ಈ ದಿನ ಸಂಪಾದಕೀಯ | ‘ಪ್ರಸಾದ ಬೇಡ ಬಸ್ ಬೇಕು’ ಎಂದ ಬಾಲಕಿಯ ಮನವಿಯಲ್ಲಿದೆ ಮಹತ್ವದ ಸಂದೇಶ

Date:

ಸಾಮಾಜಿಕ ನ್ಯಾಯದ ಹರಿಕಾರರರೆಂದೇ ಬಿಂಬಿತವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪ್ರೊ. ನಂಜುಂಡಸ್ವಾಮಿ ಅವರಿಂದ ರಾಜಕೀಯ ದೀಕ್ಷೆ ಪಡೆದವರು. ಅಂಬೇಡ್ಕರ್ ಚಿಂತನೆಯನ್ನು ಅರಿತು ಅರಗಿಸಿಕೊಂಡವರು. ಪುಟ್ಟ ಬಾಲಕಿಯ ‘ತೀರ್ಥ ಪ್ರಸಾದ ಬೇಡ, ಬಸ್ ಬೇಕು’ ಎಂಬ ಮನವಿಯನ್ನು ಅರ್ಥ ಮಾಡಿಕೊಂಡರೆ; ಪ್ರೊಫೆಸರ್  – ಅಂಬೇಡ್ಕರ್ ಕನಸಿದ ನಾಡನ್ನು ಕಟ್ಟಬಹುದು. ಬಡವರ ಬದುಕನ್ನು ಬಂಗಾರವಲ್ಲದಿದ್ದರೂ, ಘನತೆಯಿಂದ ಬದುಕುವಂತೆ ಮಾಡಬಹುದು.

‘ನಮ್ಮ ವ್ಯಾಸಂಗಕ್ಕಾಗಿ ಸಾರಿಗೆ ಬಸ್ ಗಳ ವ್ಯವಸ್ಥೆ ಮಾಡಿ’ ಎಂದು ಬೆಂಗಳೂರು ಹೊರವಲಯದ ತಾವರೆಕೆರೆ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ವಾಸವಿರುವ 8ನೇ ತರಗತಿ ವಿದ್ಯಾರ್ಥಿನಿ ವಿ.ವೈ. ಹರ್ಷಿನ್, ಸಾರಿಗೆ ಇಲಾಖೆಯ ವ್ಯವಸ್ಥಾಪಕರಿಗೆ, ಸಾರಿಗೆ ಸಚಿವರಿಗೆ, ಶಿಕ್ಷಣ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾಳೆ.

- Advertisement -

ಈಕೆಯ ಮನವಿಯಲ್ಲಿ ಇದಷ್ಟೇ ಅಲ್ಲ, ಇನ್ನೊಂದು ಮಹತ್ವದ, ಚಿಂತನೆಗೆ ಅರ್ಹವಾದ ವಿಚಾರವೂ ಅಡಗಿದೆ. ಅದೇನೆಂದರೆ, ‘ಸುಮನಹಳ್ಳಿ ಕಡೆಯಿಂದ ಕಡಬಗೆರೆಯ ರಾಯರ ಕಾಮಧೇನು ದೇವಾಲಯಕ್ಕೆ ಪ್ರತಿ ಗಂಟೆಗೆ ಒಂದರಂತೆ ಬಸ್ ಬಿಡಲಾಗುತ್ತದೆ. ನಮಗೆ ದೇವಸ್ಥಾನದ ತೀರ್ಥ ಪ್ರಸಾದ ಬೇಡ, ನಮಗೆ ಉನ್ನತ ವ್ಯಾಸಂಗಕ್ಕಾಗಿ ಬಸ್‌ಗಳು ಬೇಕಾಗಿವೆ. ಡಾ. ಅಂಬೇಡ್ಕರ್ ಅವರ ಆಶೀರ್ವಾದದಿಂದ ಇಂದಿನ ದಿನಗಳಲ್ಲಿ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷತೆ ಸಿಗುವಂತೆ ಆಗಿದೆ. ಹಾಗಾಗಿ, ಡಾ. ಅಂಬೇಡ್ಕರ್ ಹೆಸರಿನಲ್ಲಿ ಪ್ರತಿ ಜಿಲ್ಲೆ, ತಾಲೂಕು, ಹಳ್ಳಿ ಮಕ್ಕಳಿಗಾಗಿ ವಿಶೇಷ ಬಸ್ ಗಳನ್ನು ಆರಂಭಿಸಬೇಕಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಈ ಪತ್ರ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲವರಾದರೂ ಕಣ್ತೆರೆದು ನೋಡುವಂತೆ ಮಾಡಿದೆ. ಹಾಗೆಯೇ ಪತ್ರ ಗಮನಿಸಿದ ಸಾರಿಗೆ ಅಧಿಕಾರಿಗಳು, ‘ಸುಮನಹಳ್ಳಿಯಿಂದ ನೇರವಾಗಿ ಶ್ರೀನಗರಕ್ಕೆ ಬಸ್ ಇಲ್ಲ, ನಾಯಂಡಹಳ್ಳಿಯಲ್ಲಿ ಬಸ್ ಬದಲಿಸಿ, ಮಾರ್ಕೆಟ್ ಮೂಲಕ ಮತ್ತೊಂದು ರೂಟ್‌ನಲ್ಲಿ ಪ್ರಯಾಣ ಮಾಡಿ’ ಎಂದೆಲ್ಲ ಸಮಜಾಯಿಷಿ ನೀಡಿದ್ದಾರೆ. ಅಲ್ಲಿಗೆ ಅವರ ಕರ್ತವ್ಯ ಮುಗಿದಿದೆ.

