ಬೇಡಿಕೆ ಮೇರೆಗೆ ಕೇರಳದ ಕೊಚುವೇಲಿ-ಬೆಂಗಳೂರು ನಡುವೆ ವಿಶೇಷ ರೈಲು ಆರಂಭ

Date:

Advertisements
  • ಈ ವಿಶೇಷ ರೈಲುಗಳು 20 ಬೋಗಿಗಳನ್ನು ಹೊಂದಿದ್ದು, ಹತ್ತು ಟ್ರಿಪ್‌ಗಳಲ್ಲಿ ಸಂಚಾರ
  • ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದಾಗಿವೆ

ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಮತ್ತು ಬೇಡಿಕೆ ಮೇರೆಗೆ ಕೇರಳದ ಕೊಚುವೇಲಿ ಇಂದ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲು ದಕ್ಷಿಣ ರೈಲ್ವೆ ವಲಯ ನಿರ್ಧರಿಸಿದೆ.

ಏ. 25ರಿಂದ ಜೂನ್ 27 ರವರೆಗೆ ಪ್ರತಿ ಮಂಗಳವಾರ (ರೈಲು ಸಂಖ್ಯೆ 06083) ಕೊಚುವೇಲಿಯಿಂದ ಸಂಜೆ 06:05 ಗಂಟೆಗೆ ರೈಲು ಹೊರಡಲಿದೆ. ಮರುದಿನ ಬೆಳಿಗ್ಗೆ 10:55 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ವಿಶೇಷ ರೈಲು ಆಗಮಿಸಲಿದೆ.

ಈ ರೈಲು ಮಾರ್ಗದಲ್ಲಿ ಕೊಲ್ಲಂ, ಕಾಯಂಕುಲಂ, ಮಾವೇಲಿಕರ, ಚೆಂಗನ್ನೂರ್, ತಿರುವಳ್ಳ, ಚೆಂಗನಸೇರಿ, ಕೊಟ್ಟಾಯಂ, ಎರ್ನಾಕುಲಂ ಟೌನ್, ಅಲುವಾ, ತ್ರಿಶೂರ್, ಪಾಲಕ್ಕಾಡ್, ಕೊಯಮತ್ತೂರು, ತಿರುಪ್ಪೂರ್, ಈರೋಡ್, ಸೇಲಂ, ತಿರುಪತ್ತೂರ್, ಬಂಗಾರಪೇಟೆ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಿಗೆ ವಿಶೇಷ ರೈಲು ಆಗಮಿಸಿ/ನಿರ್ಗಮಿಸಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಹೇಳಿದೆ.

Advertisements

ಏಪ್ರಿಲ್ 26 ರಿಂದ ಜೂನ್ 28 ರವರೆಗೆ ಪ್ರತಿ ಬುಧವಾರ (ರೈಲು ಸಂಖ್ಯೆ-06084) ಬೆಂಗಳೂರಿನಿಂದ ಮಧ್ಯಾಹ್ನ 12:45 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಹೊರಡುವ ವಿಶೇಷ ರೈಲು, ಮರುದಿನ ಬೆಳಗ್ಗೆ 6 ಗಂಟೆಗೆ ಕೊಚುವೇಲಿ ನಿಲ್ದಾಣ ತಲುಪಲಿದೆ.

ಈ ರೈಲು ಮಾರ್ಗದಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ತಿರುಪತ್ತೂರ್, ಸೇಲಂ, ಈರೋಡ್, ತಿರುಪ್ಪೂರ್-, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚೆಂಗನಸೇರಿ, ತಿರುವಳ್ಳ, ಚೆಂಗನ್ನೂರ, ಮಾವೇಲಿಕರ, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಿಗೆ ಆಗಮಿಸಿ/ನಿರ್ಗಮಿಸಲಿದೆ. ಈ ವಿಶೇಷ ರೈಲುಗಳು 20 ಬೋಗಿಗಳನ್ನು ಹೊಂದಿರಲಿದೆ.

ಈ ಸುದ್ದಿ ಓದಿದ್ದೀರಾ? ಯುವ ಪೀಳಿಗೆ ಮನಸ್ಸು ಮಾಡಿದರೆ ಯಾವುದೇ ರಂಗದಲ್ಲಿ ಬದಲಾವಣೆ ತರಲು ಸಾಧ್ಯ: ತುಷಾರ್ ಗಿರಿನಾಥ್

ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದು

ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ಹಳಿಗಳ ಕಾರಿಡಾರ್ ಬ್ಲಾಕ್​ಗಳ ನಿರ್ವಹಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಏಪ್ರಿಲ್ ತಿಂಗಳಲ್ಲಿ​ ರೈಲುಗಳು ರದ್ದಾಗಿವೆ.

ಭಾಗಶಃ ರದ್ದಾದ ರೈಲುಗಳು

  • (ರೈಲು ಸಂಖ್ಯೆ 12678) ಏಪ್ರಿಲ್​​ 27 ರಂದು ಕೇರಳದ ಎರನಾಕುಲಂನಿಂದ ಹೊರಟು ಕೆಎಸ್​ಆರ್​​ ಬೆಂಗಳೂರು ತಲುಪಲಿದ್ದ ಡೈಲಿ ಸೂಪರ್​​​​ಫಾಸ್ಟ್​ ಎಕ್ಸಪ್ರೆಸ್​ ​ರದ್ದಾ​ಗಿದೆ.
  • (ರೈಲು ಸಂಖ್ಯೆ 12677) ಏಪ್ರಿಲ್​​ 28 ರಂದು ಕೆಎಸ್​ಆರ್​ ಬೆಂಗಳೂರು-ಎರನಾಕುಲಂ ಮಧ್ಯೆ ಸಂಪರ್ಕ ಕಲ್ಪಿಸಲಿರುವ ಡೈಲಿ ಸೂಪರ್​​​​ಫಾಸ್ಟ್ ಎಕ್ಸಪ್ರೆಸ್​ ರದ್ದಾಗಿದೆ.
  • (ರೈಲು ಸಂಖ್ಯೆ 12677) ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಏಪ್ರಿಲ್ 26 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ಇಲ್ಲ. ಎಸ್‌ಎಂವಿಟಿ ಬೆಂಗಳೂರಿನಿಂದ ಬೆಳಿಗ್ಗೆ 6.10 ಕ್ಕೆ ಹೊರಟಿದೆ.
  • (ರೈಲು ಸಂಖ್ಯೆ 01772): ಮಾರಿಕುಪ್ಪಂ-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು, ಏಪ್ರಿಲ್ 26 ರಂದು ಮಾರಿಕುಪ್ಪಂನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ ಕೊನೆ ನಿಲ್ದಾಣವಾಗಿದೆ.
  • (ರೈಲು ಸಂಖ್ಯೆ 06396): ಕೆಎಸ್​ಆರ್​ ಬೆಂಗಳೂರು-ಮಾರಿಕುಪ್ಪಂ ಎಮ್​ಇಎಮ್​ಯು ವಿಶೇಷ ರೈಲು, ಏಪ್ರಿಲ್ 26 ರಂದು ನಿಗದಿತ ಸಮಯದಲ್ಲಿ ಕಂಟೋನ್ಮೆಂಟ್‌ನಿಂದ ಹೊರಡಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X