ಏಕರೂಪ ಸಿನೆಮಾ ದರ ನಿಯಮಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

Date:

Advertisements

ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ ₹200 ಮೊತ್ತದ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ರಾಜ್ಯ ಸರ್ಕಾರವು ‘ಕರ್ನಾಟಕ ಸಿನಿಮಾ, ನಿಯಂತ್ರಣ ಮತ್ತು ತಿದ್ದುಪಡಿ ನಿಯಮಗಳು-2025’ಕ್ಕೆ ತಿದ್ದುಪಡಿ ತಂದು ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಟಿಕೆಟ್‌ ದರ ಗರಿಷ್ಠ 200 ಏಕರೂಪ ದರ ನಿಗದಿಪಡಿಸಿತ್ತು. ಜನಸಾಮಾನ್ಯರು ಮುಕ್ತವಾಗಿ ಸ್ವಾಗತಿಸಿದ್ದರು.

ಆದರೆ, ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಫ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್‌ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್‌ನ ಷೇರುದಾರ ಶಂತನು ಪೈ, ಕೀಸ್ಟೋನ್ ಎಂಟರ್‌ಟೈನ್‌ಮೆಂಟ್ ಹಾಗೂ ವಿ.ಕೆ.ಫಿಲ್ಡ್ ಅವರು 200 ಏಕರೂಪ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ತಡೆ ನೀಡಬೇಕೆಂದು ಕೋರಿ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದರು.

ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಪೀಠ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ NWKRTC ಅಧ್ಯಕ್ಷ ಸ್ಥಾನದಿಂದ ವಜಾ

ಸಹಕಾರ ಸಚಿವರಾಗಿದ್ದ ಕೆ ಎನ್ ರಾಜಣ್ಣರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಮತ್ತೋರ್ವ...

ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ: ಷರತ್ತು ವಿಧಿಸಿ ಸಮೀಕ್ಷೆಗೆ ಅನುಮತಿ

ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ...

BREAKING | ಒಳಮೀಸಲಾತಿ; ಅನ್ಯಾಯ ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ ಅಲೆಮಾರಿಗಳು

ಒಳಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಮತ್ತು ಅತಿ ಸೂಕ್ಷ್ಮ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು...

Breaking News | ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ನಿಧನ

ಜನಪ್ರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ಅವರು ವಯೋಸಹಜವಾಗಿ ಬುಧವಾರ ಸಾವನ್ನಪ್ಪಿದ್ದಾರೆ....

Download Eedina App Android / iOS

X