ಬೆಂಗಳೂರು | ಸಂಚಾರಕ್ಕೆ ಯೋಗ್ಯವಲ್ಲದ ಅಂಡರ್‌ಪಾಸ್‌ ಬಂದ್: ತುಷಾರ್ ಗಿರಿನಾಥ್

Date:

  • ಯುವತಿ ಸಾವಿನಿಂದ ಬಿಬಿಎಂಪಿ ವಿರುದ್ಧ ಸಾರ್ವಜನಿಕರ ಆಕ್ರೋಶ
  • 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಿದ ಚಂಡಮಾರುತ

ಬೆಂಗಳೂರಿನಲ್ಲಿ ಭಾನುವಾರ ಧಾರಾಕಾರ ಮಳೆಯಾಗಿರುವುದರಿಂದ ಇಡೀ ನಗರವೇ ಕಂಗೆಟ್ಟಿದೆ. ಯುವತಿ ಸಾವಿನಿಂದಾಗಿ ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಬಳಿಕ ಎಚ್ಚೆತ್ತುಕೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಸಂಚಾರಕ್ಕೆ ಯೋಗ್ಯವಲ್ಲದ ಅಂಡರ್‌ಪಾಸ್‌ಗಳನ್ನು ಮುಚ್ಚುವುದಾಗಿ ಹೇಳಿದೆ.

“ನಗರದಲ್ಲಿರುವ ಕೆಳಸೇತುವೆಗಳ ಸರ್ವೇ ನಡೆಸಲಾಗುತ್ತಿದ್ದು, ಡ್ರೈನೇಜ್ ಇಲ್ಲದ ಅಂಡರ್‌ಪಾಸ್‌ಗಳನ್ನು ಮುಚ್ಚಲಾಗುವುದು. ಲೋಪ ಕಂಡುಬಂದ ಕೆಳಸೇತುವೆಗಳನ್ನು ರಿಪೇರಿ ಮಾಡಿ ಪುನಾರಂಭಿಸಲಾಗುವುದು” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಗರದಲ್ಲಿ ಭಾನುವಾರ ಮಧ್ಯಾಹ್ನ 3:15 ರಿಂದ 4 ಗಂಟೆಯವರೆಗೆ 50 ಮಿ,ಮೀ ಮಳೆಯಾಗಿದೆ. ನಗರದಲ್ಲಿ 18 ಅಂಡರ್‌ಪಾಸ್​ಗಳಿವೆ. ಭಾನುವಾರ ಕೆ ಆರ್‌ ಸರ್ಕಲ್‌ ಕೆಳಸೇತುವೆಯಲ್ಲಿ ಮೃತಪಟ್ಟ ಯುವತಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡುತ್ತೇವೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ರಾಜಕಾಲುವೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ, ಆ ಭಾಗದ 20 ಮನೆಗಳಿಗೆ ಮಳೆ ನೀರು ನುಗ್ಗಿದೆ. ಭಾನುವಾರ ನಗರದಲ್ಲಿ ಮೋಚಾ ಚಂಡಮಾರುತ ಸುಮಾರು 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಿದೆ. ಇದರಿಂದ ಮರದ ಎಲೆಗಳು ಉದುರಿ ಹೋಗಿವೆ. ಗಾಳಿಯ ರಭಸಕ್ಕೆ ಅಂಡರ್‌ಪಾಸ್‌ನಲ್ಲಿ ನೀರು ಹೋಗುವ ಸ್ಥಳದಲ್ಲಿ ಎಲೆಗಳು ತುಂಬಿರುವುದರಿಂದ ನೀರು ಪೋಲಾಗದೆ ಅನಾಹುತ ಸಂಭವಿಸಿದೆ. ನಗರದಲ್ಲಿ ಸಂಚಾರಕ್ಕೆ ಸೂಕ್ತವಲ್ಲದ ಅಂಡರ್ ಪಾಸ್ ಬಂದ್​ ಮಾಡುತ್ತೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅವೈಜ್ಞಾನಿಕ ಕೆಳಸೇತುವೆಗೆ ಯುವತಿ ಬಲಿ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಭಾನುವಾರ ಸುರಿದ ಭಾರೀ ಮಳೆಗೆ ಬೆಂಗಳೂರು ಸ್ತಭ್ದವಾಗಿದೆ. ಭೀಕರ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ನಗರದಲ್ಲಿ ನೂರಾರು ಮರಗಳು ನೆಲಕ್ಕೊರಗಿವೆ. ರಸ್ತೆ ತುಂಬಾ ಮರದ ಕೊಂಬೆಗಳು ಬಿದ್ದಿವೆ. ಮರ ಬಿದ್ದು ಕಾರು ಬೈಕ್ ಜಖಂ ಆಗಿವೆ.

ಬೆಂಗಳೂರಿನಲ್ಲಿರುವ ಅವ್ಯವಸ್ಥೆ, ಅವೈಜ್ಞಾನಿಕ ರಸ್ತೆ, ಅಂಡರ್​ ಪಾಸ್​ಗಳಿಗಾಗಿ ಜನ ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರು | ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಕೂಡಲೇ ಪರಿಹರಿಸಿ : ಬಿಬಿಎಂಪಿ ಮುಖ್ಯ ಆಯುಕ್ತ

ಸಹಾಯ ತಂತ್ರಾಂಶದ ಮುಖಾಂತರ ಬಿಬಿಎಂಪಿ ವಲಯವಾರು ಮಳೆಹಾನಿ ಸಂಬಂಧಿಸಿದ ಸುಮಾರು 70 ದೂರುಗಳು ಬಂದಿದ್ದು, ಮೂರು ದಿನಗಳೊಳಗಾಗಿ ಬಂದಿರುವಂತಹ ದೂರುಗಳನ್ನು ಪರಿಹರಿಸಿ, ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ವಹಿಸುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ದೂರವಾಣಿ ಮುಖಾಂತರ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೇಂದ್ರ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಭೇಟಿ ನೀಡಿ ದೂರುಗಳ ಮಾಹಿತಿ ಪರಿಶೀಲಿಸಿದರು.

ಬಿಬಿಎಂಪಿ

“ವಿಪತ್ತು ನಿರ್ವಹಣೆಗಾಗಿ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ತಕ್ಷಣವೇ ನೇಮಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ವಿಶೇಷ ಆಯುಕ್ತ (ಮಾಹಿತಿ ತಂತ್ರಜ್ಞಾನ) ಉಜ್ವಲ್ ಕುಮಾರ್ ಗೋಷ್ ಹಾಗೂ ಬಿಬಿಎಂಪಿ ಉಪ ಆಯುಕ್ತರು (ಆಡಳಿತ) ಮಂಜುನಾಥ ಸ್ವಾಮಿ.ಬಿ.ಎಸ್ ರವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖ್ಯಾತ ನಿರ್ದೇಶಕ ಶ್ರೀಪಾದ ಭಟ್‌ಗೆ ‘ರಂಗ ಭೂಪತಿ’ ಪ್ರಶಸ್ತಿ

ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ...

ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ...

‘ಬೆಂಗಳೂರು ಕೇಂದ್ರ’ ಮರಳಿ ಕಾಂಗ್ರೆಸ್ ವಶಕ್ಕೆ : ಸಚಿವ ಜಮೀರ್ ವಿಶ್ವಾಸ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಈಗ ಅದನ್ನು...

ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

"ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ...