40 ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕೆ ಬಂಡೇಪಾಳ್ಯ ಪೊಲೀಸ್‌ ಠಾಣೆ ನೆರವು

Date:

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ಅವರು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ಮಾಡುವಲ್ಲಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್‌ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಎಲೆ ಮರೆ ಕಾಯಿಯಂತೆ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶ್ರಮಿಸಿದ ಠಾಣೆಯ ಪಿಎಸ್‌ಐ ಮತ್ತು ಸಿಬ್ಬಂದಿ ಕೆಲಸ ಇದೀಗ ಬೆಳಕಿಗೆ ಬಂದಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

ಕಳೆದ ವರ್ಷ ಆರಂಭವಾದ ಈ ಶಿಬಿರ ನಡೆಸುವ ಕಾರ್ಯಕ್ರಮ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಹಾಯ ಮಾಡಿದೆ. ಮಾತ್ರವಲ್ಲದೆ, ಅಪರಾಧ ತಡೆಗೂ ನೆರವಾಗಿದೆ ಎಂದು ಠಾಣೆಯ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

2023ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಶಿಬಿರವನ್ನು 23 ದಿನಗಳ ಕಾಲ ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ ಎಲ್.ವೈ ನೇತೃತ್ವದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಸುಮಾರು 83 ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗಿಯಾಗಿದ್ದರು.

ಸಬ್ ಇನ್ಸ್ ಪೆಕ್ಟರ್‌ಗಳಾದ ದುರ್ಗಾ ಭವಾನಿ, ಮುಜಾಮಿಲ್, ಈರಣ್ಣ ನಾನಾಜಗಿ ಸೇರಿದಂತೆ ಪೊಲೀಸ್ ತಂಡ ಗಾರ್ವೆಭಾವಿಪಾಳ್ಯದ ಖಾಸಗಿ ಶಾಲೆಯೊಂದರಲ್ಲಿ ಶಿಬಿರವನ್ನು ನಡೆಸಿದೆ. ಪ್ರತಿದಿನ ಬೆಳಗ್ಗೆ 9ರಿಂದ ಮಧ್ಯಾಹ್ನ 3.30ರವರೆಗೆ ನಾನಾ ಖಾಸಗಿ ಶಾಲೆಗಳ ಎಂಟು ಶಿಕ್ಷಕರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಜೊತೆಗೆ, ಠಾಣೆಯೇ ಮಕ್ಕಳಿಗೆ ಉಪಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಮಾಡಿತ್ತು ಎಂದು ತಿಳಿದುಬಂದಿದೆ.

ತಂಡದ ಸದಸ್ಯರು ತಮ್ಮ ಸ್ವಂತ ಹಣದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್‌ ಹಾಗೂ ಇತರ ವಸ್ತುಗಳನ್ನು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೆಟ್ರೋ ಕಾಮಗಾರಿ ವೇಳೆ ನೆಲಕ್ಕುರುಳಿದ ಕ್ರೇನ್; ತಪ್ಪಿದ ಭಾರಿ ಅನಾಹುತ

“ಸುಮಾರು 40 ವಿದ್ಯಾರ್ಥಿಗಳು ಎಲ್ಲ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ. ಇನ್ನುಳಿದ 40 ವಿದ್ಯಾರ್ಥಿಗಳು ಒಂದು ಅಥವಾ ಎರಡು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಗಣಿತದಲ್ಲಿ ಅನುತ್ತೀರ್ಣರಾಗಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

“ಈ ಬಾರಿ ಹೆಚ್ಚಿನ ವಿದ್ಯಾರ್ಥಿಗಳು ದಾಖಲಾದ ಕಾರಣ ಹೆಚ್ಚಿನ ಶಿಕ್ಷಕರನ್ನು ಸಂಪರ್ಕಿಸಿದ್ದೇವೆ. ಶಿಬಿರಕ್ಕೆ ಸೇರಲು ಶಿಕ್ಷಕರು ತಕ್ಷಣ ಒಪ್ಪಿಕೊಂಡಿದ್ದಾರೆ. ಕಳೆದ ವರ್ಷ ತರಗತಿಗಳನ್ನು ತೆಗೆದುಕೊಂಡ 81 ವಿದ್ಯಾರ್ಥಿಗಳಲ್ಲಿ ಸುಮಾರು 40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರು ಅಧ್ಯಯನವನ್ನು ಮುಂದುವರೆಸುತ್ತಿದ್ದಾರೆ” ಎಂದು ರಾಜೇಶ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...