ಉತ್ತಮ ಅಭ್ಯರ್ಥಿಗೆ ಮತಚಲಾಯಿಸಿ ವಿಧಾನಸಭೆಗೆ ಕಳುಹಿಸಿ : ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

Date:

  • ವಿಧಾನಸಭೆಗೆ ಕಳುಹಿಸುವಂತ ಪ್ರತಿನಿಧಿಯ ಬಗ್ಗೆ ಮೊದಲು ನಾವೆಲ್ಲರೂ ತಿಳಿದುಕೊಳ್ಳಬೇಕು
  • ನಮ್ಮ ದೇಶ ಹಾಗೂ ರಾಜ್ಯವನ್ನು ಪ್ರಗತಿಯ ಪಥದತ್ತ ನಡೆಸಲು ರಾಜ್ಯಕ್ಕೆ ಒಳ್ಳೆಯ ಪ್ರತಿನಿಧಿ ಬೇಕು

ನಮ್ಮ ಹಕ್ಕುಗಳು ಎಷ್ಟು ಪ್ರಾಮುಖ್ಯವೋ ನಮ್ಮ ಕರ್ತವ್ಯಗಳು ಕೂಡಾ ಅಷ್ಟೇ ಪ್ರಾಮುಖ್ಯವಾಗಿದ್ದು, ಎಲ್ಲರೂ ಇರುವಂತಹ ಹಕ್ಕುಗಳ ಬಗ್ಗೆ ನಾಗರಿಕರಿಗೆ ಸರಿಯಾದ ಮಾಹಿತಿಯನ್ನು ನೀಡಿ ಉತ್ತಮ ಅಭ್ಯರ್ಥಿಗೆ ಮತಚಲಾಯಿಸಿ ವಿಧಾನಸಭೆಗೆ ಕಳುಹಿಸಬೇಕು ಎಂದು ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರು ತಿಳಿಸಿದರು.

- Advertisement -

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮತ್ತು ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾ ಅಧಿಕಾರಿ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಶನಿವಾರ ಆಯೋಜಿದ್ದ ಬೃಹತ್ ವಾಕಥಾನ್ ಕಾರ್ಯಕ್ರಮಕ್ಕೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರು ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಈ ವೇಳೆ ಮಾತನಾಡಿದ ಅವರು, “ವಿಧಾನಸಭಾ ಚುನಾವಣೆಯಿಂದ ಆಯ್ಕೆಯಾಗಿ ಬರುವಂತಹ ಪ್ರತಿನಿಧಿಗಳು ವಿಧಾನಸೌಧಕ್ಕೆ ಬಂದು, ವಿಧಾನಸಭಾ ಕಾರ್ಯಕಲಾಪಗಳಲ್ಲಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಚರ್ಚಿಸುವಂತಹ ಯೋಜನೆಗಳು, ಪಾಲಿಸಿಗಳು ಕಾರ್ಯರೂಪಕ್ಕೆ ತರುವಂತಹವೆಲ್ಲವೂ ನಮ್ಮೆಲ್ಲರ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ, ವಿಧಾನಸಭೆಗೆ ಕಳುಹಿಸುವಂತ ಪ್ರತಿನಿಧಿಯ ಬಗ್ಗೆ ನಾವೆಲ್ಲರೂ ಮೊದಲು ತಿಳಿದುಕೊಂಡು ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು” ಎಂದು ತಿಳಿಸಿದರು.

“ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಕಾರ್ಯನಿರತರಾಗಿರುವ ವಿದ್ಯಾರ್ಥಿಗಳೆಲ್ಲರೂ ನಿಮ್ಮ-ನಿಮ್ಮ ಕ್ಷೇತಗಳಲ್ಲಿ ಎಷ್ಟು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಪಾಲ್ಗೊಂಡಿದ್ದಾರೆ. ಅವರ ಬಗ್ಗೆ ಮತದಾರರಿಗೆ ತಿಳಿದಿದೆಯೇ, ಯಾರು ಉತ್ತಮ ಅಭ್ಯರ್ಥಿ, ಮತಗಟ್ಟೆಗಳು ಎಲ್ಲಿವೆ, ಅಲ್ಲಿಗೆ ಹೇಗೆ ಹೋಗಬೇಕು ಹಾಗೂ ಏನೆಲ್ಲಾ ವ್ಯವಸ್ಥೆಯಿದೆ ಎಂಬುದರ ಬಗ್ಗೆ ನಿಮ್ಮ ಬಡಾವಣೆಯಲ್ಲಿರುವ ಮತದಾರರಿಗೆ ತಿಳಿಸುವಂತಹ ಕೆಲಸ ಮಾಡಬೇಕು” ಎಂದು ಹೇಳಿದರು.

“ನಮ್ಮ ರಾಜ್ಯಕ್ಕೆ ಒಳ್ಳೆಯ ಪ್ರತಿನಿಧಿ ಬರಬೇಕು. ಆ ಪ್ರತಿನಿಧಿ ನಮ್ಮ ದೇಶ ಹಾಗೂ ರಾಜ್ಯವನ್ನು ಪ್ರಗತಿಯ ಪಥದತ್ತ ನಡೆಸುವಂತಾಗಬೇಕು. ಅವರು ಮಾಡುವಂತಹ ಪ್ರಗತಿಗೆ ನಾವೆಲ್ಲರೂ ಸಹಕಾರ ನೀಡಬೇಕು. ಸಂವಿಧಾನದಲ್ಲಿರುವ ಮೂಲಭೂತ ವಿಷಯಗಳನ್ನು ತಿಳಿದು, ಅದರ ಬಗ್ಗೆ ನಾಗರಿಕರಿಗೆ ತಿಳಿಸುವ ಕೆಲಸ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮೋದಿ ರೋಡ್‌ ಶೋ | 45 ನಿಮಿಷದ ಮೆರವಣಿಗೆಗೆ 5 ಗಂಟೆ ರಸ್ತೆಗಳು ಬಂದ್; ಬಸವಳಿದ ಬೆಂಗಳೂರು

ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಮಾತನಾಡಿ, “ನಗರದಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಕೈಜೋಡಿಸಿ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವದ ಮಹಾಹಬ್ಬದ ದಿನದಂದು ಎಲ್ಲರೂ ಬಂದು ಮತಚಲಾಯಿಸುವ ಮೂಲಕ ಮತದಾನದ ಹಬ್ಬವನ್ನು ಯಶಸ್ವಿಗೊಳಿಸಬೇಕು” ಎಂದು ತಿಳಿಸಿದರು.

ಈ ವೇಳೆ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ, ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್, ಬೆಂಗಳೂರು ಐಕಾನ್ ಆದ ಮೋಹನ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.                                                                                                                           

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...