ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್

Date:

Advertisements

ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಅವರು ಬಂಗಾಳಿ ನಟಿಯೊಬ್ಬರು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಆಗಸ್ಟ್ 19ರಂದು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಬೆನ್ನಲ್ಲೇ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ಬಂಗಾಳಿ ನಟಿಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ರಂಜಿತ್ ವಿರುದ್ಧ ಪ್ರಕರಣವೂ ದಾಖಲಾಗಿದೆ.

ಇದನ್ನು ಓದಿದ್ದೀರಾ? ಮಲಯಾಳಂ ಚಿತ್ರರಂಗದಲ್ಲಿ ಯಾವುದೇ ಶಕ್ತಿ ಕೇಂದ್ರವಿಲ್ಲ: ಮೌನ ಮುರಿದ ನಟ ಮಮ್ಮುಟ್ಟಿ

Advertisements

2009ರಲ್ಲಿ ‘ಪಲೇರಿಮಾಣಿಕ್ಯಂ’ ಚಿತ್ರದ ಬಗ್ಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ನಟಿಗೆ ಕಿರುಕುಳ ನೀಡಲು ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಯತ್ನಿಸಿದ್ದ ಆರೋಪವನ್ನು ಹೊತ್ತಿದ್ದಾರೆ.

ಆ ಸಮಯದಲ್ಲಿ ಹಲವಾರು ಸವಾಲುಗಳು ನನ್ನ ಮುಂದಿತ್ತು, ಬೆಂಬಲವೂ ಸಿಕ್ಕಿಲ್ಲ. ಆದ್ದರಿಂದ ದೂರು ದಾಖಲಿಸುವ ಧೈರ್ಯ ಇರಲಿಲ್ಲ ಎಂದು ನಟಿ ಹೇಳಿದ್ದಾರೆ.

ರಂಜಿತ್ ಈ ಆರೋಪಗಳನ್ನು ನಿರಾಕರಿಸಿದ್ದು, ಇದು ತನ್ನ ವಿರುದ್ಧ ದೊಡ್ಡ ಪಿತೂರಿಯ ಭಾಗವೆಂದು ಹೇಳಿದ್ದಾರೆ. ನಟಿಯ ವಿರುದ್ಧ ತಾನೇ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ರಂಜಿತ್ ವಿರುದ್ಧ ದೂರು ದಾಖಲಿಸಿದ್ದು ಇದೀಗ ರಂಜಿತ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ನಿಧನ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು...

BREAKING NEWS | ಬೆಂಗಳೂರಿನಲ್ಲಿ ಸ್ಫೋಟ: ಬಾಲಕ ಸಾವು; 10ಕ್ಕೂ ಅಧಿಕ ಮನೆಗೆ ಹಾನಿ

ಬೆಂಗಳೂರು ನಗರದ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ...

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ವಿಧಿವಶ

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (90)...

Download Eedina App Android / iOS

X