‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿಗೆ ಒಂಬತ್ತು ಜನಪದ ಸಾಧಕರ ಆಯ್ಕೆ

Date:

Advertisements
  • ಪ್ರತಿ ವರ್ಷ ಜನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಲಾವಿದರನ್ನು ಗುರುತಿಸಿ ಗೌರವಿಸಲಾಗುತ್ತದೆ
  • ಮೂರು ವರ್ಷಗಳ ಪ್ರಶಸ್ತಿಗಾಗಿ ಒಂಬತ್ತು ಜನಪದ ಸಾಧಕರನ್ನು ಆಯ್ಕೆ ಮಾಡಲಾಗಿದೆ

ಕನ್ನಡ ಸಾಹಿತ್ಯ ಪರಿಷತ್ತು 2020, 2021 ಹಾಗೂ 2022ನೇ ಸಾಲಿನ ‘ದಿ. ಶ್ರೀಮತಿ ತಾಯಮ್ಮ ಎಸ್.ಸಿ.ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿಗೆ ಒಂಬತ್ತು ಜನಪದ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ತಿಳಿಸಿದ್ದಾರೆ.

“‘ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ ಪ್ರಶಸ್ತಿಗೆ ದತ್ತಿ’ ದಾನಿಗಳ ಆಶಯದಂತೆ ಮಂಡ್ಯ ಜಿಲ್ಲೆಯ ಒಬ್ಬರು ಜನಪದ ಕಲಾವಿದರು ಸೇರಿದಂತೆ ರಾಜ್ಯದಲ್ಲಿ ಜಾನಪದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಒಟ್ಟು ಮೂರು ಜನರನ್ನು ಆಯ್ಕೆ ಮಾಡಲಾಗುತ್ತದೆ. ಅದರಂತೆ ಮೂರು ವರ್ಷಗಳ ಪ್ರಶಸ್ತಿಗಾಗಿ ಒಂಬತ್ತು ಜನಪದ ಸಾಧಕರನ್ನು ಆಯ್ಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

“‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿಯನ್ನು ಮಂಡ್ಯ ಜಿಲ್ಲೆಯ ಹಿರಿಯ ಸಮಾಜಸೇವಕರಾದ ಎಸ್.ಎಮ್ ಶಂಕರ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿಯನ್ನು ಸ್ಥಾಪಿಸಿದ್ದು, ಪ್ರತಿ ವರ್ಷ ಜನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಲಾವಿದರನ್ನು ಗುರುತಿಸಿ ಗೌರವಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

Advertisements

2020ನೇ ಸಾಲಿನ ‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಮಂಡ್ಯದ ಲಾವಣಿಪದ ಕಲಾವಿದರಾದ ಆರ್.ಕೆ. ಸ್ವಾಮಿ, ಚನ್ನಪಟ್ಟಣದ ಡೊಳ್ಳುಕುಣಿತ ಕಲಾವಿದೆ ಲಕ್ಷ್ಮಿ ಶ್ರೀನಿವಾಸ್ ಹಾಗೂ ಶ್ರೀರಂಗಪಟ್ಟಣದ ನೀಲಗಾರರ ಪದ ಹಾಡುವ ಕಲಾವಿದ ಮಂಟೆ ಲಿಂಗಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.

2021ನೇ ಸಾಲಿನ ದತ್ತಿ ಪ್ರಶಸ್ತಿಗಾಗಿ ಮಳವಳ್ಳಿಯ ತಮಟೆ ಕಲಾವಿದ ಕುಂತೂರು ಕುಮಾರ, ಕೆ.ಆರ್.ಪೇಟೆಯ ಜಾನಪದ ಹಾಡುಗಾರರಾದ ಶಾಂತಮ್ಮ ಪಿ.ಆರ್ ಹಾಗೂ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ತಮಟೆ ಕಲಾವಿದೆ ತಮಟೆ ನರಸಮ್ಮ ಇವರನ್ನು ಆಯ್ಕೆ ಮಾಡಲಾಗಿದೆ.

2022ನೇ ಸಾಲಿನ ದತ್ತಿ ಪ್ರಶಸ್ತಿಗಾಗಿ ಪಾಂಡವಪುರದ ಸೋಬಾನೆಪದ ಹಾಡುವ ಕಲಾವಿದೆ ಸೋಬಾನೆ ನಾಗಮ್ಮ, ಮಂಡ್ಯದ ಜಾನಪದ ಗೀತೆಗಳ ಗಾಯಕಿ ಮಂಜುಳ ಅಲದಳ್ಳಿ ಹಾಗೂ ಕೊಳ್ಳೇಗಾಲದ ಕಂಸಾಳೆ ಕಲಾವಿದ ಎಂ.ಕೈಲಾಸಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾನಪದ ಕಲಾವಿದರಿಗಾಗಿಯೇ ಮೀಸಲಾಗಿರುವ ‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿಯನ್ನು ಜನಪದ ಕ್ಷೇತ್ರದ ನಾನಾ ವಿಭಾಗಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗಾಗಿ ಮೀಸಲಿಡಲಾಗಿದ್ದು, ನಿರಂತರ ಸೇವೆ ಸಲ್ಲಿಸುತ್ತ ಉತ್ತಮ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಗಳನ್ನು ಕೊಡಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದೆ.

ಈ ಸುದ್ದಿ ಓದಿದ್ದೀರಾ? ಮತದಾರರ ದತ್ತಾಂಶ ಮಾರಾಟ: ಖಾಸಗಿ ಸಂಸ್ಥೆಯ ವೆಬ್‌ಸೈಟ್ ದೆಹಲಿ ವಿಳಾಸದಲ್ಲಿ ನೋಂದಣಿ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಂಡ್ಯ ಜಿಲ್ಲಾ ಅಧ್ಯಕ್ಷ ರವಿಕುಮಾರ ಚಾಮಲಾಪುರ, ಗುರುಚರಣ ಮಂಡ್ಯ, ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X