ಆದರೆ, ಈ ಪುಟ್ಟ ಬಾಲಕಿ ಮಾಡಿಕೊಂಡಿರುವ ಮನವಿ, ಬಸ್ ವ್ಯವಸ್ಥೆ ಕಲ್ಪಿಸುವುದಕ್ಕೆ ಸಂಬಂಧಿಸಿದ್ದಾದರೂ, ಅದಕ್ಕೂ ಮೀರಿದ ಚಿಂತನೆ ಅದರಲ್ಲಿದೆ ಎಂಬುದು ನಮ್ಮ ಅಧಿಕಾರಶಾಹಿಗೆ ಅರ್ಥವಾದಂತಿಲ್ಲ. ಹೆಣ್ಣುಮಕ್ಕಳು ಧೈರ್ಯವಾಗಿ ತಲೆ ಎತ್ತಿ ಓಡಾಡಲು, ಸರಿ-ತಪ್ಪುಗಳನ್ನು ಅರ್ಥೈಸಿಕೊಳ್ಳಲು, ಆರ್ಥಿಕವಾಗಿ ಸದೃಢರಾಗಲು, ಸ್ವಾವಲಂಬಿಗಳಾಗಿ ಬದುಕಲು ಶಿಕ್ಷಣ ಬಲ ಕೊಡುತ್ತದೆ. ಆರ್ಥಿಕವಾಗಿ ಸದೃಢವಾದ ಕುಟುಂಬಕ್ಕೆ ಸೇರಿದ ಮಕ್ಕಳಿಗೆ ಹೇಗೋ ಶಿಕ್ಷಣ, ಸವಲತ್ತು, ಸುರಕ್ಷತೆ ಸಿಗುತ್ತದೆ. ಆದರೆ ಬಡ ಕುಟುಂಬದಿಂದ ಬಂದ ಮಕ್ಕಳಿಗೆ ಬದುಕೇ ಕಷ್ಟವಾಗಿದೆ. ಅದರಲ್ಲೂ ಗ್ರಾಮೀಣ ಭಾಗದ ಮಕ್ಕಳಿಗೆ ಶಾಲೆಯ ಮೆಟ್ಟಿಲು ಹತ್ತುವುದೇ ಕಡು ಕಷ್ಟದ ಕೆಲಸವಾಗಿದೆ.

8ನೇ ತರಗತಿ ವಿದ್ಯಾರ್ಥಿನಿ ವಿ.ವೈ. ಹರ್ಷಿನ್ ಕೂಡ ಅಂಥದ್ದೇ ಮನೆಯ ಹೆಣ್ಣುಮಗಳು. ಆಕೆಯ ಪೋಷಕರು ಕಷ್ಟದ ಬದುಕಿನಲ್ಲಿಯೂ ಆಕೆಯನ್ನು ಶಾಲೆಗೆ ಕಳುಹಿಸುತ್ತಿರಬಹುದು. ಆಕೆ ತನ್ನ ಕಷ್ಟವನ್ನು ಸಮಾಜದ ಕಷ್ಟವಾಗಿ ನೋಡುವ ಗುಣ ಹೊಂದಿರುವುದರಿಂದ, ಶಾಲಾ ಮಕ್ಕಳ ಕಷ್ಟವನ್ನು ಸಮಾಜದ ಮುಂದಿಟ್ಟಿದ್ದಾಳೆ. ಸರ್ಕಾರದ ಗಮನ ಸೆಳೆದಿದ್ದಾಳೆ.

