ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ?

Date:

Advertisements

ರಾಜ್ಯದಲ್ಲಿ ತರಕಾರಿ ಬೆಲೆಯು ಗಗನಕ್ಕೇರುತ್ತಿದೆ. ಜನರು ದಿನನಿತ್ಯ ಅಡುಗೆಗೆ ಬಳಸುವಂತಹ ಟೊಮೆಟೊ, ಈರುಳ್ಳಿ, ಆಲೂಗಡ್ಡೆ ದರವು ಹೆಚ್ಚಾಗುತ್ತಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡ ಟೊಮೆಟೊ, ಈರುಳ್ಳಿ ಬೆಲೆಯು ಇನ್ನೂ ಏರುಗತಿಯಲ್ಲಿದೆ.

ಹಿಂಗಾರು ಮಳೆ ಆರ್ಭಟ, ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಬೆಳೆಗಳು ನಾಶವಾಗುತ್ತಿದ್ದು, ಇದರ ಪರಿಣಾಮ ತರಕಾರಿಗಳ ಬೆಲೆಯೂ ಹೆಚ್ಚಾಗುತ್ತಿದೆ ಎಂದು ವರದಿಗಳು ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಕೃಷಿ ಕಸುಬು | ಬಯಲು ಸೀಮೆಯಲ್ಲಿ ಗಗನಕ್ಕೇರಿದ ತರಕಾರಿ ಬೆಲೆ, ಕಾರಣವೇನು?

Advertisements

ಟೊಮೆಟೊ, ಈರುಳ್ಳಿ, ಆಲೂಗಡ್ಡೆ ದರವು ಪ್ರತಿ ಕೆಜಿಗೆ 50 ರೂಪಾಯಿಯಿಂದ 80 ರೂಪಾಯಿಯ ಆಸುಪಾಸಿನಲ್ಲಿದೆ. ಇನ್ನು ಬೆಳ್ಳುಳ್ಳಿ ದರವು ಪ್ರತಿ ಕೆಜಿಗೆ 300-430 ರೂಪಾಯಿ ಆಸುಪಾಸಿನಲ್ಲಿದೆ. ನಿಂಬೆ ಹಣ್ಣಿನ ಬೆಲೆಯೂ ಹೆಚ್ಚಾಗಿದ್ದು, ಪ್ರತಿ ಕೆಜಿಗೆ 90ರಿಂದ 130 ರೂ. ಬೆಲೆಯಿದೆ.

ಲೋಕಲ್ ಸರ್ಕಲ್ ವರದಿಯೊಂದರ ಪ್ರಕಾರ ರಾಜ್ಯದಲ್ಲಿ ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ ಈ ತಿಂಗಳಲ್ಲಿ ತರಕಾರಿ ಹಣದುಬ್ಬರ ಶೇ. 9.24ಕ್ಕೆ ಏರಿಕೆಯಾಗಿದೆ. ಈ ನಡುವೆ ಭಾರತದಲ್ಲಿ ರಿಟೇಲ್ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 4.62ಕ್ಕೆ ಏರಿಕೆಯಾಗಿದೆ. ಕಳೆದ 15 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಬೆಲೆ ಹೆಚ್ಚಾಗಿದೆ.

ಇದನ್ನು ಓದಿದ್ದೀರಾ? ಕೇರಳ ಅಧಿವೇಶನ | ಮೀನು, ತರಕಾರಿ ಬೆಲೆ ಏರಿಕೆಗೆ ಖಂಡನೆ; ಪ್ರತಿಪಕ್ಷಗಳಿಂದ ಸಭಾತ್ಯಾಗ

2019ರ ಸೆಪ್ಟೆಂಬರ್‌ನಲ್ಲಿ ಆಹಾರೋತ್ಪನ್ನಗಳ ಬೆಲೆ ಏರಿಕೆ ಶೇ.5.11ರಷ್ಟಿದ್ದು, ಅಕ್ಟೋಬರ್‌ನಲ್ಲಿ ಶೇ.7.89ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರದ ಅಂಕಿ ಅಂಶದಿಂದ ತಿಳಿದು ಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X