ಅಲ್ಲಮನ ಅನನ್ಯ ಪದಪ್ರಯೋಗಗಳು | ನೋಟದ ಸುಖ

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು... ಆಗಾಗ

ಓಡಿನಲುಂಟೆ ಕನ್ನಡಿಯ ನೋಟ?
ಮರುಳಿನ ಕೂಟ ವಿಪರೀತಚರಿತ್ರ.
ನೋಟದ ಸುಖ ತಾಗಿ ಕೋಟಲೆಗೊಳ್ಳುತ್ತಿದೆ ಲೋಕ
ಗುಹೇಶ್ವರನೆಂಬ ಲಿಂಗವು ಒಬ್ಬನೆ ಅಚಲ. ಉಳಿದವರೆಲ್ಲರೂ ಸೂತಕಿಗಳು.

- Advertisement -

ಪದಾರ್ಥ:
ಓಡು = ಮಡಕೆಯ ತುಂಡು
ವಿಪರೀತ = ವಿರುದ್ಧ
ಚರಿತ್ರ = ನಡವಳಿಕೆ
ಕೋಟಲೆ = ತೊಂದರೆ
ಸೂತಕಿ = ಅಬಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವಚನಾರ್ಥ:
ಕಣ್ಣು, ಕನ್ನಡಿ, ಕಾಣ್ಕೆ ಇವು ವಚನದಲ್ಲಿ ಅಲ್ಲಮ ಬಳಸಿರುವ ಮೂರು ರೂಪಕಗಳು. ಕನ್ನಡಿಯಲ್ಲಿ ಕಣ್ಣಿರಿಸಿದಾಗ ಕಾಣುವ ಕಾಣುವಿಕೆ ಮಣ್ಣಿನ ಮಡಕೆಯ ತುಂಡಿನಲ್ಲಿ ಕಂಡುಬರುವುದೇ? ಮಣ್ಣಿನ ಮಡಕೆಯ ಚೂರಿನಲ್ಲಿ ತನ್ನ ಪ್ರತಿಬಿಂಬ ಕಂಡೀತು ಎಂಬ ಅಜ್ಞಾನ ಮತ್ತು ಭ್ರಮೆಯಿಂದ ಮರುಳುಗೊಂಡ ಲೋಕದ ಜನರ ನಡವಳಿಕೆಗಳೇ ವಿಪರೀತ ವೈಪರೀತ್ಯದಿಂದ ಕೂಡಿರುತ್ತವೆ. ಅವರ ಕಾಣ್ಕೆ, ನೋಟ, ಚಾರಿತ್ರ್ಯ ಎಲ್ಲವೂ ಇಂದ್ರಿಯ ನಿಯಂತ್ರಿತ. ಕಣ್ಣು ಕಿವಿ ಮೂಗು ನಾಲಗೆ ಚರ್ಮ ಎಂಬ ಪಂಚೇಂದ್ರಿಯಗಳು ಸ್ಪುರಿಸುವ ಸುಖದಿಂದ ನಿರ್ದೇಶಿತವಾದ ಜನರ ವಿಪರೀತದ ನಡವಳಿಕೆಗಳಿಂದಾಗಿ ಲೋಕ ಕಷ್ಟ ಕೋಟಲೆಗೊಳಗಾಗಿದೆ. ಈ ಎಲ್ಲಾ ವಿಪರೀತಗಳ ನಡುವೆಯೂ ಅಚಲನಾಗಿ ಸ್ಥಿರನಾಗಿ ನಿಲ್ಲುವವ ಆ ಗುಹೇಶ್ವರನೊಬ್ಬನೇ. ಉಳಿದವರೆಲ್ಲರೂ ನೋಟದ ಸುಖದ ಸೋಂಕು ತಾಗಿ ನೊಂದ ಬೆಂದ ಮಲಿನವಾದ ಮನದವರು, ಅಬಲರು.