ಕೊರೋನಾ ನಂತರ ದೇಶದಲ್ಲಿ ಬಡವರ ಸಂಖ್ಯೆ ದ್ವಿಗುಣಗೊಂಡಿದೆ. ಅದಕ್ಕೆ ಪೂರಕವಾಗಿ ಬೆಲೆ ಏರಿಕೆ, ನಿರುದ್ಯೋಗ, ಹಣದುಬ್ಬರ ಬೆನ್ನಿಗೆ ಬಿದ್ದು ಕಾಡುತ್ತಿವೆ. ಶಿಕ್ಷಣ ಎನ್ನುವುದು ವ್ಯಾಪಾರಿ ಸರಕಾಗಿದೆ, ಶಿಕ್ಷಣ ಸಂಸ್ಥೆಗಳು ಹಣ ಮಾಡುವ ಅಂಗಡಿಗಳಾಗಿವೆ, ಶಿಕ್ಷಣ ದುಬಾರಿಯಾಗಿ ಉಳ್ಳವರ ಸ್ವತ್ತಾಗಿದೆ.

ಇಂತಹ ಸ್ಥಿತಿಯಲ್ಲಿ ಬಡವರ ಮಕ್ಕಳು ಶಿಕ್ಷಣ ಕಲಿಯುವುದು ಬಹಳ ಕಷ್ಟವಿದೆ. ಅವರು ಸರ್ಕಾರಿ ಶಾಲೆ-ಕಾಲೇಜನ್ನು ಹಾಗೂ ಸರ್ಕಾರಿ ಸಾರಿಗೆಯನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ಪೈಪೋಟಿಯ ಯುಗದಲ್ಲಿ, ವೇಗೋತ್ಕರ್ಷದ ಕಾಲದಲ್ಲಿ ಮಕ್ಕಳು ಬಸ್ ಹಿಡಿದು ಶಾಲೆಗೆ ಹೋಗುವುದು, ತಿರುಗಿ ಸುರಕ್ಷಿತವಾಗಿ ಮನೆಗೆ ತಲುಪುವುದು- ನೆನಸಿಕೊಂಡರೇ ಮೈ ನಡುಗುತ್ತದೆ.

ರಾಜ್ಯದಲ್ಲಿ 18 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉತ್ತಮ ಮತ್ತು ಗುಣಾತ್ಮಕ ಶಿಕ್ಷಣ ಒದಗಿಸಬೇಕಾದ ಜವಾಬ್ದಾರಿ ಸರ್ಕಾರದ್ದಾಗಿದೆ. ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಕೂಡ ಅನೇಕ ಸವಲತ್ತುಗಳನ್ನು ಒದಗಿಸುತ್ತಿದೆ. ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ, ಚಿಕ್ಕಿ, ಬಾಳೇಹಣ್ಣು, ಹಾಲು, ರಾಗಿ ಮಾಲ್ಟ್, ಸಮವಸ್ತ್ರ, ಸೈಕಲ್, ಲ್ಯಾಪ್ ಟಾಪ್, ವಿದ್ಯಾರ್ಥಿ ವೇತನ, ವಸತಿ ನಿಲಯ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಅದಕ್ಕಾಗಿ ಈ ಬಾರಿಯ 2024-25ರ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅತಿ ಹೆಚ್ಚಿನ ಅನುದಾನ, 44,422 ಕೋಟಿಗಳನ್ನು ಮೀಸಲಿಡಲಾಗಿದೆ. ಆಯವ್ಯಯದಲ್ಲಿ ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚಿನ ಹಣ ನೀಡಿರುವುದು ಅತ್ಯಂತ ಆಶಾದಾಯಕ ಬೆಳವಣಿಗೆಯಾಗಿದೆ. ಆದರೆ ಅದು ಸರಿಯಾದ ಮಾರ್ಗದಲ್ಲಿ ವಿನಿಯೋಗವಾಗುತ್ತಿದೆಯೇ ಎನ್ನುವುದನ್ನು ನೋಡಬೇಕಾಗಿದೆ.

ಹಿಂದೊಮ್ಮೆ ರೈತನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿಯವರು, ‘ನಮ್ಮ ಹಳ್ಳಿ ಜನ ಹೇಗೆ ಬದುಕುತ್ತಿದ್ದಾರೆ ಅನ್ನುವುದು ಕುರ್ಚಿ ಮೇಲೆ ಕೂತವರಿಗೆ ಕಾಣುವುದಿಲ್ಲ. ಅಂಥಾ ಕಷ್ಟದಲ್ಲೂ ಓದುವ ಮಕ್ಕಳಿಗೆ ಹೆಚ್ಚಿನ ಸವಲತ್ತು, ಸಹಕಾರ ನೀಡಬೇಕಿರುವುದು ಸರ್ಕಾರದ ಕರ್ತವ್ಯ’ ಎಂದಿದ್ದರು.

ಸಾಮಾಜಿಕ ನ್ಯಾಯದ ಹರಿಕಾರರರೆಂದೇ ಬಿಂಬಿತವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪ್ರೊ. ನಂಜುಂಡಸ್ವಾಮಿ ಅವರಿಂದ ರಾಜಕೀಯ ದೀಕ್ಷೆ ಪಡೆದವರು. ‘ಶಿಕ್ಷಣ ಎನ್ನುವುದು ಸ್ವಾತಂತ್ರ್ಯವನ್ನು ರಕ್ಷಿಸುವ ಮತ್ತು ಸಮಾಜದಲ್ಲಿ ತುಳಿತಕ್ಕೊಳಗಾದವರನ್ನು ಮೇಲೆತ್ತಲು ಇರುವ ಸಾಧನ’ ಎಂಬ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯನ್ನು ಅರಿತು ಅರಗಿಸಿಕೊಂಡವರು.

ಅಷ್ಟೇ ಅಲ್ಲ, ಗ್ರಾಮೀಣ ಭಾಗದಿಂದ ಬಂದವರು. ಬಡತನದಲ್ಲಿ ಶಿಕ್ಷಣ ಪಡೆದು ಕಷ್ಟವನ್ನು ಕಂಡುಂಡವರು. ಮುಖ್ಯಮಂತ್ರಿಗಳು ಕೊಂಚ ಸಹಾನುಭೂತಿಯಿಂದ ಆ ಪುಟ್ಟ ಬಾಲಕಿಯ ‘ತೀರ್ಥ ಪ್ರಸಾದ ಬೇಡ, ಬಸ್ ಬೇಕು’ ಎಂಬ ಮನವಿಯನ್ನು ಆಲಿಸಿ, ಅರ್ಥ ಮಾಡಿಕೊಂಡರೆ; ಪ್ರೊಫೆಸರ್ ಹಾಗೂ ಅಂಬೇಡ್ಕರ್ ಕನಸಿದ ನಾಡನ್ನು ಕಟ್ಟಬಹುದು. ಬಡವರ ಬದುಕನ್ನು ಬಂಗಾರವಲ್ಲದಿದ್ದರೂ, ಬಡವರು ಘನತೆಯಿಂದ ಬದುಕುವಂತೆ ಮಾಡಬಹುದು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಜನಪೀಡಕ ಕೇಸರಿ ಕೇಡಿಗಳಿಗೆ ಕಡೆಗಾಲ ಬಂದಿದೆ, ಎಚ್ಚರಗೊಳ್ಳುತ್ತಿದೆ ಜನಶಕ್ತಿ!

ಪಾಡ್‌ಕಾಸ್ಟ್‌ ಒಂದರಲ್ಲಿ ಮಾತನಾಡಿದ ಸ್ವತಂತ್ರ ಭಾರದ್ವಾಜ್ ಎಂಬ ವ್ಯಕ್ತಿ ನೀಡಿದ ಹೇಳಿಕೆಯೀಗ...

ಈ ದಿನ ಸಂಪಾದಕೀಯ | ಗುಳೆ ಹೊಸದಲ್ಲ, ಪರ್ಯಾಯ ಹುಡುಕದಿರುವುದು ಸರ್ಕಾರದ ವೈಫಲ್ಯವಲ್ಲವೇ?

ಗುಳೆ ಸಮಸ್ಯೆಯನ್ನು ಕೇವಲ ಕೃಷಿಕರ, ಬಡ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆ...

ಈ ದಿನ ಸಂಪಾದಕೀಯ | GDP ಶೇ.7.8; ಅಸಲಿ ಅಭಿವೃದ್ಧಿ ಯಾರ ಪಾಲಿಗೆ?

ಈ ದೇಶದ GDP ದರ ನಿರೀಕ್ಷೆಗೂ ಮೀರಿ ಶೇ.7.8ರಷ್ಟು ದಾಖಲಾಗಿದ್ದರೆ ಅದು...

ಈ ದಿನ ಸಂಪಾದಕೀಯ | ಸರ್ಕಾರ ಸುರಂಗ ರಸ್ತೆಯತ್ತ; ನಾಗರಿಕರ ಚಿತ್ತ ಪರಿಸರ ಸಂರಕ್ಷಣೆಯತ್ತ

ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಯಾವುದೇ ಪ್ರಜಾಪ್ರಭುತ್ವ...