ಬೆಂಗಳೂರು | ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರ ದಾರುಣ ಸಾವು

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿ ಹರಿದು ಇಬ್ಬರು ಟೆಕ್ಕಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಕೆ. ಆರ್. ಸರ್ಕಲ್ ಸಮೀಪ ನಡೆದಿದೆ.

ಭಾನುವಾರ ಬಿಬಿಎಂಪಿ ಕಸದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪ್ರಶಾಂತ್, ಶಿಲ್ಪಾ ಅವರನ್ನು ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬೆಂಗಳೂರು ಮೂಲದ ಪ್ರಶಾಂತ್, ಆಂಧ್ರ ಪ್ರದೇಶ ಮೂಲದ ಬಯನ್ನ ಗಾರಿ ಶಿಲ್ಪಾ ಟಿಸಿಎಸ್ ಕಂಪನಿ ಉದ್ಯೋಗಿಗಳಾಗಿದ್ದರು. ಭಾನುವಾರ ಊಟಕ್ಕಾಗಿ ಹೊರಗೆ ಬಂದಿದ್ದರು. ಈ ವೇಳೆ ಕೆ. ಆರ್. ಸರ್ಕಲ್ ಬಳಿ ತೆರಳುವಾಗ ಅಪಘಾತ ಸಂಭವಿಸಿದೆ.

Advertisements

ಇದನ್ನು ಓದಿದ್ದೀರಾ? ಬಿಬಿಎಂಪಿ ಕಸದ ಲಾರಿ ಅವೈಜ್ಞಾನಿಕ ಪಾರ್ಕಿಂಗ್; ಬೈಕ್ ಸವಾರ ಸಾವು

ಇನ್ನು ಅಪಘಾತದ ಬಳಿಕ ಬಿಬಿಎಂಪಿ ಕಸದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪ್ರಕರಣ ದಾಖಲಿಸಿಕೊಂಡ ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಲಾರಿ ಚಾಲಕನ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇನ್ನು ಮೃತ ಟೆಕ್ಕಿ ಪ್ರಶಾಂತ್ ತಂದೆ ಲೋಕೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ನನ್ನ ಮಗ ಇದೇ ಸೆಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಜನಿಸಿದ್ದ. ಈಗ ಇಲ್ಲೇ ಸಾವನ್ನಪ್ಪಿದ್ದಾನೆ. ಈ ಅಪಘಾತ ಮಾಡಿದ ಲಾರಿ ಚಾಲಕನನ್ನು ಕೂಡಲೇ ಬಂಧಿಸಬೇಕು. ನಮಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

2022ರ ಮಾರ್ಚ್‌ನಿಂದ ಮೇ ತಿಂಗಳವರೆಗಿನ ಅವಧಿಯಲ್ಲಿ ಬಿಬಿಎಂಪಿ ಲಾರಿ ಹರಿದು ಸಾವು ಸಂಭವಿಸಿದ ನಾಲ್ಕು ಪ್ರಕರಣಗಳು ನಡೆದಿದೆ. 2022ರ ಏಪ್ರಿಲ್ ತಿಂಗಳಿನಲ್ಲಿ ಕಸದ ಲಾರಿ ದ್ವಿಚಕ್ರ ವಾಹನ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು.

ಅದಾದ ಬಳಿಕ 2022ರ ಮಾರ್ಚ್‌ 21ರಂದು ಬಿಬಿಎಂಪಿ ಕಸದ ಲಾರಿ ಅಪಘಾತದಲ್ಲಿ 14 ವರ್ಷದ ಬಾಕಿ ಸಾವನ್ನಪ್ಪಿದ್ದಳು. ಅದೇ ತಿಂಗಳ 31ರಂದು ನಡೆದ ಅಪಘಾತದಲ್ಲಿ ವೃದ್ಧರೊಬ್ಬರು ಸಾವನ್ನಪ್ಪಿದ್ದರು. ಬಳಿಕ 2022ರ ಮೇ ತಿಂಗಳಿನಲ್ಲಿ ನಡೆದ ಪ್ರಕರಣದಲ್ಲಿ ಡೆಲಿವರಿ ಬಾಯ್ ಒಬ್ಬರು ಸಾವನ್ನಪ್ಪಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X