ಮುಸ್ಲಿಮರನ್ನು ಗುರಿಯಾಗಿರಿಸಿ ದ್ವೇಷ ಹುಟ್ಟು ಹಾಕುವುದಕ್ಕೆ ಕಡಿವಾಣ ಹಾಕಿ: ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ಆಗ್ರಹ

Date:

Advertisements

ದೇಶದಲ್ಲಿ ಚುನಾವಣೆ ನಡೆಯುತ್ತಿರುವ ನಡುವೆಯೇ ಕೆಲವೊಂದು ಮಾಧ್ಯಮಗಳು ಸೇರಿದಂತೆ ಹಲವು ರಾಜಕೀಯ ಮುಖಂಡರು ಮುಸ್ಲಿಮರನ್ನು ಗುರಿಯಾಗಿರಿಸಿ ದ್ವೇಷ ಹುಟ್ಟು ಹಾಕುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಸಮಾಜದಲ್ಲಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ. ಇದಕ್ಕೆಲ್ಲ ಕಡಿವಾಣ ಹಾಕುವಂತೆ ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ಆಗ್ರಹಿಸಿದೆ.

ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಹಾಸನದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದು, ಸರ್ಕಾರ ಈ ಬಗ್ಗೆ ಮುತುವರ್ಜಿ ವಹಿಸುವಂತೆ ಒತ್ತಾಯಿಸಿದೆ.

ನಮ್ಮ ದೇಶ, ರಾಜ್ಯದಲ್ಲಿ ಮುಸ್ಲಿಂ ಸಮುದಾಯ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಘಟಕವು ಅಂಗೀಕರಿಸಿತು.

