ಬೆಂಗಳೂರಿನ ರೆಸಿಡೆನ್ಶಿಯಲ್ ಸೊಸೈಟಿಯಲ್ಲೊಂದು ತಾರತಮ್ಯ, ಅಸ್ಪೃಶ್ಯತೆ ಆಚರಣೆಯ ಪೋಸ್ಟರ್: ಜಾಲತಾಣದಲ್ಲಿ ವೈರಲ್

Date:

  • ಮನೆಕೆಲಸ ಮಾಡುವವರು, ಕಾರ್ಮಿಕರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಬಾರದು
  • ನಿಗದಿ ಮಾಡಿದ ಸ್ಥಳದಲ್ಲಿ ಮಾತ್ರ ವಿರಾಮ ಮಾಡಲು ಮತ್ತು ಊಟ ಮಾಡಲು ಬಳಸಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ಪೋಸ್ಟರ್‌ವೊಂದು ಸಾಬೀತು ಮಾಡಿದೆ. ಮನೆಕೆಲಸ ಮಾಡುವವರು, ಕಾರ್ಮಿಕರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಬಾರದು ಹಾಗೂ ಪಾರ್ಕ್‌ ಆಂಪಿಥಿಯೇಟರ್, ಗೆಜೆಬೋಸ್ ಪ್ರದೇಶಗಳನ್ನು ಬಳಸಬಾರದು ಎಂಬ ಪೋಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -

ಬೆಂಗಳೂರಿನ ರೆಸಿಡೆನ್ಶಿಯಲ್ ಸೊಸೈಟಿಯೊಂದು ಬರೆದಿರುವ ಪೋಸ್ಟರ್‌ವೊಂದನ್ನು ಟ್ವೀಟರ್‌ನಲ್ಲಿ ವಿಬಿನ್ ಬಾಬುರಾಜನ್ ಎಂಬುವವರು ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪೋಸ್ಟರ್‌ನಲ್ಲಿ ಏನಿದೆ?

ನಗರದಲ್ಲಿ ಮನೆಕೆಲಸ ಮಾಡುವವರು, ಕಾರ್ಮಿಕರು ನಾವು ಬಳಸುವ ಅಂದರೆ ಉದ್ಯಾನವನ, ಆಂಪಿಥಿಯೇಟರ್, ಗೆಜೆಬೋಸ್‌ನಲ್ಲಿ ಓಡಾಡುವುದನ್ನು ನೋಡುವುದು ಕಷ್ಟವಾಗಿದೆ. ನಾವು ಬಳಸುವ ಪ್ರದೇಶವನ್ನು ಬಳಸಬೇಡಿ ಬದಲಾಗಿ ನಿಮಗೆ ನಿಗದಿ ಮಾಡಿರುವ ಸ್ಥಳಗಳನ್ನು ನೀವು ವಿರಾಮ ಮಾಡಲು ಮತ್ತು ಊಟ ಮಾಡಲು ಬಳಸಿ ಎಂದು ಬರೆಯಲಾಗಿದೆ.

ಎಲ್ಲ ಕಟ್ಟಡಗಳಲ್ಲಿ ಕಾಯುವ ಪ್ರದೇಶಗಳನ್ನು ಮನೆಗೆಲಸ ಮಾಡುವವರು ಮತ್ತು ಕಾರ್ಮಿಕರು ಬಳಸಬಹುದು. ನಾವು ನಡೆದಾಡುವ ಪ್ರತಿ ಸ್ಥಳಗಳಲ್ಲಿ ಕಾರ್ಮಿಕರು ಸುತ್ತುವರೆದಿರುವುದನ್ನು ನೋಡಲು ಕಷ್ಟವಾಗುತ್ತದೆ. ನಮ್ಮ ಸಂಪ್ರದಾಯಗಳಿಗೆ ಅಪಚಾರವಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

ನಗರದೆಲ್ಲೆಡೆ ಇಂತಹ ಜನರು ಇರುವಾಗ ನಮ್ಮಂತಹ ನಿವಾಸಿಗಳು ಅನಾನುಕೂಲತೆಯನ್ನು ಅನುಭವಿಸುತ್ತೇವೆ. ನಮ್ಮ ಸುರಕ್ಷತೆಯು ಸಾಮಾನ್ಯ ಪ್ರದೇಶಗಳಲ್ಲಿ ಮೇಲ್ವಿಚಾರಣೆ ಮಾಡಲು ಸಾಧ್ಯವಾಗುವುದಿಲ್ಲ. ಅಡುಗೆಯವರು, ಬಡಗಿಗಳು, ಕೊಳಾಯಿ ಕೆಲಸಗಾರರು ಕಟ್ಟಡದ ಪ್ರವೇಶ ದ್ವಾರದ ಸೋಫಾಗಳಲ್ಲಿ ಕುಳಿತುಕೊಳ್ಳುತ್ತಾರೆ. ಇದರಿಂದ ನಮ್ಮ ಸಮಾಜದವರು ಅಥವಾ ಸಂಪ್ರದಾಯಸ್ಥರು ಈಗ ಈ ಆಸನಗಳ ಮೇಲೆ ಕುಳಿತುಕೊಳ್ಳುವುದನ್ನು ನಿಲ್ಲಿಸಿದ್ದಾರೆ ಎಂದು ಬರೆಯಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...