ಪಶ್ಚಿಮ ಬಂಗಾಳ | ಅತ್ಯಾಚಾರ ತಡೆ ಮಸೂದೆ ಅಂಗೀಕಾರ

Date:

Advertisements

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಅತ್ಯಾಚಾರ ತಡೆ ಮಸೂದೆಯನ್ನು ಮಂಡಿಸಿದ್ದು ಮಸೂದೆ ಅಂಗೀಕಾರವಾಗಿದೆ. ಮಸೂದೆಯು ಅತ್ಯಾಚಾರದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲು ಅವಕಾಶ ನೀಡುವ ಮಸೂದೆಯಾಗಿದೆ.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಮಸೂದೆಯಡಿ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆ ಸಾವನ್ನಪ್ಪಿದರೆ, ಅತ್ಯಾಚಾರ ಮಾಡಿವುದು ದೃಢಪಟ್ಟರೆ ಆರೋಪಿಗೆ ಜೀವಾವಧಿ ಶಿಕ್ಷೆಯನ್ನೂ ವಿಧಿಸಬಹುದು.

Advertisements

ಅಪರಾಜಿತಾ ಮಹಿಳೆ ಮತ್ತು ಮಕ್ಕಳ ಮಸೂದೆ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನು ಮತ್ತು ತಿದ್ದುಪಡಿ ಮಸೂದೆ)-2024 ಅನ್ನು ಸರ್ಕಾರ ಮಂಡಿಸಿದ್ದು, ಇದರಲ್ಲಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಅಪರಾಧಗಳಿಗೆ ಸಂಬಂಧಿಸಿದ ಹೊಸ ನಿಬಂಧನೆಗಳನ್ನು ಪರಿಚಯಿಸಲಾಗಿದೆ.

ಇನ್ನು ಜಿಲ್ಲಾ ಮಟ್ಟದಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸಲು ಈ ಮಸೂದೆಯಲ್ಲಿ ಪ್ರಸ್ತಾಪಿಸುತ್ತದೆ. ಈ ವಿಶೇಷ ಕಾರ್ಯಪಡೆಗೆ ‘ಅಪರಾಜಿತಾ ಟಾಸ್ಕ್ ಫೋರ್ಸ್’ ಎಂದು ಹೆಸರಿಡಲಾಗಿದೆ.

ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನಕ್ಕೆ ಕರೆ ನೀಡಿತ್ತು. ಹಾಗೆಯೇ ಮಸೂದೆ ಮಂಡಿಸುವ ಭರವಸೆಯನ್ನು ನೀಡಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ನಿಧನ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು...

BREAKING NEWS | ಬೆಂಗಳೂರಿನಲ್ಲಿ ಸ್ಫೋಟ: ಬಾಲಕ ಸಾವು; 10ಕ್ಕೂ ಅಧಿಕ ಮನೆಗೆ ಹಾನಿ

ಬೆಂಗಳೂರು ನಗರದ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ...

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ವಿಧಿವಶ

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (90)...

Download Eedina App Android / iOS

X