ಪ್ರವಾಸಿ ತಾಣವಾಗಲಿದೆ ವಿಧಾನಸೌಧ; ಪ್ರವೇಶ ಶುಲ್ಕ ನಿಗದಿಗೆ ನಿರ್ಧಾರ

Date:

Advertisements

ವಿಧಾನಸೌಧವೂ ಕೂಡಾ ಶೀಘ್ರವೇ ಪ್ರವಾಸಿ ತಾಣವಾಗಲಿದೆ. ಸಾರ್ವತ್ರಿಕ ರಜಾ ದಿನಗಳ ಸಂದರ್ಭದಲ್ಲಿ ಪ್ರವಾಸಿಗರಿಗೆ ಭೇಟಿ ನೀಡಲು ಅವಕಾಶ ನೀಡಲು ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ಇದಕ್ಕೆ ಪ್ರವೇಶ ಶುಲ್ಕ ನಿಗದಿಪಡಿಸಲೂ ನಿರ್ಧರಿಸಿದೆ.

ಬೆಳಿಗ್ಗೆ 8ರಿಂದ ಸಂಜೆ 6 ಗಂಟೆವರೆಗೆ ‘ಗೈಡೆಡ್ ಟೂರ್’ ಆರಂಭಿಸಲು ಪ್ರವಾಸೋದ್ಯಮ ಇಲಾಖೆ ತೀರ್ಮಾನಿಸಿದೆ. ವಿಧಾನಸೌಧ ನೋಡಲು ಬರುವ ಪ್ರವಾಸಿಗರಿಗೆ, ಸಾರ್ವಜನಿಕರಿಗೆ ಶುಲ್ಕವನ್ನು ವಿಧಿಸಲಾಗುತ್ತದೆ. ಆನ್‌ಲೈನ್ ಮೂಲಕವೂ ಟಿಕೆಟ್ ಪಡೆಯಬಹುದಾಗಿದೆ. ಶುಲ್ಕವೆಷ್ಟು ಎಂಬುದು ಇನ್ನೂ ನಿಗದಿಯಾಗಿಲ್ಲ.

ಇದನ್ನು ಓದಿದ್ದೀರಾ? ಪ್ರವಾಸಿಗರೇ ಗಮನಿಸಿ: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗಿಲ್ಲ ಪ್ರವೇಶ

Advertisements

ಪ್ರವಾಸಿಗರನ್ನು ತಲಾ 30 ಜನರ ತಂಡವನ್ನಾಗಿ ವಿಭಜಿಸಿ ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲು, ಜೊತೆಗೆ ಪ್ರತಿ ತಂಡದ ಮೇಲ್ವಿಚಾರಣೆಗೆ ಪ್ರವಾಸಿ ಅಧಿಕಾರಿಗಳನ್ನು ಕಡ್ಡಾಯವಾಗಿ ನೇಮಿಸಲಾಗುತ್ತದೆ. ಪ್ರತಿ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಮ ವಿವರಗಳನ್ನು ಧಾನಸೌಧದ ಭದ್ರತಾ ವಿಭಾಗಕ್ಕೆ ಆಯಾ ದಿನವೇ ಸಲ್ಲಿಸಲು ಸೂಚಿಸಲಾಗಿದೆ.

ಆದರೆ ವಿಧಾನಸೌಧದಲ್ಲಿ ಕೆಲಸ ಕಾರ್ಯಗಳಿಗೆ ತೆರಳುವ ಸಾರ್ವಜನಕರೂ ಕೂಡಾ ಇನ್ನು ಮುಂದೆ ಟಿಕೆಟ್ ಪಡೆದು ಶುಲ್ಕ ಪಾವತಿಸಬೇಕಾಗುತ್ತದೆಯೇ ಎಂಬ ಪ್ರಶ್ನೆಯಿದೆ. ವಿಧಾನಸೌಧ ವೀಕ್ಷಣೆಗೆ ಬಂದವರನ್ನುಮತ್ತು ತಮ್ಮ ವೈಯಕ್ತಿಕ ಕೆಲಸಕ್ಕಾಗಿ ಬಂದವರನ್ನ ಹೇಗೆ ವಿಂಗಡಿಸಲಾಗುತ್ತದೆ ಎಂಬ ಗೊಂದಲವೂ ಇದೆ.

ಕೆಲವು ನಿಯಮಗಳನ್ನು ಕೂಡಾ ಪ್ರವಾಸಿಗರು ಕಡ್ಡಾಯವಾಗಿ ಪಾಲಿಸಬೇಕಿದೆ. ಪ್ರವಾಸಿಗರ ಅಧಿಕೃತ ಗುರುತಿನ ಚೀಟಿಯನ್ನು ಪರಿಶೀಲಿಸಿದ ನಂತರವೇ ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಕಟ್ಟಡದ ಯಾವುದೇ ಭಾಗಕ್ಕೆ, ಪ್ರತಿಮೆಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X