ಬಿಸಿಲು ನೋಡಿ 30 ದಿನವಾಗಿದೆ, ನನಗೆ ವಿಷ ಕೊಟ್ಟು ಬಿಡಿ: ನ್ಯಾಯಾಧೀಶರ ಮುಂದೆ ನಟ ದರ್ಶನ್ ಮನವಿ

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಆರೋಪಿ ನಟ ದರ್ಶನ್, ಕೋರ್ಟ್ ನಲ್ಲಿ ಜಡ್ಜ್ ಮುಂದೆ ತನಗೆ ವಿಷಬೇಕು ಎಂದು ಕೇಳಿದ್ದಾರೆ. ನಟ ದರ್ಶನ್ ಬೇಡಿಕೆ ಕೇಳಿದ ಜಡ್ಜ್ ಕೂಡ ಆಶ್ಚರ್ಯ ಪಟ್ಟಿದ್ದಾರೆ.

- Advertisement -

ವಿಷ ಕೇಳಿದ ದರ್ಶನ್‌ಗೆ ಹಾಗೆಲ್ಲಾ ಕೇಳದಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಜೈಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ಮಧ್ಯಾಹ್ನ ನೀಡುವುದಾಗಿ ನ್ಯಾಯಾಧೀಶರು ಇದೇ ವೇಳೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲಿನ ಕಠಿಣ ನಿಯಮಗಳಿಂದ ಅವರಿಗೆ ನರಕಯಾತನೆ ಉಂಟಾಗುತ್ತಿದೆ. ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾಲ್​ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್​ಗೆ ಶಾಕ್ ತಂದಿದೆ. ಮಧ್ಯಾಹ್ನದ ವಿಚಾರಣೆಯಲ್ಲಿ ತಲೆದಿಂಬು, ಹಾಸಿಗೆ ಕೋರಿದ್ದ ದರ್ಶನ್‌ ಮನವಿಗೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶ ನೀಡಲಿದೆ.

ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಸಂಬಂಧ ನ್ಯಾಯಾಲಯದ ಅನುಮತಿ ಕೋರಿ ಜೈಲು ಪ್ರಾಧಿಕಾರವು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಹ ಇಂದು ನ್ಯಾಯಾಲಯ ತೀರ್ಪು ನೀಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಕೆಪಿಎಸ್‌ಸಿ ಕಚೇರಿ ಸೇರಿ ಹಲವೆಡೆ ಇಡಿ ದಾಳಿ

ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಅಕ್ರಮ ನೇಮಕಾತಿ ಆರೋಪ ಸಂಬಂಧಿಸಿದಂತೆ...

ಬಿಹಾರ | ಅಶೋಕಧಾಮ ದೇವಾಲಯದಲ್ಲಿ ಕಾಲ್ತುಳಿತ; 7 ಮಂದಿ ಸಾವು, ಹಲವರಿಗೆ ಗಾಯ

ಬಿಹಾರದ ಲಖಿಸರಾಯ್‌ನಲ್ಲಿರುವ ಅಶೋಕಧಾಮ ದೇವಾಲಯದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ...

ಮಾಫಿ ಸಾಕ್ಷಿ ವಿರುದ್ಧ ಆಕ್ಷೇಪಕ್ಕೆ ಸಹ ಆರೋಪಿಗೆ ಅವಕಾಶವಿಲ್ಲ: ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಹ ಆರೋಪಿ ಮಾಫಿ ಸಾಕ್ಷಿ (Approver) ಆಗುವುದನ್ನು...

ಭಾರತೀಯ ಟೇಬಲ್ ಟೆನ್ನಿಸ್ ಫೆಡರೇಶನ್ ಅಮಾನತು; ಕ್ರೀಡಾ ಸಚಿವಾಲಯ ಆದೇಶ

ದೇಶದ ರಾಷ್ಟ್ರೀಯ ಕ್ರೀಡಾ ಸಂಸ್ಥೆಯಲ್ಲಿನ ಆಡಳಿತಾತ್ಮಕ ಬಿಕ್ಕಟ್ಟು ಮತ್ತು ನಿಯಮಗಳ ಉಲ್ಲಂಘನೆಯ...