ಬೆಂಗಳೂರಿನಲ್ಲಿ ದಿನವಿಡೀ ಸುರಿದ ಮಳೆ: ಹಲವು ಪ್ರದೇಶಗಳು ಜಲಾವೃತ

Date:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು ಬೆಂಗಳೂರಿನಲ್ಲಿ ದಿನವಿಡೀ ಮಳೆ ಸುರಿದು ಸಾರ್ವಜನಿಕರು ದಿನನಿತ್ಯದ ಕೆಲಸ ಕಾರ್ಯಗಳಿಗೆ ತೊಂದರೆಯುಂಟಾಗಿದೆ. ಭಾರಿ ಮಳೆಯಿಂದಾಗಿ ಉದ್ಯಾನನಗರಿಯ ಹಲವು ಬಡಾವಣೆಗಳು ಜಲಾವೃತಗೊಂಡವು.

- Advertisement -

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಉತ್ತರ ಬೆಂಗಳೂರಿನ ಅತಿದೊಡ್ಡ ಟೆಕ್ ಪಾರ್ಕ್‍ಗಳಲ್ಲಿ ಒಂದಾದ ಮಾನ್ಯತಾ ಟೆಕ್ ಪಾರ್ಕ್ ಕೂಡ ಜಲಾವೃತಗೊಂಡಿದೆ. ಈ ಹಿನ್ನೆಲೆ ಕೆಲವು ನೌಕರರು ತಮ್ಮ ಕಚೇರಿಗೆ ತಲುಪಲಾಗದೇ ಸಂಕಷ್ಟ ಅನುಭವಿಸಬೇಕಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಮಾನ್ಯತಾ ಟೆಕ್ ಪಾರ್ಕ್ ಹಿಂಭಾಗದ ರಾಮಯ್ಯ ಲೇಔಟ್ ರಸ್ತೆಗಳು ಮಳೆ ನೀರು ಹಾಗೂ ರಾಜಕಾಲುವೆ ನೀರಿನಿಂದ ತುಂಬಿ ಹರಿಯುತ್ತಿದೆ. ಎಲಿಮೆಂಟ್ಸ್ ಮಾಲ್ ಮುಂಭಾಗದ ರಸ್ತೆ ನದಿಯಂತೆ ಮಾರ್ಪಾಡುಗೊಂಡಿದ್ದು, ರಸ್ತೆಯಲ್ಲಿ ಹಲವರು ವಾಹನಗಳು ಕೆಟ್ಟು ನಿಂತಿದೆ. ಹಾಗಾಗಿ ಎರಡು ಭಾಗದ ರಸ್ತೆಗಳನ್ನು ಕೂಡ ಬ್ಲಾಕ್ ಮಾಡಲಾಗಿದೆ. ಥಣಿಸಂದ್ರ ಮುಖ್ಯರಸ್ತೆ ಕೂಡ ಸಂಪೂರ್ಣ ಜಲಾವೃತಗೊಂಡಿದೆ.

ಬೆಂಗಳೂರಿನಲ್ಲಿ ಒಂದು ವಾರದವರೆಗೆ ಮಳೆ ಮುಂದುವರಿಯುವ ಸೂಚನೆ ಇದೆ. ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ಹವಾಮಾನ ವರದಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ ತಾಪಮಾನ 25.4 ° C ಮತ್ತು ಕನಿಷ್ಠ ತಾಪಮಾನ 20.7 ° C ಮತ್ತು 3.3 ಮಿಮೀ ಮಳೆ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!

ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 15 ರಂದು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಅಥವಾ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಹೆಚ್ಚುವರಿಯಾಗಿ, ಚಾಮರಾಜನಗರ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಅಕ್ಟೋಬರ್ 16ರ ವೇಳೆಗೆ ಭಾರೀ ಮಳೆಯಾಗಲಿದ್ದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಉತ್ತರ ಒಳ ಕರ್ನಾಟಕದ ಧಾರವಾಡ, ಗದಗ ಮತ್ತು ಹಾವೇರಿಯ ಕೆಲವು ಭಾಗಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್ 17 ರವರೆಗೆ, ಕರಾವಳಿ ಕರ್ನಾಟಕದಾದ್ಯಂತ ಅಲ್ಲಲ್ಲಿ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೋಲಾರ, ಕೊಡಗು ಮತ್ತು ರಾಮನಗರದಂತಹ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯೊಂದಿಗೆ ದಕ್ಷಿಣ ಒಳನಾಡಿನ ಭಾಗಗಳಲ್ಲಿಯೂ ವರುಣನ ಸಿಂಚನವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...