ಜನವರಿ 2ರಿಂದ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಆರಂಭ

Date:

ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ.2.07 ರಷ್ಟಿದ್ದು, ಡಿ.29 ರಂದು 173 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರ ಜತೆಗೆ ರಾಜ್ಯದಲ್ಲಿ ಓಮಿಕ್ರಾನ್ ಉಪತಳಿ ಜೆಎನ್‌.1 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ದಾಖಲಾಗುತ್ತಿರುವ ಹೊಸ ಕೊರೋನಾ ಪ್ರಕರಣಗಳಲ್ಲಿ ಶೇ.90 ರಷ್ಟು ಜೆಎನ್‌.1 ಅಂಶ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಹಿನ್ನೆಲೆ, 2024ರ ಜನವರಿ 2ರಿಂದ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಆರಂಭ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

- Advertisement -

ಕೇಂದ್ರ ಸರ್ಕಾರದ ಸೂಚನೆಯಂತೆ ವ್ಯಾಕ್ಸಿನ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಉಚಿತ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲು ನಿರ್ಧರಿಸಿದೆ. ಸದ್ಯ 15,800 ಲಸಿಕೆಯನ್ನು ರಾಜ್ಯ ಸರ್ಕಾರ ಈಗಾಗಲೇ ಖರೀದಿ ಮಾಡಿದ್ದು, ಪ್ರಾಥಮಿಕ ಹಂತದಲ್ಲಿ 30 ಸಾವಿರ ಕೋರ್ಬಿವಾಕ್ಸ್ ಲಸಿಕೆ ಖರೀದಿಗೆ ಸರ್ಕಾರ ನಿರ್ಧರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ರಾಜ್ಯದಲ್ಲಿ ದಿನದಿಂದ ದಿನಕ್ಕೆ ದಾಖಲಾಗುತ್ತಿರುವ ಹೊಸ ಕೊರೋನಾ ಪ್ರಕರಣಗಳಲ್ಲಿ ಶೇ.90 ರಷ್ಟು ಒಮಿಕ್ರಾನ್ ರೂಪಾಂತರಿ ಜೆಎನ್‌.1 ಅಂಶ ಪತ್ತೆಯಾಗುತ್ತಿದ್ದು, ಈಗಾಗಲೇ ಆರೋಗ್ಯ ಇಲಾಖೆ 197 ಸ್ಯಾಂಪಲ್ಸ್​ಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಮಾಡಲು ಕಳುಹಿಸಿದೆ. 60 ಸ್ಯಾಂಪಲ್ಸ್​ಗಳ ವರದಿ ಪ್ರಕಾರ ಶೇ.50 ರಷ್ಟು ರೋಗಿಗಳಲ್ಲಿ ಜೆಎನ್‌1 ಅಂಶ ಕಂಡು ಬಂದಿದೆ.

ರಾಜ್ಯದಲ್ಲಿ ಈಗಾಗಲೇ ಮೊದಲ ಮತ್ತು ಎರಡನೇ ವ್ಯಾಕ್ಸಿನೇಶನ್ ಡೋಸ್‌ 100% ಮಾಡಲಾಗಿದೆ. ಆದರೆ, ಮುನ್ನೆಚ್ಚರಿಕಾ ವ್ಯಾಕ್ಸಿನ್(ಮೂರನೇ ಡೋಸ್) ಮಾತ್ರ ಶೇ.27 ಜನರು ಪಡೆದಿದ್ದಾರೆ. ಇನ್ನು ಈ ವ್ಯಾಕ್ಸಿನ್ ಹಾಕಿಸಿಕೊಳ್ಳಲು ರಾಜ್ಯದಲ್ಲಿ 1.5 ಕೋಟಿಗೂ ಹೆಚ್ಚಿನ ಜನ ಅರ್ಹತೆ ಪಡೆದಿದ್ದು, ಆದರೂ, ಮೂರನೇ ಡೋಸ್ ತೆಗೆದುಕೊಂಡಿಲ್ಲ. ಈ ಹಿನ್ನೆಲೆ, ಮತ್ತೆ ಮುನ್ನೆಚ್ಚರಿಕಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಈ ಸುದ್ದಿ ಓದಿದ್ದೀರಾ? ವೃದ್ಧೆಗೆ ವಂಚನೆ | ರಾಕಲೈನ್ ವೆಂಕಟೇಶ್ ಪುತ್ರ ಅಭಿಲಾಷ್‌ಗೆ ಮತ್ತೆ ನೋಟಿಸ್ ನೀಡಿದ ಸಿಸಿಬಿ

ಇನ್ನು ಕೋಮಾರ್ಬಿಟಿಸ್ ಹಾಗೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಯಾರು ಮೂರನೇ ಡೋಸ್ ವ್ಯಾಕ್ಸಿನ್ ಪಡೆದಿಲ್ಲ, ಅವರು ಕೂಡಲೇ ವ್ಯಾಕ್ಸಿನ್ ಹಾಕಿಸಿಕ್ಕೊಳ್ಳಲು ಸರ್ಕಾರ ಸೂಚಿಸಿದೆ. ಲಸಿಕೆಗಳನ್ನು ರಾಜ್ಯದಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳಿಗೆ ವ್ಯಾಕ್ಸಿನ್ ನೀಡಲು ಮುಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...