ಈ ದಿನ ಸಂಪಾದಕೀಯ | ಬರಗಾಲದಲ್ಲೂ ಸರ್ಕಾರ ಸಚಿವರಿಗಾಗಿ ಐಷಾರಾಮಿ ಕಾರು ಕೊಳ್ಳುವ ಅಗತ್ಯವಿತ್ತೇ?

Date:

ಸರ್ಕಾರದ ಪ್ರತಿ ಪೈಸೆಯೂ ಪ್ರಜೆಗಳದ್ದು. ಅದನ್ನು ಬಳಸುವಾಗ ಅತ್ಯಂತ ಜವಾಬ್ದಾರಿಯಿಂದಿರಬೇಕಾಗುತ್ತದೆ; ಜತನದಿಂದ ವೆಚ್ಚ ಮಾಡಬೇಕಾಗುತ್ತದೆ. ಆದರೆ, ಸದ್ಯದ ಪರಿಸ್ಥಿತಿ ನೋಡಿದರೆ, ಅಧಿಕಾರಿಗಳಾಗುವುದೇ, ಸಚಿವರಾಗುವುದೇ ಜನರ ದುಡ್ಡಿನಲ್ಲಿ ಐಷಾರಾಮಿ ಸೌಲಭ್ಯ ಅನುಭವಿಸಲು ಎನ್ನುವಂತಾಗಿದೆ.

ಸಿದ್ದರಾಮಯ್ಯ ಸಂಪುಟದ ಸಚಿವರು ಖುಷಿಯಾಗಿದ್ದಾರೆ. ಯಾಕೆಂದರೆ, ಅವರಿಗೆ ಹೊಚ್ಚ ಹೊಸ ಕಾರುಗಳು ಬಳಕೆಗೆ ಸಿಗಲಿವೆ. ರಾಜ್ಯ ಸರ್ಕಾರವು ತನ್ನ 33 ಸಚಿವರಿಗೆ ಹೊಸ ಕಾರುಗಳನ್ನು ಕೊಳ್ಳಲು 9.9 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಎಲ್ಲ ಸಚಿವರೂ ಟೊಯೋಟಾ ಕಂಪನಿ ಆಗಸ್ಟ್ 29ರಂದು ಬಿಡುಗಡೆ ಮಾಡಿರುವ ಹೈಬ್ರಿಡ್ ಹೈಕ್ರಾಸ್ ಕಾರುಗಳನ್ನು ಪಡೆಯಲಿದ್ದಾರೆ. ಒಂದೊಂದು ಕಾರಿನ ಬೆಲೆ 30 ಲಕ್ಷ ರೂಪಾಯಿಗಳು.

