ಬೆಂಗಳೂರು | ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ವಿರೋಧಿಸಿ ಜನಸುರಾಜ್ ಪಕ್ಷದಿಂದ ಪ್ರತಿಭಟನೆ

Date:

Advertisements

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣಾ ಪ್ರಕ್ರಿಯೆ ವಿರೋಧಿಸಿ ಜನಸುರಾಜ್ ಪಕ್ಷದಿಂದ ಬೆಂಗಲೂರಿನಲ್ಲಿ ಪ್ರತಿಭಟನೆ ನಡೆಯಿತು. ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬೆಂಗಳೂರು ನಗರದಲ್ಲಿನ ಅನಿವಾಸಿ ಬಿಹಾರಿಗಳು ಭಾಗವಹಿಸಿದ್ದರು.

“ನಮ್ಮೆಲ್ಲರ ಕಾಳಜಿ ಈ ಪ್ರಕ್ರಿಯೆಗೆ ನಿಗದಿಪಡಿಸಿರುವ ಕಾಲಮಿತಿ, ಸಂಕೀರ್ಣ ದಾಖಲೀಕರಣ ಪ್ರಕ್ರಿಯೆಯು ತಾತ್ಕಾಲಿಕವಾಗಿ ಬಿಹಾರದಿಂದ ಹೊರಗಿರುವ ಮತದಾರರ ವಿವರವು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಿದ್ದು, ನಿಗದಿತ ಸಮಯದಲ್ಲಿ ಜನ್ಮಸ್ಥಳದ ಮತ್ತು ಪೋಷಕರ ಮಾಹಿತಿಯನ್ನುಸಾಧ್ಯವಾಗುವುದಿಲ್ಲ. ನಾವು ನಾಗರೀಕರು, ನಾವು ಮತದಾರರು, ಉದ್ಯೋಗವನ್ನು ಅರಸಿ ಹೊರಬಂದಿರುವ ಒಂದೇ ಕಾರಣದಿಂದ ನಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಕಣ್ಮರೆಯಾಗಬಾರದು”

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

ಈ ಹಿನ್ನೆಲೆಯಲ್ಲಿ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯನ್ನು ವಿಧಾನಸಭಾ ಚುನಾವಣೆಗಳು ಮುಗಿಯುವ ತನಕ ಮುಂದೂಡಬೇಕು. ಹಬ್ಬದ ಸಮಯದಲ್ಲಿ ಬಹುತೇಕ ವಲಸೆ ಕಾರ್ಮಿಕರು ವಾಪಸ್ಸು ಬರಲಿದ್ದು, ಮತ್ತಷ್ಟು ಸಮಯವನ್ನು ನೀಡಬೇಕು. ಪ್ರಾಮಾಣಿಕ ಮತದಾರರಿಗೆ ದಾಖಲಾತಿಗಳನ್ನು ಸಲ್ಲಿಸಲು ಮತ್ತು ಮತದಾರರ ಪಟ್ಟಿಯಲ್ಲಿ ಮನಸ್ಥಿತಿಯನ್ನು ಸತ್ಯಾಪನೆ ಮಾಡಲು ಹೆಚ್ಚು ಸಮಯ ಹಾಗೂ ಸಡಿಲಿಕೆಗಳನ್ನು ನೀಡಬೇಕು.

ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವ ಮತ್ತು ವಲಸೆ ಬಂದಿರುವ ಬಿಹಾರಿ ಮತದಾರರ ಹಕ್ಕುಗಳ ರಕ್ಷಣೆಗೆ ಸುಸ್ಥಿರವಾದ ಜನಾಭಿಪ್ರಾಯವನ್ನು ರೂಪಿಸಬೇಕು.ಈಗ ನಡೆಯುತ್ತಿರುವ ಪರಿಷ್ಕರಣಾ ಪ್ರಕ್ರಿಯೆಯಿಂದ ತಾತ್ಕಾಲಿಕವಾಗಿ ಬಿಹಾರದಿಂದ ಹೊರಗಿರುವ ಮತದಾರರ ವಿವರವು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಿದ್ದು, ಇದರಿಂದ ಅನೇಕರಿಗೆ ಮತದಾನ ಸಾಧ್ಯವಾಗುವುದಿಲ್ಲ‌. ಇದು ನಡೆಯಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು

ಬಳಿಕ ಕೆ.ಆರ್ ಸರ್ಕಲ್ ಬಳಿ ಇರುವ ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ವತಿಯಿಂದ ಅ.2ರಿಂದ ರಾಜ್ಯಾದ್ಯಂತ ʼಅರಿವು-ಮಾನವೀಯತೆʼ ಜಾಗೃತಿ ಅಭಿಯಾನ

ಕರ್ನಾಟಕ ರಾಜ್ಯ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ವತಿಯಿಂದ ಅ.2ರಿಂದ ರಾಜ್ಯಾದ್ಯಂತ...

ವಿಪ್ರೋ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ; ಸಿಎಂ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ (ಒಆರ್‌ಆರ್‌) ಉಂಟಾಗುವ ತೀವ್ರ ಸಂಚಾರ ದಟ್ಟಣೆಯನ್ನು...

ಬೆಂಗಳೂರು | ಆರ್ಥಿಕ ಅಭಿವೃದ್ಧಿಗೆ ಸಹಕಾರ; ಕರ್ನಾಟಕ-ನ್ಯೂಜೆರ್ಸಿ ಒಪ್ಪಂದ: ಪ್ರಿಯಾಂಕ್‌ ಖರ್ಗೆ

ತಂತ್ರಜ್ಞಾನ, ನಾವೀನ್ಯತೆ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರವನ್ನು ಬಲಪಡಿಸಲು ಕರ್ನಾಟಕ ಸರ್ಕಾರ...

ಬೆಂಗಳೂರು | ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು: ಅಧಿಕಾರಿಗಳಿಗೆ ಡಿ ಎಸ್ ರಮೇಶ್ ಎಚ್ಚರಿಕೆ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಇಬ್ಬಲೂರು ಜಂಕ್ಷನ್‌ನಿಂದ ಟಿನ್ ಫ್ಯಾಕ್ಟರಿವರೆಗೆ...

Download Eedina App Android / iOS

X