Advertisements
  1. ಸುದೀರ್ಘ ಹಂತದ ಸಂಸತ್ತಿನ ಚುನಾವಣೆಗಳಲ್ಲಿ ದೇಶದ ಸಾಮಾಜಿಕ ವಾತಾವರಣವನ್ನು ಹಾಳು ಮಾಡುವಲ್ಲಿ ಆಡಳಿತ ಪಕ್ಷ ಮತ್ತು ಅದರ ಉಪ ಸಂಸ್ಥೆಗಳ ಪಾತ್ರವು ಅತ್ಯಂತ ಬೇಜವಾಬ್ದಾರಿಯುತ ಮತ್ತು ಅಸಮರ್ಥನೀಯ. ರಾಜಕೀಯ ಹಿತಾಸಕ್ತಿಗಾಗಿ ಸಮಾಜದಲ್ಲಿ ಒಡಕು ಮೂಡಿಸಿ, ದ್ವೇಷದ ಬೆಂಕಿ ಹೊತ್ತಿಸಿ, ಸತತವಾಗಿ ಕೊಲೆ, ರಕ್ತಪಾತದ ಘಟನೆಗಳು ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗದಂತೆ ನೋಡಿಕೊಳ್ಳಲಾಗಿದೆ. ಇದು ಖಂಡನೀಯ ಎಂದು ತಿಳಿಸಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷವನ್ನು ಹುಟ್ಟುಹಾಕಲಾಗುತ್ತಿದೆ. ಇದು ಖಂಡನೀಯ ಎಂದು ತಿಳಿಸಿದೆ. ಅಜಾಗರೂಕ ವಿಧಾನವನ್ನು ಸಭೆ ತೀವ್ರವಾಗಿ ಖಂಡಿಸುತ್ತದೆ. ಹಣದುಬ್ಬರ ಮತ್ತು ನಿರುದ್ಯೋಗದಂತಹಾ ಎಲ್ಲ ಸಮಸ್ಯೆಗಳಿಂದ ಗಮನವನ್ನು ಸರಿಸಲು ದ್ವೇಷವನ್ನು ಪ್ರಚೋದಿಸುವ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಯೋಜಿತ ಕೃತ್ಯಗಳನ್ನು ಈ ಸಭೆಯು ಬಲವಾಗಿ ಖಂಡಿಸುತ್ತದೆ.
  2. ಕರ್ನಾಟಕದಲ್ಲಿ ಎರಡು ಹಂತದ ಸಂಸತ್ ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿತ್ತು. ಇಲ್ಲಿಯೂ ಫ್ಯಾಸಿಸ್ಟ್ ಮತ್ತು ಬಲಪಂಥೀಯ ಜನರು ಪರಿಸ್ಥಿತಿಯನ್ನು ಹಾಳುಮಾಡಲು ಪ್ರಯತ್ನಿಸಿದರು. ಆದರೆ ಸಮಯಕ್ಕೆ ಸರಿಯಾಗಿ ಅದನ್ನು ಗಮನಿಸಿ, ಪರಿಸ್ಥಿತಿಯು ಹದಗೆಡದಂತೆ ಕಾಪಾಡಲಾಗಿದೆ. ಸಲಹಾ ಸಮಿತಿಯ ಈ ಸಭೆ ಅದನ್ನು ಶ್ಲಾಘಿಸಿದೆ. ಜನರಲ್ಲಿ ರಾಜಕೀಯ ಜಾಗೃತಿ ಮೂಡಿಸಲು ನಾಗರಿಕ ಸಮಾಜದ ಹಲವು ಸಂಘಟನೆಗಳು ನಡೆಸಿದ ಶ್ರಮವನ್ನು ಜಮಾಅತೆ ಇಸ್ಲಾಮಿ ಹಿಂದ್ ಶ್ಲಾಘಿಸಿದೆ.
  3. ರಾಜ್ಯದ ಸಂಸದರೊಬ್ಬರಿಂದ ಅಸಂಖ್ಯಾತ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಹೇಯ ಘಟನೆಗಳ ಸುದ್ದಿ ರಾಜ್ಯಕ್ಕೆ ತಲೆತಗ್ಗಿಸುವಂತೆ ಮಾಡಿದೆ. ಅಂತಹ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಈ ಸಂತ್ರಸ್ತ ಮತ್ತು ಅಸಹಾಯಕ ಮಹಿಳೆಯರ ರಕ್ಷಣೆಯನ್ನು ಸರ್ಕಾರ ಮಾಡಬೇಕು
  4. ಕೆಲವು ರಾಜಕಾರಣಿಗಳು ತಮ್ಮ ಅಶಿಷ್ಟ ಮತ್ತು ಯೋಗ್ಯವಲ್ಲದ ಸಂತಾನವನ್ನು ತಮ್ಮ ಉತ್ತರಾಧಿಕಾರಿಗಳನ್ನಾಗಿ ಮಾಡುವ ಪ್ರಯತ್ನ ಮತ್ತು ಅಂತಹವರನ್ನು ಆಶಾವಾದಿಗಳನ್ನಾಗಿ ಮಾಡುವ ರಾಜಕೀಯ ಪಕ್ಷಗಳ ಪ್ರವೃತ್ತಿಯು ದೇಶದ ರಾಜಕೀಯವನ್ನು ತಪ್ಪುದಾರಿಗೆ ತಳ್ಳಿದೆ. ಈ ಪರಿಸ್ಥಿತಿಯ ಬಗ್ಗೆ ಈ ಸಭೆಯು ತನ್ನ ಕಳವಳವನ್ನು ವ್ಯಕ್ತಪಡಿಸುತ್ತದೆ.
  5. ಮುಸ್ಲಿಮ್ ಸಮುದಾಯವು, ವಿಶೇಷವಾಗಿ ಯುವಜನರು ಇತ್ತೀಚಿನ ದಿನಗಳಲ್ಲಿ ತೀವ್ರವಾದ ಪ್ರಚೋದನೆಗಳನ್ನು ತಟಸ್ಥಗೊಳಿಸಲು ವಹಿಸಿದ ತಾಳ್ಮೆ, ಬುದ್ಧಿವಂತಿಕೆ ಮತ್ತು ಧೈರ್ಯವು ಶ್ಲಾಘನೀಯವಾಗಿದೆ. ಅದೇ ರೀತಿ ಸಂಸತ್ತಿನ ಚುನಾವಣೆಗಳಲ್ಲಿ ವಿವಿಧ ರಾಷ್ಟ್ರೀಯ ಸಂಘಟನೆಗಳು ಮತ್ತು ಸಂಸ್ಥೆಗಳ ಸಕ್ರಿಯ ಪಾತ್ರವು ಮೌಲ್ಯಯುತವಾಗಿದೆ ಮತ್ತು ಶ್ಲಾಘನೀಯವಾಗಿದೆ.
  6. ಫೆಲೆಸ್ತೀನ್‌ನ ಪ್ರಸ್ತುತ ಭೀಕರ ಪರಿಸ್ಥಿತಿಯ ಬಗ್ಗೆ ಸಭೆಯು ಗಾಢವಾದ ಕಳವಳವನ್ನು ವ್ಯಕ್ತಪಡಿಸುತ್ತದೆ. ಅಮೇರಿಕ ಮತ್ತು ಇತರ ಯುರೋಪಿಯನ್ ರಾಷ್ಟ್ರಗಳ ನಾಯಕರ ಅನಗತ್ಯ ಬೆಂಬಲದಿಂದಾಗಿ ಇಸ್ರೇಲ್ ಗಾಝಾದ ಮೇಲೆ ದಬ್ಬಾಳಿಕೆಯನ್ನು ಮುಂದುವರಿಸಿದೆ. ಇದನ್ನು ನಿಲ್ಲಿಸಲು ಜಾಗತಿಕ ನಾಯಕತ್ವ ಮುಂದಾಗಲು ಒತ್ತಾಯಿಸಿದೆ. ಮುಸ್ಲಿಮ್ ದೇಶಗಳ ನಾಯಕರನ್ನು ಸತ್ಯವನ್ನು ಬೆಂಬಲಿಸುವ ತಮ್ಮ ಧಾರ್ಮಿಕ ಬೇಡಿಕೆಯನ್ನು ಪೂರೈಸಲು, ಈ ಮಾರ್ಗದಲ್ಲಿ ತಮಗೆ ಎದುರಾಗುತ್ತಿರುವ ಎಲ್ಲಾ ರೀತಿಯ ಅಡೆತಡೆಗಳಿಂದ ಮತ್ತು ಪ್ರಭಾವಗಳಿಂದ ಆದಷ್ಟು ಬೇಗ ಹೊರಬರಲು ಆಗ್ರಹಿಸಿದೆ.
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X