ಪದಪ್ರಯೋಗಾರ್ಥ:
ಇಡೀ ವಚನವನ್ನು “ನೋಟದ ಸುಖ” ಎಂಬ ಅಪರೂಪದ ಪದ ನಿಯಂತ್ರಿಸುತ್ತದೆ.
ಪಂಚೇಂದ್ರಿಯಗಳಲ್ಲಿ ಪ್ರಧಾನವಾದ ಕಣ್ಣನ್ನು ಕೇಂದ್ರಿಕರಿಸಿ ಇಂದ್ರಿಯ ಸುಖಗಳ ಪ್ರಲೋಭನೆಗೆ ಕಣ್ಣೋಟವೇ ಕಾರಣವೆಂದು ಪ್ರತಿಪಾದಿಸುವ ಅಲ್ಲಮನ ದೃಷ್ಟಿಯಲ್ಲಿ “ನೋಟದ ಸುಖ”ವೇ ಲೋಕದ ಜನರ ಸಕಲ ಕಷ್ಟ ಕಾರ್ಪಣ್ಯಗಳಿಗೆ ಮೂಲ ಬೀಜವಾಗಿದೆ.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಲೋಕದ ಚೇಷ್ಟೆಗೆ ರವಿ ಬೀಜವಾದಂತೆ ಕರಣಂಗಳ ಚೇಷ್ಟೆಗೆ ಮನವೇ ಬೀಜ ಎಂಬ ಅಕ್ಕನ ಮಾತಿನಂತೆ ನೋಟದ ಸುಖವೇ ಕರಣಂಗಳ ಚೇಷ್ಟೆಗೆ ಕಾರಣ ಎಂಬ ಅಲ್ಲಮನ ಪದ ಪ್ರಯೋಗ ಈ ವಚನದಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ.

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಚನ ಕಲ್ಯಾಣ | ಮರ್ತ್ಯಲೋಕದ ಮಹಾಮನೆ ಶೂನ್ಯವಾಯಿತ್ತಲ್ಲಾ ಬಸವಣ್ಣಾ…

ಬಸವಣ್ಣಾ, ನೀವು ಮರ್ತ್ಯಕ್ಕೆ ಬಂದು ನಿಂದಡೆ ಭಕ್ತಿಯ ಬೆಳವಿಗೆ ದೆಸೆದೆಸೆಗಲ್ಲಾ ಪಸರಿಸಿತ್ತಲ್ಲಾ!...

ಅವಳ ಕಣ್ಣೋಟ | ‘ಗಾಂಧಾರಿ’: ಕಣ್ಣು ಕಳೆದುಕೊಂಡವಳು, ಕುರುಡಳಂತೆ ನಟಿಸಿದವಳು

ಮಕ್ಕಳ ಕಳ್ಳಸಾಗಣೆಯ ಜಾಲವನ್ನು ಚಿತ್ರದ ಕೇಂದ್ರ ಸಮಸ್ಯೆಯಾಗಿ ಇಟ್ಟಿರುವುದು ಮಹತ್ವದ ಸಂಗತಿ....

ವಚನ ಕಲ್ಯಾಣ | ಭಕ್ತಂಗೆ ಸುಖವೂ ಸರಿ, ದುಃಖವೂ ಸರಿ..

ಭಕ್ತಂಗೆ ಸುಖವೂ ಸರಿ, ದುಃಖವೂ ಸರಿ, ಉರಿ ಸಿರಿ ಉಭಯವೂ ಸರಿ...

ಕಾಲಮಾನ | ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಮನಬಿಲ್ಲು ಮಿಶ್ರಣ- ಒಂದು ಪಕ್ಷಿನೋಟ

ನಮ್ಮ ಸ್ವಾತಂತ್ರ್ಯ ಹೋರಾಟವನ್ನು ʼಕಾಮನಬಿಲ್ಲು ಮಿಶ್ರಣʼ ಎಂದು ಕರೆಯಬಹುದು. ಇದರಲ್ಲಿ ಭಿನ್ನ...