ಬೇಡಿಕೆ ಮೇರೆಗೆ ಕೇರಳದ ಕೊಚುವೇಲಿ-ಬೆಂಗಳೂರು ನಡುವೆ ವಿಶೇಷ ರೈಲು ಆರಂಭ

Date:

  • ಈ ವಿಶೇಷ ರೈಲುಗಳು 20 ಬೋಗಿಗಳನ್ನು ಹೊಂದಿದ್ದು, ಹತ್ತು ಟ್ರಿಪ್‌ಗಳಲ್ಲಿ ಸಂಚಾರ
  • ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದಾಗಿವೆ

ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಮತ್ತು ಬೇಡಿಕೆ ಮೇರೆಗೆ ಕೇರಳದ ಕೊಚುವೇಲಿ ಇಂದ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲು ದಕ್ಷಿಣ ರೈಲ್ವೆ ವಲಯ ನಿರ್ಧರಿಸಿದೆ.

- Advertisement -

ಏ. 25ರಿಂದ ಜೂನ್ 27 ರವರೆಗೆ ಪ್ರತಿ ಮಂಗಳವಾರ (ರೈಲು ಸಂಖ್ಯೆ 06083) ಕೊಚುವೇಲಿಯಿಂದ ಸಂಜೆ 06:05 ಗಂಟೆಗೆ ರೈಲು ಹೊರಡಲಿದೆ. ಮರುದಿನ ಬೆಳಿಗ್ಗೆ 10:55 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ವಿಶೇಷ ರೈಲು ಆಗಮಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ರೈಲು ಮಾರ್ಗದಲ್ಲಿ ಕೊಲ್ಲಂ, ಕಾಯಂಕುಲಂ, ಮಾವೇಲಿಕರ, ಚೆಂಗನ್ನೂರ್, ತಿರುವಳ್ಳ, ಚೆಂಗನಸೇರಿ, ಕೊಟ್ಟಾಯಂ, ಎರ್ನಾಕುಲಂ ಟೌನ್, ಅಲುವಾ, ತ್ರಿಶೂರ್, ಪಾಲಕ್ಕಾಡ್, ಕೊಯಮತ್ತೂರು, ತಿರುಪ್ಪೂರ್, ಈರೋಡ್, ಸೇಲಂ, ತಿರುಪತ್ತೂರ್, ಬಂಗಾರಪೇಟೆ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಿಗೆ ವಿಶೇಷ ರೈಲು ಆಗಮಿಸಿ/ನಿರ್ಗಮಿಸಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಹೇಳಿದೆ.

ಏಪ್ರಿಲ್ 26 ರಿಂದ ಜೂನ್ 28 ರವರೆಗೆ ಪ್ರತಿ ಬುಧವಾರ (ರೈಲು ಸಂಖ್ಯೆ-06084) ಬೆಂಗಳೂರಿನಿಂದ ಮಧ್ಯಾಹ್ನ 12:45 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಹೊರಡುವ ವಿಶೇಷ ರೈಲು, ಮರುದಿನ ಬೆಳಗ್ಗೆ 6 ಗಂಟೆಗೆ ಕೊಚುವೇಲಿ ನಿಲ್ದಾಣ ತಲುಪಲಿದೆ.

ಈ ರೈಲು ಮಾರ್ಗದಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ತಿರುಪತ್ತೂರ್, ಸೇಲಂ, ಈರೋಡ್, ತಿರುಪ್ಪೂರ್-, ಕೊಯಮತ್ತೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚೆಂಗನಸೇರಿ, ತಿರುವಳ್ಳ, ಚೆಂಗನ್ನೂರ, ಮಾವೇಲಿಕರ, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಿಗೆ ಆಗಮಿಸಿ/ನಿರ್ಗಮಿಸಲಿದೆ. ಈ ವಿಶೇಷ ರೈಲುಗಳು 20 ಬೋಗಿಗಳನ್ನು ಹೊಂದಿರಲಿದೆ.

ಈ ಸುದ್ದಿ ಓದಿದ್ದೀರಾ? ಯುವ ಪೀಳಿಗೆ ಮನಸ್ಸು ಮಾಡಿದರೆ ಯಾವುದೇ ರಂಗದಲ್ಲಿ ಬದಲಾವಣೆ ತರಲು ಸಾಧ್ಯ: ತುಷಾರ್ ಗಿರಿನಾಥ್

ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ರದ್ದು

ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ದಕ್ಷಿಣ ರೈಲ್ವೆ ವಲಯದ ಕೆಲ ರೈಲುಗಳು ಹಳಿಗಳ ಕಾರಿಡಾರ್ ಬ್ಲಾಕ್​ಗಳ ನಿರ್ವಹಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಏಪ್ರಿಲ್ ತಿಂಗಳಲ್ಲಿ​ ರೈಲುಗಳು ರದ್ದಾಗಿವೆ.

ಭಾಗಶಃ ರದ್ದಾದ ರೈಲುಗಳು

  • (ರೈಲು ಸಂಖ್ಯೆ 12678) ಏಪ್ರಿಲ್​​ 27 ರಂದು ಕೇರಳದ ಎರನಾಕುಲಂನಿಂದ ಹೊರಟು ಕೆಎಸ್​ಆರ್​​ ಬೆಂಗಳೂರು ತಲುಪಲಿದ್ದ ಡೈಲಿ ಸೂಪರ್​​​​ಫಾಸ್ಟ್​ ಎಕ್ಸಪ್ರೆಸ್​ ​ರದ್ದಾ​ಗಿದೆ.
  • (ರೈಲು ಸಂಖ್ಯೆ 12677) ಏಪ್ರಿಲ್​​ 28 ರಂದು ಕೆಎಸ್​ಆರ್​ ಬೆಂಗಳೂರು-ಎರನಾಕುಲಂ ಮಧ್ಯೆ ಸಂಪರ್ಕ ಕಲ್ಪಿಸಲಿರುವ ಡೈಲಿ ಸೂಪರ್​​​​ಫಾಸ್ಟ್ ಎಕ್ಸಪ್ರೆಸ್​ ರದ್ದಾಗಿದೆ.
  • (ರೈಲು ಸಂಖ್ಯೆ 12677) ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಏಪ್ರಿಲ್ 26 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ಇಲ್ಲ. ಎಸ್‌ಎಂವಿಟಿ ಬೆಂಗಳೂರಿನಿಂದ ಬೆಳಿಗ್ಗೆ 6.10 ಕ್ಕೆ ಹೊರಟಿದೆ.
  • (ರೈಲು ಸಂಖ್ಯೆ 01772): ಮಾರಿಕುಪ್ಪಂ-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು, ಏಪ್ರಿಲ್ 26 ರಂದು ಮಾರಿಕುಪ್ಪಂನಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌ ಕೊನೆ ನಿಲ್ದಾಣವಾಗಿದೆ.
  • (ರೈಲು ಸಂಖ್ಯೆ 06396): ಕೆಎಸ್​ಆರ್​ ಬೆಂಗಳೂರು-ಮಾರಿಕುಪ್ಪಂ ಎಮ್​ಇಎಮ್​ಯು ವಿಶೇಷ ರೈಲು, ಏಪ್ರಿಲ್ 26 ರಂದು ನಿಗದಿತ ಸಮಯದಲ್ಲಿ ಕಂಟೋನ್ಮೆಂಟ್‌ನಿಂದ ಹೊರಡಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...