ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧಕ್ಕೆ ಸಜ್ಜಾದ ಎನ್‌ಎಚ್‌ಎಐ

Date:

Advertisements
  • ಎಕ್ಸ್‌ಪ್ರೆಸ್‌ ವೇ ಮುಖ್ಯ ಭಾಗದಿಂದ ನಿಷೇಧಿಸಲಾದ ವಾಹನಗಳು ಸೇವಾ ರಸ್ತೆಗಳನ್ನು ಬಳಸಬಹುದು
  • ಈ ಪ್ರಸ್ತಾವನೆಗೆ ಅನುಮೋದನೆ ದೊರೆತಾಗ ಸರ್ಕಾರದ ಗೆಜೆಟ್ ನೋಟಿಫಿಕೇಶನ್ ಪಟ್ಟಿಯಲ್ಲಿ ಪ್ರಕಟ

ಬೆಂಗಳೂರಿನಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್‌ ವೇ ಮೂಲಕ 90 ನಿಮಿಷಗಳಲ್ಲಿ ಎರಡು ನಗರಗಳಲ್ಲಿ ಯಾವುದಾದರೂ ನಗರವನ್ನು ತಲುಪುವ ಭರವಸೆಯನ್ನು ಈ ಎಕ್ಸ್‌ಪ್ರೆಸ್‌ ವೇ ವಾಹನ ಸವಾರರಿಗೆ ನೀಡಿದೆ. ಆದರೆ, ಈ ಮಾರ್ಗದಲ್ಲಿ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಸಜ್ಜಾಗಿದೆ.

ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು ಮತ್ತು ಕೃಷಿ ವಾಹನಗಳು ಹೆದ್ದಾರಿಯ ಪ್ರವೇಶ ನಿಯಂತ್ರಿತ ಭಾಗದಲ್ಲಿ ಸಂಚರಿಸಲು ಅನುಮತಿಸುವುದಿಲ್ಲ. ಸುರಕ್ಷತಾ ಕಾರಣಗಳಿಗಾಗಿ ಈ ರೀತಿಯ ವಾಹನಗಳನ್ನು ನಿಷೇಧಿಸುವ ಪ್ರಸ್ತಾವನೆಯು ಪರಿಗಣನೆಯಲ್ಲಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.

“ಸರ್ಕಾರದಿಂದ ಈ ಪ್ರಸ್ತಾವನೆಗೆ ಅನುಮೋದನೆ ದೊರೆತಾಗ ಸರ್ಕಾರದ ಗೆಜೆಟ್ ನೋಟಿಫಿಕೇಶನ್ ಪಟ್ಟಿಯಲ್ಲಿ ಪ್ರಕಟವಾಗುತ್ತದೆ. ಸರ್ಕಾರದಿಂದ ಅನುಮೋದನೆ ದೊರೆತ ಬಗ್ಗೆ ಖಚಿತವಾಗುತ್ತದೆ. ಎಕ್ಸ್‌ಪ್ರೆಸ್‌ವೇಯ ಮುಖ್ಯ ಭಾಗದಿಂದ ನಿಷೇಧಿಸಲಾದ ವಾಹನಗಳು ಸೇವಾ ರಸ್ತೆಗಳನ್ನು ಬಳಸಬಹುದು” ಎಂದು ಎನ್‌ಎಚ್‌ಎಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisements

“ಈಗ ದ್ವಿಚಕ್ರ ವಾಹನಗಳು, ಆಟೋರಿಕ್ಷಾಗಳು ಮತ್ತು ಸೈಕಲ್‌ಗಳನ್ನು ಅನುಮತಿಸಲಾಗುತ್ತಿದೆ. ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದ ನಂತರ ಮಾತ್ರ ಅವುಗಳನ್ನು ನಿಲ್ಲಿಸಲಾಗುವುದು” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಧ್ಯಂತರ ವರದಿಗೆ ವಿರುದ್ಧವಾಗಿ ಮೀಸಲಾತಿ ಪರಿಷ್ಕರಣೆ ಮೂಗಿಗೆ ತುಪ್ಪ ಸವರುವ ಕೆಲಸ: ಮುಖ್ಯಮಂತ್ರಿ ಚಂದ್ರು

ಮೈಸೂರು ಸಂಸದ ಪ್ರತಾಪ್ ಸಿಂಹ ಮಾತನಾಡಿ, “ಟ್ರಕ್‌ಗಳು ಎಡ ಪಥದಲ್ಲಿ ಚಲಿಸಬೇಕು. ಮಧ್ಯದ ಲೇನ್‌ಗಳನ್ನು ಕಾರುಗಳು ಬಳಸಬೇಕು. ಬಲಭಾಗದ ಲೇನ್ ಅನ್ನು ಓವರ್‌ಟೇಕ್ ಮಾಡಲು ಮುಕ್ತವಾಗಿ ಬಿಡಬೇಕು. ಬದಲಿಗೆ, ಟ್ರಕ್‌ಗಳು ಬಲಭಾಗದಲ್ಲಿ ಚಲಿಸುತ್ತಿವೆ. ಆದ್ದರಿಂದ, ಕಾರುಗಳು ಹಿಂದಿಕ್ಕಲು ಕಷ್ಟವಾಗುತ್ತಿದೆ. ಎಕ್ಸ್‌ಪ್ರೆಸ್‌ ವೇಯಲ್ಲಿ ರಸ್ತೆ ಶಿಸ್ತು ಮತ್ತು ನಾಗರಿಕ ಪ್ರಜ್ಞೆಯ ಕೊರತೆಯಿದೆ” ಎಂದರು.

“ಸುಮಾರು ಮೂರು ದಿನಗಳ ಹಿಂದೆ ಸಂಭವಿಸಿದ ಭೀಕರ ರಸ್ತೆ ಅವಘಡದಲ್ಲಿ ಒಂದೇ ಕುಟುಂಬದ 5 ಮಂದಿ ಸಾವಿಗೀಡಾಗಿದ್ದಾರೆ. ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ” ಎಂದು ಅವರು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X