟ್ಟ: ವರದಿ

ಇದುವರೆಗೆ ಗುತ್ತಿಗೆದಾರರು ಸಂತ್ರಸ್ತರ ಕುಟುಂಬಗಳಿಗೆ ₹3.15 ಕೋಟಿ ಪರಿಹಾರ ನೀಡಿದ್ದರೆ, ಬಿಎಂಆರ್‌ಸಿಎಲ್‌ ಗುತ್ತಿಗೆದಾರರಿಂದ ₹1.77 ಕೋಟಿ ದಂಡ ವಿಧಿಸಿದೆ.

ಕಾಮಗಾರಿ ವೇಳೆ ಅಪಘಾತ ಸಂಭವಿಸಿದರೆ, ಗಾಯವಾಗಿದ್ದರೆ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸಂಬಂಧಪಟ್ಟ ಗುತ್ತಿಗೆದಾರರೇ ಭರಿಸುತ್ತಾರೆ. ಕಾರ್ಮಿಕರು ಸುರಕ್ಷತಾ ಹೆಲ್ಮೆಟ್ ಮತ್ತು ಬಲವರ್ಧಿತ ಬೂಟುಗಳನ್ನು ಧರಿಸಬೇಕು ಎಂದು ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಸುದ್ದಿ ಮಾಹಿತಿ : ಡೆಕ್ಕನ್ ಹೆರಾಲ್ಡ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...