- Advertisement -

ಅಗತ್ಯ ಇರಲಿ, ಇಲ್ಲದಿರಲಿ; ಹೊಸ ಸರ್ಕಾರಗಳು ಬಂದೊಡನೆ ಸಚಿವರಿಗೆ ಹೊಸ ಕಾರುಗಳನ್ನು ಕೊಳ್ಳುವುದು ಒಂದು ಸಂಪ್ರದಾಯವೇ ಆಗಿಬಿಟ್ಟಿದೆ. 2021ರಲ್ಲಿ ಯಡಿಯೂರಪ್ಪನವರು ಸಚಿವರು, ಸಂಸದರಿಗಾಗಿ 60 ಹೊಸ ಕಾರುಗಳನ್ನು ಕೊಳ್ಳಲು ಒಪ್ಪಿಗೆ ನೀಡಿದ್ದರು. ಆಗ ಸರ್ಕಾರದ ಆರ್ಥಿಕ ಸ್ಥಿತಿ ದಯನೀಯವಾಗಿತ್ತು. ಕೊರೋನಾ ಸಾಂಕ್ರಾಮಿಕದ ನಂತರ ರಾಜ್ಯ ಹಣಕಾಸಿನ ಮುಗ್ಗಟ್ಟನ್ನು ಎದುರಿಸುತ್ತಿತ್ತು. ಎಲ್ಲ ವರ್ಗಗಳ ಜನರೂ ಕೈಯಲ್ಲಿ ಹಣವಿಲ್ಲದೇ ಪರದಾಡುತ್ತಿದ್ದರು. ಹಣದ ವಿನಿಮಯ ಬಹುತೇಕ ನಿಂತೇಹೋಗಿತ್ತು. ಜೊತೆಗೆ ಆಗ ಸಚಿವರು ಬಳಸುತ್ತಿದ್ದ ಇನ್ನೋವಾ ಕಾರುಗಳು ಉತ್ತಮ ಸ್ಥಿತಿಯಲ್ಲಿಯೇ ಇದ್ದವು. ಆದರೂ, 38 ಸಚಿವರು, 28 ಸಂಸದರಿಗೆ ಹೊಸ ಕಾರು ನೀಡಲು ಸರ್ಕಾರ ಮುಂದಾಗಿತ್ತು. ಅದಕ್ಕಾಗಿ 13.80 ಕೋಟಿ ರೂಪಾಯಿಗಳನ್ನು ವ್ಯಯಿಸಿತ್ತು. ಆಗಿನ ಮುಖ್ಯಮಂತ್ರಿ ಯಡಿಯೂರಪ್ಪನವರ ಕ್ರಮದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅದಕ್ಕೂ ಮುಂಚೆ, 2020ರಲ್ಲಿ, ರಾಜ್ಯಸಭಾ ಸದಸ್ಯರಾದ ಎಚ್ ಡಿ ದೇವೇಗೌಡ ಅವರಿಗೆ 60 ಲಕ್ಷದ ವೋಲ್ವೋ ಕಾರನ್ನು ಸರ್ಕಾರದಿಂದ ನೀಡಲಾಗಿತ್ತು. ಕಾರು ಕೊಳ್ಳಲು ಇರುವ ಹಣಕಾಸಿನ ಮಿತಿಯ ಎರಡು ಪಟ್ಟು ಮೌಲ್ಯದ ಕಾರನ್ನು ಕೊಂಡು, ಅವರ ಬಳಕೆಗೆ ನೀಡಲಾಗಿತ್ತು. ರಾಜ್ಯದ ಜನಪ್ರತಿನಿಧಿಗಳು ಬಳಸುತ್ತಿರುವ ಅತಿ ದುಬಾರಿ ಕಾರು ಅದಾಗಿತ್ತು.
ಕೇವಲ ಮಂತ್ರಿಗಳಿಗಷ್ಟೇ ಅಲ್ಲ, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೂ ಸರ್ಕಾರಿ ಕಾರುಗಳನ್ನು ಬಳಸುತ್ತಾರೆ. 2022ರ ಆಗಸ್ಟ್‌ನಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರು ಸೇರಿ ವಿವಿಧ ಹಂತಗಳ ಅಧಿಕಾರಿಗಳಿಗೆ ಹೊಸ ಕಾರು ಖರೀದಿಗೆ ಇದ್ದ ಆರ್ಥಿಕ ಮಿತಿಯನ್ನು ಹೆಚ್ಚಿಸಲಾಗಿತ್ತು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮುಂತಾದವರಿಗೆ ವಾಹನ ಖರೀದಿ ಸಾಮರ್ಥ್ಯವನ್ನು ₹14 ಲಕ್ಷದಿಂದ ₹20 ಲಕ್ಷಕ್ಕೆ, ಡಿಸಿ, ಜಿಲ್ಲಾ ಪಂಚಾಯತ್ ಸಿಇಒ, ಎಸ್ಪಿ ಮುಂತಾದವರಿಗೆ ವಾಹನ ಖರೀದಿ ಸಾಮರ್ಥ್ಯವನ್ನು ₹9ರಿಂದ ₹18 ಲಕ್ಷಕ್ಕೆ, ಎಸಿ, ಡಿವೈಎಸ್ಪಿ ಮುಂತಾದವರಿಗೆ ವಾಹನ ಖರೀದಿ ಸಾಮರ್ಥ್ಯವನ್ನು ₹6.50ರಿಂದ ₹12,50 ಲಕ್ಷಕ್ಕೆ ಹೆಚ್ಚಿಸಲಾಗಿತ್ತು.

ಸಚಿವರಿಗೆ ಪದೇ ಪದೆ ಹೊಸ ಕಾರುಗಳು; ಅಧಿಕಾರಿಗಳಿಗೆ ಆಗಿಂದಾಗ್ಗೆ ಹೊಸ ಕಾರುಗಳು. ಆಗಾಗ ಅದರ ಮಿತಿ ಹೆಚ್ಚಳ; ಇದನ್ನು ನೋಡಿ ನಮ್ಮ ಜನರ ಎದೆ ಒಡೆದರೂ ಅಚ್ಚರಿಯೇನಿಲ್ಲ. ಸಚಿವರಿಗೆ, ಅಧಿಕಾರಿಗಳಿಗೆ ಕಾರುಗಳನ್ನು ಕೊಳ್ಳಲು, ಅವುಗಳಿಗೆ ಇಂಧನ, ನಿರ್ವಹಣೆ ವೆಚ್ಚಕ್ಕೆ ವರ್ಷಕ್ಕೆ ಕೋಟ್ಯಂತರ ರೂಪಾಯಿ ಖರ್ಚಾಗುತ್ತಿದೆ. ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಸಚಿವರು, ಅಧಿಕಾರಿಗಳು ಬಳಸುವ ಕಾರುಗಳು, ಅವುಗಳ ನಿರ್ವಹಣೆ ವೆಚ್ಚವೇ ಉಳಿದ ಬಾಬತ್ತುಗಳಿಗಿಂತ ಹೆಚ್ಚಾಗಿರುತ್ತದೆ. ನಿಜವಾದ ಉದ್ದೇಶಕ್ಕೆ ಬಳಕೆಯಾಗುವ, ಜನರಿಗೆ ತಲುಪುವ ಹಣ ಅತ್ಯಲ್ಪ ಮೊತ್ತವಾಗಿರುತ್ತದೆ.

