ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ; ಇದು ದುಶ್ಯಾಸನ ರಾಜ್ಯವೆಂದ ಹೈಕೋರ್ಟ್‌

Date:

Advertisements

ಪ್ರೇಮಿಗಳಿಬ್ಬರು ಊರು ತೊರೆದು ಹೋದದ್ದಕ್ಕೆ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್‌ ಆಕ್ರೋಶ ವ್ಯಕ್ತಪಡಿಸಿದೆ. ಮಹಿಳೆಯ ನೆರವಿಗೆ ಯಾರೊಬ್ಬರೂ ಮುಂದಾಗಿಲ್ಲ. ಇದು ದುಶ್ಯಾಸನ ರಾಜ್ಯವೆಂದು ಹೇಳಿದೆ.

ಬೆಳಗಾವಿಯ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಘಟನೆ ಸಂಬಂಧ ಹೈಕೋರ್ಟ್‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು ಪ್ರಕರಣದ ವಿಚಾರಣೆ ನಡೆಸಿದೆ.

“ದ್ರೌಪದಿಯನ್ನು ವಿವಸ್ತ್ರಗೊಳಿಸಿದಾಗ ರಕ್ಷಿಸಲು ಕೃಷ್ಣನಿದ್ದ. ಆದರೆ, ಬೆಳಗಾವಿ ಮಹಿಳೆಯ ನೆರವಿಗೆ ಯಾರು ಬಂದಿಲ್ಲ. ಇದು ದುಶ್ಯಾಸನರ ಕಾಲವಾಗಿದೆ. ಇಲ್ಲಿ ಕಾನೂನಿನ ಭಯವಿಲ್ಲ ಎಂಬ ಸಂದೇಶ ಹೋಗುತ್ತಿದೆ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

Advertisements

“ಮಗ ಮಾಡಿದ ತಪ್ಪಿಗೆ ತಾಯಿಗೆ ಶಿಕ್ಷೆ ನೀಡಲಾಗಿದೆ. ಸಂತ್ರಸ್ತೆಯನ್ನು ಪ್ರಾಣಿಗಿಂತ ಕೀಳಾಗಿ ನಡೆಸಿಕೊಳ್ಳಲಾಗಿದೆ. ಆ ಸಮಯದಲ್ಲಿ ಸಂತ್ರಸ್ತೆ ಎದುರಿಸಿರುವ ನೋವನ್ನು ಊಹಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

“ಟಿವಿಗಳಲ್ಲಿ ನಡೆಯುವ ಸಂಭಾಷಣೆಯ ವಿರುದ್ಧ ಕ್ರಮಕ್ಕೆ ಮುಂದಾಗುವ ಆಯೋಗ, ಈಗ ಎಲ್ಲಿದೆ. ಮಹಿಳೆಯನ್ನು ಹೀನಾಯವಾಗಿ ಹಿಂಸಿಸಲಾಗಿದೆ. ಆದರೆ, ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗ ಏನು ಮಾಡುತ್ತಿವೆ” ಎಂದು ಕಿಡಿಕಾರಿದೆ.

“ಸಂತ್ರಸ್ತೆಗೆ ಅತ್ಯುತ್ತಮ ಚಿಕಿತ್ಸೆ ಮತ್ತು ಕೌನ್ಸೆಲಿಂಗ್ ಅಗತ್ಯವಿದೆ. ಮಹಿಳೆಗೆ ಚಿಕಿತ್ಸೆ ನೀಡಲಾಗಿದೆಯೇ? ಪೊಲೀಸರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ” ಎಂದು ಎಂಬುದನ್ನು ವರದಿ ನೀಡುವಂತೆ ಅಡ್ವೋಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರಿಗೆ ಸೂಚನೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X