ಸರ್ಕಾರದ ಪ್ರತಿ ಪೈಸೆಯೂ ಪ್ರಜೆಗಳದ್ದು. ಅದನ್ನು ಬಳಸುವಾಗ ಅತ್ಯಂತ ಜವಾಬ್ದಾರಿಯಿಂದಿರಬೇಕಾಗುತ್ತದೆ; ಜತನದಿಂದ ವೆಚ್ಚ ಮಾಡಬೇಕಾಗುತ್ತದೆ. ಆದರೆ, ಸದ್ಯದ ಪರಿಸ್ಥಿತಿ ನೋಡಿದರೆ, ಅಧಿಕಾರಿಗಳಾಗುವುದೇ, ಸಚಿವರಾಗುವುದೇ ಜನರ ದುಡ್ಡಿನಲ್ಲಿ ಐಷಾರಾಮಿ ಸೌಲಭ್ಯ ಅನುಭವಿಸಲು ಎನ್ನುವಂತಾಗಿದೆ. ಎಲ್ಲ ಸರ್ಕಾರಗಳ ಅವಧಿಯಲ್ಲೂ ಇದು ಪುನರಾವರ್ತನೆಯಾಗುತ್ತಿದೆ. ಸಚಿವರಾದ ನಂತರ ಹೊಸ ಕಾರು ಖರೀದಿಸುವುದು, ಅಧಿಕೃತ ನಿವಾಸ ನವೀಕರಿಸುವುದು ದಂಧೆ ಎನ್ನುವಂತಾಗಿಬಿಟ್ಟಿದೆ. ಬಹುತೇಕ ಸಂದರ್ಭಗಳಲ್ಲಿ ಇವು ಅನಗತ್ಯವಾಗಿ ನಡೆಯುತ್ತಿರುತ್ತವೆ.

ರಾಜ್ಯದಲ್ಲಿ ಬರಗಾಲ ಇದೆ. ಮಳೆಯನ್ನೇ ನಂಬಿದ್ದ ರೈತರು ಹೇಗಪ್ಪಾ ಬದುಕು ಎಂದು ಆತಂಕಗೊಂಡಿದ್ದಾರೆ. ಕೆಲವು ಕಡೆಗಳಲ್ಲಂತೂ ಕುಡಿಯುವ ನೀರಿಗೂ ತತ್ವಾರ ಬಂದಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಇದೆ. ಬರ ಪರಿಹಾರಕ್ಕಾಗಿ ಹಣವನ್ನು ಹೊಂದಿಸುವುದು ನಿಜಕ್ಕೂ ಸವಾಲಿನ ಕೆಲಸವಾಗಿದೆ. ಇದರ ಜೊತೆಗೆ ಸಿದ್ದರಾಮಯ್ಯನವರು ಚುನಾವಣೆಯಲ್ಲಿ ಜನರಿಗೆ ನೀಡಿದ್ದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಈಡೇರಿಸಲು ಹರಸಾಹಸ ಪಡುತ್ತಿದ್ದಾರೆ. ಹಲವು ವೆಚ್ಚಗಳಿಗೆ ನಿರ್ಬಂಧ ವಿಧಿಸಿ, ಮತ್ತೊಂದಷ್ಟು ವೆಚ್ಚಗಳಲ್ಲಿ ಕಡಿತ ಮಾಡಿ ಹಣ ಉಳಿತಾಯ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಸರ್ಕಾರದ ಅನೇಕ ಇಲಾಖೆಗಳಲ್ಲಿ ಸಿಬ್ಬಂದಿಗೆ ಸರಿಯಾದ ಸಮಯಕ್ಕೆ ಸಂಬಳ ಕೈಸೇರುತ್ತಿಲ್ಲ. ಇತ್ತೀಚೆಗೆ ಕನಕಪುರದಲ್ಲಿ ಪೌರ ಕಾರ್ಮಿಕರಿಬ್ಬರು ಅವರಿಗೆ ಕೊಡುವ ಅಲ್ಪ ಸಂಬಳವನ್ನೂ ಸತತ 15 ತಿಂಗಳಿನಿಂದ ಕೊಡದೇ ಸತಾಯಿಸಿದ್ದರಿಂದ ರೋಸಿಹೋಗಿ, ಮೈಮೇಲೆ ಮಲ ಸುರಿದುಕೊಳ್ಳುವ ಮೂಲಕ ಪ್ರತಿಭಟನೆ ನಡೆಸಿದ್ದರು. ಇಂಥ ಸ್ಥಿತಿಯಲ್ಲಿ ಸಚಿವರಿಗೆ ಹೊಸ ಐಷಾರಾಮಿ ಕಾರುಗಳ ಅಗತ್ಯವಿತ್ತೇ? ಅದಕ್ಕಾಗಿ ಸರ್ಕಾರ 10 ಕೋಟಿ ರೂಪಾಯಿ ಖರ್ಚು ಮಾಡುವುದು ಬೇಕಿತ್ತೇ?
ಜನರ ಕಷ್ಟಗಳ ಅರಿವಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸ ಕಾರುಗಳನ್ನು ಕೊಳ್ಳಲು ಅನುಮತಿ ನೀಡಿರುವುದು ಖೇದಕರ. ಇದು ಗಂಭೀರವಾದ ವಿಚಾರವಾಗಿದ್ದು, ಈ ಸಂಬಂಧ ಸ್ಪಷ್ಟ ಮಾರ್ಗಸೂಚಿ ರೂಪಿಸಬೇಕಿದೆ. ಸಚಿವರ ಕಾರು ಖರೀದಿ ಸಂಬಂಧ ಕಠಿಣ ನಿಯಮಗಳನ್ನು ಜಾರಿಗೆ ತರಬೇಕಿದೆ. ಯಾವುದೇ ಒಂದು ಕಾರು ಇಂತಿಷ್ಟು ಕಿಮೀ ಓಡಿದ ನಂತರವಷ್ಟೇ ಅವುಗಳ ಜಾಗಕ್ಕೆ ಹೊಸ ಕಾರುಗಳನ್ನು ತರಬೇಕು. ಸರ್ಕಾರಗಳು ಬದಲಾದಾಗಲೆಲ್ಲ ಮತ್ತು ಸಚಿವರ ವೈಯಕ್ತಿಕ ಇಚ್ಛೆ, ಲಾಬಿಗೆ ತಕ್ಕಂತೆ ಕಾರುಗಳನ್ನು ಬದಲಾಯಿಸಬಾರದು.

ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ತಾವು ಮಾಡುವುದನ್ನು ಜನ ಎಚ್ಚರಿಕೆಯಿಂದ ಗಮನಿಸುತ್ತಿರುತ್ತಾರೆ ಎನ್ನುವುದನ್ನು ಅವರು ಮರೆಯಬಾರದು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಐಫೆಲ್ ಟವರ್‌ ಎದುರು ಭಾರತದ ಮಾನ ಕಳೆದ ಧಾರ್ಮಿಕ ಪಿತೃಸತ್ತೆ!

ಒಬ್ಬ ಧರ್ಮಗುರು ತನ್ನ ಕಣ್ಣಿಗೆ ಮಹಿಳೆ ಕಾಣಬಾರದು ಎಂದುಕೊಂಡರೆ ಆತ ತನ್ನ...

ಈ ದಿನ ಸಂಪಾದಕೀಯ | ಮಾರುವುದಿಲ್ಲ ಎಂದು ಮಾರುವ ಮೋದಿ… ಈಗ ಇಸ್ರೋ ಸರದಿ?

ಇಸ್ರೋ ಸಂಸ್ಥೆಯನ್ನು ಭಾರತದ ಸಾರ್ವಜನಿಕ ಹಣದಿಂದ ಕಟ್ಟಲಾಗಿದೆ. ಇಂತಹ ಸದೃಢ ಇಸ್ರೋ...

ಈ ದಿನ ಸಂಪಾದಕೀಯ | ಮೈಮನಗಳನ್ನು ಪೊರಕೆಗಳನ್ನಾಗಿಸಿ ದುಡಿಯುವವರ ಕುರಿತು ಕೃಷ್ಣಭೈರೇಗೌಡರ ಮಾತುಗಳು ಸಂವೇದನಾಹೀನ!

ಬ್ರಾಹ್ಮಣ ಕ್ಷತ್ರಿಯ ವೈಶ್ಯ ಶೂದ್ರ ಹಾಗೂ ಪಂಚಮ ಎಂಬುದಾಗಿ ಮನುಷ್ಯರನ್ನು ಏಣಿಶ್ರೇಣಿಗಳಲ್ಲಿ...

ಈ ದಿನ ಸಂಪಾದಕೀಯ | ತಾಪಮಾನ ಏರಿಕೆಗೆ ಬದುಕಿನ ಬೆಲೆ ತೆರುವವರು ಯಾರು?

ಭೂಮಿಗೆ ನಮ್ಮ ಅಗತ್ಯವಿಲ್ಲ, ನಮಗೆ ಭೂಮಿಯ ಅಗತ್ಯವಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು....